ಕನ್ನಡದ ಹಿರಿಮೆ ಪರಭಾಷಿಕರಿಗೆ ಕಲಿಸುವ ಗುಣ ಕನ್ನಡಿಗರದಾಗಲಿ


Team Udayavani, Nov 2, 2019, 3:00 AM IST

kannadada

ನೆಲಮಂಗಲ: ಶ್ರೀಗಂಧದ ಸುವಾಸನೆ ಹೊಂದಿರುವ ಕರುನಾಡಿನ ಜನರು ಪರಭಾಷಿಕರಿಗೆ ಕನ್ನಡ ಭಾಷೆಯ ಮಹಿಮೆ, ಹಿರಿಮೆಯನ್ನು ಪರಿಚಯಿಸಲು ಮುಂದಾಗಬೇಕು ಎಂದು ಶಾಸಕ ಡಾ.ಕೆ ಶ್ರೀನಿವಾಸಮೂರ್ತಿ ಸಲಹೆ ನೀಡಿದರು. ಪಟ್ಟಣದ ತಾಲೂಕು ಕಚೇರಿ ಅವರಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದ ಸರ್ವ ಶ್ರೇಷ್ಠ ಭಾಷೆಗಳಲ್ಲಿ ಕನ್ನಡ ಭಾಷೆ 8 ಜ್ಞಾನಪೀಠ ಪ್ರಶಸ್ತಿ ಪಡೆಯುವ ಮೂಲಕ ಅತ್ಯುತ್ತಮ ಸ್ಥಾನ ಪಡೆದುಕೊಂಡಿದೆ , ರಾಜ್ಯದಲ್ಲಿ ಪ್ರಮುಖ ನಗರಗಳಲ್ಲಿ ಶೇಕಡಾ 70ರಷ್ಟು ಜನರು ಬೇರೆ ರಾಜ್ಯ ಹಾಗೂ ದೇಶದ ಜನರಿದ್ದಾರೆ, ಅವರಿಗೆ ಕನ್ನಡದ ಹಿರಿಮೆಯನ್ನು ತಿಳಿಸಲು ನಾವೆಲ್ಲರು ಮುಂದಾಗಬೇಕು ಎಂದರು.

ತಹಸೀಲ್ದಾರ್‌ ಶ್ರೀನಿವಾಸಯ್ಯ ಮಾತನಾಡಿ ಎಲ್ಲರೂ ಕನ್ನಡ ಕಲಿಯುವ ಮೂಲಕ ನಮ್ಮ ಮಾತೃಭಾಷೆಯ ಉಳಿವಿಗೆ ನಾವೆಲ್ಲರೂ ಶ್ರಮಿಸಬೇಕು, ನಮ್ಮ ನಾಡು,ನುಡಿ ರಕ್ಷಣೆಗೆ ಪ್ರತಿಯೊಬ್ಬರು ನಿಸ್ವಾರ್ಥ ಸೇವೆ ಸಲ್ಲಿಸ‌ಬೇಕು, ಕರುನಾಡಿನ ಇತಿಹಾಸ ದೇಶದ ಅಭಿವೃದ್ಧಿಗೆ ಅನುಕೂಲವಾಗಿದೆ ಎಂದರು.

ಪ್ರಶಸ್ತಿ ಪುರಸ್ಕೃತರು: ತಾಲೂಕಿನ ರಾಜ್ಯೋತ್ಸವ ಸಮಾರಂಭದಲ್ಲಿ ಕಲಾರಂಗ ಸಮಾಜ ಸೇವೆಯಲ್ಲಿ ಪೂಜಗಯ್ಯ, ಸಮಾಜ ಸೇವೆಯಲ್ಲಿ ರವಿ, ಅಪ್ರೋಜ್‌ ಪಾಷ್‌, ರಮೇಶ್‌ ಹಾಗೂ ಶಿಕ್ಷಣ ಹಾಗೂ ಸಾಹಿತ್ಯದಲ್ಲಿ ಮಲ್ಲಿಕಾರ್ಜುನಯ್ಯಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಉದ್ಘಾಟನೆಗೆ ಸೀಮಿತ: ತಾಲೂಕು ಆಡಳಿತದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ಮಾಡಿದ ಶಾಸಕರು ಕಾರ್ಯಕ್ರಮ ಉದ್ಘಾಟಿಸಿ ಸನ್ಮಾನಿಸಿ ಸಮಾರಂಭದಿಂದ ನಿರ್ಗಮಿಸಿದರು. ಅವರ ಜೊತೆ ಕನ್ನಡಪರ ಹೋರಾಟಗಾರರು, ಮುಖಂಡರು, ಕೆಲವು ಅಧಿಕಾರಿಗಳು, ಸಂಘಸಂಸ್ಥೆಯ ಕಾರ್ಯಕರ್ತರು ಶಾಸಕರ ಜೊತೆ ಹೆಜ್ಜೆ ಹಾಕಿದರು. ರಾಜ್ಯೋತ್ಸವದ ಬಗ್ಗೆ ಉಪನ್ಯಾಸ ಮಾಡುವಾಗ ವೇದಿಕೆಯಲ್ಲಿ ಇಬ್ಬರು ಅಧಿಕಾರಿಗಳ ಉಪಸ್ಥಿತಿಯಿತು,

ಇನ್ನೂ ಸಾಂಸ್ಕೃತಿಕ ಕಾರ್ಯಕ್ರಮವಿಲ್ಲ, ಮುಖ್ಯಅತಿಥಿಗಳು, ಆಹ್ವಾನಿತರು ಮಾತನಾಡಲು ಅವಕಾಶವಿಲ್ಲ, ಉಪನ್ಯಾಸ ಅಧ್ಯಕ್ಷರ ಭಾಷಣದ ನಂತರ 5 ನಿಮಿಷಕ್ಕೆ ಅಂತ್ಯಗೊಳಿಸಿದರು. ಮಾಡಲೇ ಬೇಕಾದ ಕಾರಣಕ್ಕೆ ರಾಜ್ಯೋತ್ಸವ ಮಾಡಿದಂತಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂತು.

ಜನ‌ಪ್ರತಿನಿಧಿಗಳ ಗೈರು: ತಾಲೂಕು ಆಡಳಿತದಿಂದ ನಡೆಸಿದ ಸಮಾರಂಭದ ಆಹ್ವಾನ ಪತ್ರಿಕೆಯಲ್ಲಿ ಪ್ರಕಟವಾದ ಜನಪ್ರತಿನಿಧಿಗಳಲ್ಲಿ ಶಾಸಕರು ಬಿಟ್ಟರೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ,ಎನ್‌ಡಿಎ, ಸೇರಿದಂತೆ ಯಾವ ಜನಪ್ರತಿನಿಧಿಗಳು ಹಾಜರಾಗದೆ ಗೈರಾಗಿದ್ದರು.ಇನ್ನೂ ಸ್ಥಾಯಿ ಸಮಿತಿ ಅಧ್ಯಕ್ಷರ ಹೆಸರು ಆಹ್ವಾನ ಪತ್ರಿಕೆಯಲ್ಲಿ ಹಾಕದ ವಿಚಾರದಲ್ಲಿ ಶಾಸಕರ ಎದುರು ರಂಗನಾಥ್‌ ಬೇಸರ ವ್ಯಕ್ತಪಡಿಸದರು.

ಸಂದರ್ಭದಲ್ಲಿ ಬಿಇಓ ರಮೇಶ್‌ ಕೆಸಿ, ಡಿವೈಎಸ್ಪಿ ಮೋಹನ್‌ಕುಮಾರ್‌, ಮುಖ್ಯಾಧಿಕಾರಿ ಶಿವಪ್ರಸಾದ್‌, ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಲಕ್ಷ್ಮೀನಾರಾಯಣಸ್ವಾಮಿ, ಸ್ಥಾಯಿ ಸಮಿತಿ ಅಧ್ಯಕ್ಷ ರಂಗನಾಥ್‌,ಸಹಪ್ರಾಧ್ಯಾಪಕ ಜಿ.ಗಂಗರಾಜು , ಕನ್ನಡ ಪರ ಸಂಘಟನೆಯ ನರಸಿಂಹಯ್ಯ, ಉಮೇಶ್‌ ಗೌಡ್ರು ಮತ್ತಿತರರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.