ವಿದ್ಯುತ್‌ ಖಾಸಗೀಕರಣಕ್ಕೆ ಬೆಸ್ಕಾಂ ನೌಕರರ ವಿರೋಧ


Team Udayavani, Oct 6, 2020, 12:33 PM IST

ವಿದ್ಯುತ್‌ ಖಾಸಗೀಕರಣಕ್ಕೆ ಬೆಸ್ಕಾಂ ನೌಕರರ  ವಿರೋಧ

ದೊಡ್ಡಬಳ್ಳಾಪುರ: ವಿದ್ಯುತ್‌ ವಲಯದಲ್ಲಿ ಖಾಸಗೀಕರಣ ವಿರೋಧಿಸಿ ಕರ್ನಾಟಕ ವಿದ್ಯುತ್‌ ಸರಬರಾಜು ಕಂಪನಿಗಳ ‌ ಗುತ್ತಿಗೆ ನೌಕರರ ಸಂಘದ ಸದಸ್ಯರು ಸೋಮವಾರ ಕಪ್ಪುಪಟ್ಟಿ ಧರಿಸಿ ಬೆಸ್ಕಾಂ ಕಚೇರಿ ಮುಂದೆ ಸಾಂಕೇಕವಾಗಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ, ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎಚ್‌.ಮುತ್ತುರಾಜ್, ಕಾರ್ಯದರ್ಶಿ ರಘುನಂದನ್‌, ಚಿಕ್ಕಪ್ಪ, ನಗರ ವಿಭಾಗದ ಕಾರ್ಯಪಾಲಕ ‌ ಎಂಜಿನಿಯರ್‌ ಎನ್‌.ರೋಹಿತ್‌, ಗ್ರಾಮೀಣ ಭಾಗದ ಎಂಜಿನಿಯರ್‌ ಸಿ.ಮೋಹನ್‌, ಕೇಂದ್ರ ಸರ್ಕಾರ ವಿದ್ಯುತ್‌ ಕಂಪನಿಗಳನ್ನು ಖಾಸಗೀ ಕರಣ ಮಾಡುತ್ತಿರುವುದು ನೌಕರರ ಸೇವಾ ಭದ್ರತೆಗೆ ಅಪಾಯ ಎದುರಾಗಲಿದೆ. ಸರ್ಕಾರಿ ಸ್ವಾಮ್ಯದಲ್ಲಿದ್ದ ಕಂಪನಿಗಳು ಖಾಸಗೀಕರಣಗೊಂಡ ನಂತರ ಅಲ್ಲಿನ ನೌಕರರ ಸೇವಾ ಭದ್ರತೆ ಯಾವ ಮಟ್ಟಕ್ಕೆ ತಲುಪಿದೆ ಎನ್ನುವುದು ಈಗಾಗೇ ಸಾಬೀತಾಗಿದೆ ಎಂದು ಹೇಳಿದರು.

ಕರ್ನಾಟಕ ಸರ್ಕಾರವೂ ಸೇರಿದಂತೆ ಹಲವು ರಾಜ್ಯಗಳು ಈ ಕಾಯ್ದೆ ವಿರೋಧ ವ್ಯಕ ¤ಪಡಿಸಿದ್ದವು. ಆದರೆ ಕೇಂದ್ರ ಸರ್ಕಾರ ವಿದ್ಯುತ್‌ ಕಾಯ್ದೆಗೆ ತಿದ್ದುಪಡಿ ತರದೆ, ವಿದ್ಯುತ್‌ ವಿತರಣಾ ಕಂಪೆನಿಗಳನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ. ವಿದ್ಯುತ್‌ ವಿತರಣೆ ಖಾಸಗೀಕರಣನಿಂದ ಸರ್ಕಾರ ನೀಡುತ್ತಿರುವ ಸಾಮಾಜಿಕ ಕಾರ್ಯ ಕ್ರಮಗಳಾದ ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಉಚಿತ ವಿದ್ಯುತ್‌ ಮತ್ತು ರಿಯಾಯಿತಿಗಳು ರದ್ದಾಗಲಿವೆ. ಹೋರಾಟಕ್ಕೆ ನಮ್ಮ ರಾಜ್ಯ ನೌಕರರು ಸಹಮತ‌ ಸೂಚಿಸಿ ಬೆಂಬಲ ಸೂಚಿಸಿದ್ದಾರೆ.  ಈ ನಿಟ್ಟಿನಲ್ಲಿ ಕೆಲಸಕ್ಕೆ ಹಾಜರಾಗಿ ಕಪ್ಪು ಪಟ್ಟಿ ಧರಿಸಿ ಖಾಸಗೀಕರಣಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ ಎಂದರು. ಪ್ರತಿಭಟನೆಯಲ್ಲಿ ಉಪವಿಭಾಗದ ಎಲ್ಲಾ ಕಾರ್ಯ ಮತ್ತು ಪಾಲನಾ ಘಟಕದ ಅಧಿಕಾರಿಗಳು, ನೌಕರರು, ಮಾಪಕ ಓದುಗರು ಹಾಗೂ ಗ್ರಾಮ ವಿದ್ಯುತ್‌ ಪ್ರತಿನಿಧಿಗಳು ಭಾಗವಹಿಸಿದ್ದರು.

ರಿಯಾಯಿತಿ ದರದಲ್ಲಿ ವಿದ್ಯುತ್‌ ಸಿಗಲ್ಲ : ಮುನಿಆಂಜಿನಪ್ಪ :

ನೆಲಮಂಗಲ: ವಿದ್ಯುತ್‌ಖಾಸಗೀಕರಣದಿಂದ ಗ್ರಾಹಕರು ಹಾಗೂ ನೌಕರರಿಗೆ ಸಮಸ್ಯೆಯಾಗುತ್ತದೆ ಎಂದು ಕರ್ನಾಟಕ ವಿದ್ಯುತ್‌ ಪ್ರಸರಣಾ ನಿಗಮ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಮುನಿಆಂಜಿ ನಪ್ಪ ಹೇಳಿದ್ದಾರೆ.

ನಗರದ ಕೆಇಒ ಕಚೇರಿ ಆವರಣದಲ್ಲಿ ಕರ್ನಾಟಕ ವಿದ್ಯುತ್‌ ಪ್ರಸರಣಾ ನಿಗಮ ಹಾಗೂ ಬೆಸ್ಕಾಂ ನೌಕರರುಕೈಗೊಂಡ ಪ್ರತಿಭಟನೆಯಲ್ಲಿ ಮಾತನಾಡಿದರು. ರಾಜ್ಯ ಸರಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ಮಾಡಿದರು.

ಖಾಸಗೀಕರಣದಿಂದ ಕಂಪನಿಯವರು ಹೇಳುವ ಬೆಲೆ ನೀಡುವ ಅನಿವಾರ್ಯತೆ ಎದುರಾಗಲಿದ್ದು, ಈಗ ಕೆಲಸ ನಿರ್ವಹಿಸುವ ಸಾವಿರಾರು ನೌಕರರು ಉದ್ಯೋಗ ಕಳೆದುಕೊಳ್ಳಲಿದ್ದಾರೆ. ರಾಜ್ಯದಲ್ಲಿ ಉತ್ತಮವಾಗಿ ವಿದ್ಯುತ್‌ ಪ್ರಸರಣಾ ವ್ಯವಸ್ಥೆ ಇದ್ದು, ಭಾಗ್ಯ ಜ್ಯೋತಿ, ರೈತರ ಕೊಳವೆ ಭಾವಿ ಸೇರಿದಂತೆ ವಿವಿಧ ಯೋಜನೆಗಳಲ್ಲಿ ನೀಡುವ ರಿಯಾಯಿತಿ ಹಣವನ್ನು ಸರಕಾರ ತಡವಾಗಿ ನೀಡಿದರೂ ವಿದ್ಯುತ್‌ ಸರಬರಾಜು ಮಾಡಲಾಗುತಿದೆ.ಖಾಸಗೀಕರಣ ಮಾಡಿದರೆ

ಶ್ರೀಮಂತರಿಗೂ, ಬಡವರಿಗೂ ವ್ಯತ್ಯಾಸವಿಲ್ಲದಂತೆ ಮಾಡುವ ಈ ಕಾಯ್ದೆಯಿಂದ ನೌಕರರಿಗೆ ಮತ್ತು ಗ್ರಾಹಕರಿಗೆ ಸಮಸ್ಯೆ ಎದುರಾಗಲಿದೆ. ಸಹಾಯಕ ಅಭಿಯಂತರರ ಕೇಂದ್ರ ಕಾರ್ಯಕಾರಣಿ ಸಮಿತಿ ಸದಸ್ಯ ಹೇಮಂತ್‌.ಎಲ್‌ ಮಾತನಾಡಿ, ಎಲ್ಲಾ ಸಂಘಟನೆಗಳು, ನೌಕರರ ಅಭಿಪ್ರಾಯ ಸಂಗ್ರಹಿಸಿ ಕಾಯ್ದೆ ರೂಪಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರಹೋರಾಟ ಮಾಡಲಾಗುತ್ತದೆ. ದೇಶದ ವಿವಿಧ ರಾಜ್ಯಗಳಲ್ಲಿ ವಿದ್ಯುತ್‌ ಖಾಸಗೀಕರಣ ಮಾಡಿದ ಪರಿಣಾಮ ಗ್ರಾಹಕರಿಗೆ ಸಮಸ್ಯೆಯಾಗಿದೆ ಎಂದರು.

ಈ ವೇಳೆ ಕರ್ನಾಟಕ ವಿದ್ಯುತ್‌ ಪ್ರಸರಣಾ ಮಂಡಳಿ ಸ್ಥಳೀಯ ಸಮಿತಿ ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ಕೃಷ್ಣಮೂರ್ತಿ, ಎಇಇ ನಾಗರಾಜು ಹೆಚ್‌ಪಿ, ಡಿಪ್ಲೋಮಾ ಜೂನಿಯರ್‌ ಅಸೋಶಿಯ ಶನ್‌ ಕೇಂದ್ರ ಕಾರ್ಯಕಾರಣಿ ಸಮಿತಿ ಸದಸ್ಯ ಸುರೇಶ್‌, ಲೆಕ್ಕಾಧಿಕಾರಿಗಳ ಸಂಘದ ಶ್ರೀಕಾಂತ್‌, ಎಸ್ಸಿ ಎಸ್ಟಿ ನೌಕರರ ಸಂಘದ ಶ್ರೀನಿವಾಸ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.