ಸಾರ್ವತಿಕ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ನಡೆಸಿ


Team Udayavani, Apr 16, 2022, 1:16 PM IST

Untitled-1

ಹೊಸಕೋಟೆ: ಕಮಿಷನ್‌ ದಂಧೆ ವಿಚಾರ ಎಲ್ಲಾ ಸರ್ಕಾರದಲ್ಲೂ ನಡೆದುಕೊಂಡು ಬಂದಿದೆ. ಇದರಲ್ಲಿ ಯಾರೂ ಸತ್ಯಹರಿಶ್ಚಂದ್ರರಲ್ಲ, ಆದರೆ, ಶೇ.40ರಷ್ಟು ಅನ್ನೋದು ಮಾತ್ರ ಶುದ್ಧ ಸುಳ್ಳು ಎಂದು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್‌ ತಿರುಗೇಟು ನೀಡಿದರು.

ಹೊಸಕೋಟೆ ಪಟ್ಟಣದ ಕನಕಭವನದಲ್ಲಿ ಹಮ್ಮಿಕೊಂಡಿದ್ದ ಹೊಸಕೋಟೆ ತಾಲೂಕು ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿ, ಎಲ್ಲ ಸರ್ಕಾರದಲ್ಲೂ ಪರ್ಸೆಂಟೆಜ್‌ ವಿಚಾರ ನಡೆಯುತ್ತದೆ. ಆದರೆ, ಒಬ್ಬ ಮಂತ್ರಿ ಶೇ. 40ರಷ್ಟು ಕಮಿಷನ್‌ ತೆಗೆದುಕೊಳ್ಳಲು ಸಾಧ್ಯವಿಲ್ಲ. ಮಂತ್ರಿ ಇಷ್ಟು ಪಡೆದರೆ ಗುತ್ತಿಗೆದಾರರು ಕೆಲಸ ಮಾಡಲು ಸಾಧ್ಯವಾಗುತ್ತದೆಯೇ ಎಂಬುದನ್ನು ಮೊದಲು ಅರಿತು, ನಂತರ ಆರೋಪ ಮಾಡಬೇಕು ಎಂದರು.

ಈಶ್ವರಪ್ಪ ಅವರು ಈಗಾಗಲೇ ಪಕ್ಷದ ವರಿಷ್ಠರ ಮಾತಿಗೆ ಬೆಲೆ ಕೊಟ್ಟು ರಾಜೀನಾಮೆ ನೀಡಿದ್ದಾರೆ. ಈಗಾಗಲೇ ತನಿಖಾ ತಂಡದಿಂದ ತನಿಖೆ ನಡೆಯುತ್ತಿದ್ದು, ಸತ್ಯಾಂಶ ಹೊರ ಬಂದ ನಂತರ ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ಎಫ್‌ಐಆರ್‌ ದಾಖಲಾಗಿದೆ. ತನಿಖೆ ತಂಡದಿಂದ ತನಿಖೆ ಸಹ ನಡೆಯುತ್ತಿದ್ದು, ನಂತರ ಬಂಧಿಸುವುದು ಅಥವಾ ಬಿಡುವುದು ತನಿಖಾ ತಂಡಕ್ಕೆ ಬಿಟ್ಟಿದ್ದು ಎಂದರು.

ಕಾರ್ಯಕಾರಣಿ ಸಭೆ: ಏ.22ರಂದು ಕೇಂದ್ರ ಸಚಿವ ಅರುಣ್‌ ಸಿಂಗ್‌, ಜೆಪಿನಡ್ಡಾ, ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸೇರಿ ಪಕ್ಷದ ನಾಯಕರ ಸಮ್ಮುಖದಲ್ಲಿ ದೇವನಹಳ್ಳಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾರ್ಯಕಾರಣಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಗ್ರಾಮಾಂತರ ಭಾಗದ ಬಿಜೆಪಿ ಪಕ್ಷದ ಬಲವನ್ನು ತೋರಿಸಬೇಕು. ಕಳೆದ 8 ವರ್ಷದಿಂದ ನಮ್ಮ ಬಿಜೆಪಿ ಸರ್ಕಾರ ಹಾಗೂ ಮೋದಿ ಅವರ ಆಡಳಿತದಿಂದ ಜನ ಸಾಮಾನ್ಯರಿಗೆ ದೊರೆತ ಕಾರ್ಯಕ್ರಮಗಳ ಬಗ್ಗೆ ಮನೆ ಮನೆಗೆ ತೆರಳಿ ತಿಳಿಸಬೇಕು ಎಂದರು.

ಭಾನುವಾರ ಹೊಸಕೋಟೆ ಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಶ್ರೀ ಹನುಮಾನ ಬೃಹತ್‌ ಮೂರ್ತಿ ಶೋಭಾಯಾತ್ರೆ ನಡೆಯಲಿದ್ದು, ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಶೋಭಾಯಾತ್ರೆಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಉತ್ತಮ ಆಡಳಿತ ನೀಡುತ್ತಿದೆ: ಬಿಬಿಎಂಪಿ ಮಾಜಿ ಸದಸ ಎಂಟಿಬಿ ರಾಜೇಶ್‌ ಮಾತನಾಡಿ, ಎಂಟಿಬಿ ನಾಗರಾಜ್‌ ಅವರಿಂದ ಈ ಭಾಗದಲ್ಲಿ ಬಿಜೆಪಿ ಪಕ್ಷ ಬಲವರ್ಧನೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣದಲ್ಲಿ ಮೊದಲ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯುತ್ತಿದ್ದು, ದೇವನಹಳ್ಳಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ 5 ಸಾವಿರಕ್ಕೂ ಅಧಿಕ ಮಂದಿ ಈ ಕ್ಷೇತ್ರದಿಂದ ಭಾಗವಹಿಸಬೇಕು. ಕಳೆದ 8 ವರ್ಷಗಳಿಂದ ಜನ ಸಾಮಾನ್ಯರು ಬಿಜೆಪಿ ಪಕ್ಷಕ್ಕೆ ಅಧಿಕಾರ ನೀಡಿದ್ದು, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಲ್ಲಿ ಮೋದಿ ಸರ್ಕಾರ ಹಾಗೂ ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ ಎಂದರು.

ಸೇವೆ ಮಾಡಲು ಸಿದ್ಧ: ಕಾರ್ಯಕರ್ತರ ಎಲ್ಲ ಕುಂದುಕೊರತೆಗಳಿಗೆ ಸ್ಪಂದಿಸಲು ಸದಾ ಸಿದ್ಧರಿರುವ ನಮ್ಮ ನಾಯಕರು ಯಾವ ಸಮಯದಲ್ಲಾದರೂ ತಮ್ಮ ಸೇವೆ ಮಾಡಲು ಸಿದ್ಧ ಎಂದರು. ಬೆಂಗಳೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ಎ.ವಿ. ನಾರಾಯಣ ಸ್ವಾಮಿ, ಸಂಘಟನಾ ಕಾರ್ಯದರ್ಶಿ ಕಾಂತರಾಜು, ನಗರಸಭೆ ಅಧ್ಯಕ್ಷ ಡಿ.ಕೆ ನಾಗರಾಜ್‌, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಂಕರೇಗೌಡ, ಬಿಜೆಪಿ ಅಧ್ಯಕ್ಷ ಕೆ. ಸತೀಶ್‌, ಸಿ.ನಾಗರಾಜ್‌, ಬಿ.ಎಂ. ನಾರಾಯಣ ಸ್ವಾಮಿ, ಟೌನ್‌ ಬ್ಯಾಂಕ್‌ ಅಧ್ಯಕ್ಷ ಬಾಲಚಂದ್ರನ್‌, ಸುಜಾತಾ, ಅನುರೆಡ್ಡಿ, ರಾಜಶೇಖರ್‌, ಸುಗುಣಾ ಮೋಹನ್‌ ಇತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.