ಬಜೆಟ್‌ ಮಿಶ್ರ ಪ್ರತಿಕ್ರಿಯೆ: ನೇಕಾರರಿಗೆ ಕೊಂಚ ಸಮಾಧಾನ


Team Udayavani, Jul 8, 2023, 2:00 PM IST

ಬಜೆಟ್‌ ಮಿಶ್ರ ಪ್ರತಿಕ್ರಿಯೆ: ನೇಕಾರರಿಗೆ ಕೊಂಚ ಸಮಾಧಾನ

ದೊಡ್ಡಬಳ್ಳಾಪುರ: ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ 2023-24ನೇ ಸಾಲಿನ ನೂತನ ಸರ್ಕಾರದ ಚೊಚ್ಚಲ ಬಜೆಟ್‌ನಲ್ಲಿ ತಾಲೂಕಿನ ಜನರು ಇಟ್ಟಿದ್ದ ನಿರೀಕ್ಷೆ ಗಳು ಈಡೇರದೇ ಬಜೆಟ್‌ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ದೊಡ್ಡಬಳ್ಳಾಪುರದ ಜೀವನಾಡಿಯಾದ ನೇಯ್ಗೆ ಉದ್ಯಮ ಸಂಕಷ್ಟದ ಲ್ಲಿದ್ದು ಕೈಮಗ್ಗ ನೇಕಾರರಿಗಿರುವ ನೇಕಾರ ಸಮ್ಮಾನ್‌ ಯೋಜನೆಯನ್ನು ವಿದ್ಯುತ್‌ ಮಗ್ಗಗಳ ನೇಕಾರರಿಗೂ ವಿಸ್ತರಿಸಿದರೆ ಮಾತ್ರ ವಾರ್ಷಿಕ 5 ಸಾವಿರ ನೆರವು ಸಿಗಲಿದೆ.

ಮಗ್ಗಗಳ ಮತ್ತು ಮಗ್ಗ ಪೂರ್ವ ಘಟಕಗಳಿಗೆ 10 ಎಚ್‌. ಪಿವರೆಗೆ ಮಾಸಿಕ ಗರಿಷ್ಠ 250 ಯೂನಿಟ್‌ಗಳ ವರೆಗೆ ಉಚಿತ ವಿದ್ಯುತ್‌ ಯೋಜನೆ ನೇಕಾರರಿಗೆ ನೆರ ವಾಗಲಿದೆ. ಆದರೆ, ಚುನಾವಣಾ ವೇಳೆ ನೇಕಾರರಿಗೆ 20 ಎಚ್‌.ಪಿವರೆಗೆ ಉಚಿತ ವಿದ್ಯುತ್‌ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದರು. ರಾಜ್ಯದ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕ್‌ಗಳ ಮೂಲಕ ನೇಕಾರರು ಪಡೆ ಯುವ ಸಾಲದ ಮೇಲೆ ಶೇ.8ರಷ್ಟು ಬಡ್ಡಿ ಸಹಾಯಧನ ಸೌಲಭ್ಯ. ನೇಕಾರರ ಮಕ್ಕಳ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ಯೋಜನೆ ಬಿಟ್ಟರೆ ನೇಯ್ಗೆ ಉದ್ಯಮವನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಯಾವುದೇ ಯೋಜನೆ ಇಲ್ಲ. ಕೈಗಾರಿಕಾ ವಸಾಹತು ವಸತಿ ಸಮುತ್ಛಯ, ಸಮುದಾಯ ಭವನ ನಿರ್ಮಾಣ, ಜವಳಿ ಹಾಗೂ ಸಿದ್ಧ ಉಡುಪು ವಲಯದ ಅಭಿವೃದ್ಧಿಗಾಗಿ ಹೊಸ ಜವಳಿ ನೀತಿಗಾಗಿ ಬಜೆಟ್‌ನಲ್ಲಿ ಮೀಸಲಿಡುವಂತೆ ನೇಕಾರರು ಒತ್ತಾಯಿಸಿದ್ದಾರೆ. ಮುಖ್ಯವಾಗಿ ನೇಕಾರರಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕಿತ್ತು ಎನ್ನುತ್ತಾರೆ ನೇಕಾರರು.

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಆಸ್ಪತ್ರೆ ಸ್ಥಾಪಿಸಲು ಯಾವುದೇ ಅನುಮೋದನೆ ಇಲ್ಲ. ವೈದ್ಯ ಕೀಯ ಮಹಾವಿದ್ಯಾಲಯಗಳ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೀರು ಣಿಸುವ ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ ನೀಡಿದ್ದು ಬಿಟ್ಟರೆ, ವೃಷಭಾವತಿ ಕಣಿವೆಯಿಂದ ತ್ಯಾಜ್ಯ ಶುದ್ಧೀಕರಿಸಿದ ನೀರನ್ನು ತಾಲೂಕಿನ 90 ಕೆರೆಗಳಿಗೆ ತುಂಬಿಸುವ ಯೋಜನೆಗೆ ಅನುಮೋದನೆ ದೊರೆತಿಲ್ಲ. ಶಾಶ್ವತ ನೀರಾವರಿ ಯೋಜನೆಗೆ ಆದ್ಯತೆ ನೀಡಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡಬೆಳವಂಗಲ ಮತ್ತು ಮಧುರೆ ಹೋಬಳಿಗಳಿಗೆ ಪದವಿ ಕಾಲೇಜು ಹಾಗೂ ಸಾಸಲು ಹೋಬಳಿಗೆ ಪದವಿ ಪೂರ್ವ ಕಾಲೇಜು ಮಂಜೂರಾಗಿಲ್ಲ. ಬೆಳೆಯುತ್ತಿರುವ ತಾಲೂಕಿಗೆ ಮೂಲ ಸೌಕರ್ಯಗಳ ಕೊರತೆ ಯಿದ್ದು, ಹೆಚ್ಚಿನ ಅನುದಾನ ದೊರೆಯಬೇಕಿತ್ತು ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.