ಪುತ್ರಿ ಹುಟ್ಟುಹಬ್ಬಕ್ಕೆ ಶಾಲಾ ಕೊಠಡಿ ನಿರ್ಮಿಸಿ ಮಾದರಿ


Team Udayavani, Aug 14, 2022, 3:03 PM IST

ಪುತ್ರಿ ಹುಟ್ಟುಹಬ್ಬಕ್ಕೆ ಶಾಲಾ ಕೊಠಡಿ ನಿರ್ಮಿಸಿ ಮಾದರಿ

ನೆಲಮಂಗಲ: ಮಕ್ಕಳ ಹುಟ್ಟುಹಬ್ಬಕ್ಕೆ ಕೇಕ್‌ ಕತ್ತರಿಸಿ ಸಂಭ್ರಮಿಸುವ ಪೋಷಕರ ನಡುವೆ, ತಾಲೂಕಿನ ತೊರೆಕೆಂಪಹಳ್ಳಿ ಗ್ರಾಮದ ಹರೀಶ್‌ 40 ಲಕ್ಷ ರೂ. ವೆಚ್ಚದಲ್ಲಿ ಸರ್ಕಾರಿ ಶಾಲೆಯ ಕಟ್ಟಡ ನಿರ್ಮಾಣ ಮಾಡಿ ಪೋಷಕರ ಸ್ಮರಣಾರ್ಥ ಮಗಳ ಜನುಮದಿ ನದಂದು ಸರ್ಕಾರಕ್ಕೆ ನೂತನ ಕಟ್ಟಡ ಹಸ್ತಾಂತರಿಸಿಮಾದರಿಯಾಗಿದ್ದಾರೆ.

ತಾಲೂಕಿನ ತೊರೆಕೆಂಪಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸರ್ಕಾರಿ ಶಾಲಾ ಕಟ್ಟಡವನ್ನು ಬಸವನಹಳ್ಳಿ ಶಿವಾನಂದ ಆಶ್ರಮದ ಶ್ರೀ ರಮಾಣಾನಂದ ಸ್ವಾಮೀಜಿ ಉದ್ಘಾಟನೆ ಮಾಡಿದರು. ಈ ವೇಳೆ ಮಾತನಾಡಿ ಸ್ವಾಮೀಜಿ, ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ಜೀವನ ರೂಪಿಸಿಕೊಳ್ಳುವಲ್ಲಿ ಎಂದೂ ಸೋಲು ಕಾಣಲಾರರು. ಇಂದು ಜಗತ್ತಿನಲ್ಲಿ ತಮ್ಮ ಹುಟ್ಟು ಹಬ್ಬಗಳ ಆಚರಣೆಗೆ ಕೋಟಿ ಕೋಟಿ ಖರ್ಚು ಮಾಡುತ್ತಾರೆ. ಅದರಲ್ಲಿ ಶೇ. 90ರಷ್ಟು ಭಾಗ ಜನರು ಕುಡಿತ, ಜಾಲಿ ಮಾಡುವುದು, ಪಾರ್ಟಿ ಮಾಡುವುದು ಈ ರೀತಿ ಯಾಗಿ ದುಂದು ವೆಚ್ಚ ಮಾಡುತ್ತಾರೆ. ಉಳಿದ ಕೆಲವರು ತೊರೆಕೆಂಪಹಳ್ಳಿಯ ಹರೀಶ್‌ನಂತೆ ಸಮಾಜಕ್ಕಾಗಿ ಸೇವೆ ಮಾಡುತ್ತಾರೆ. ಇಂತವರ ಸಂಖ್ಯೆ ಸಮಾಜದಲ್ಲಿ ಹೆಚ್ಚಾಗಬೇಕು ಎಂದು ಶ್ಲಾಘಸಿದರು.

ಹುಟ್ಟುಹಬ್ಬಕ್ಕೆ ಶಾಶ್ವತ ಕೊಡುಗೆ: ಶಾಲೆ ನಿರ್ಮಾಣ ಮಾಡಿ ದಾನ ನೀಡಿದ ಹರೀಶ್‌ ಮಾತನಾಡಿ, ಲಕ್ಷಮ್ಮ, ನರಸಪ್ಪನವರ ಸ್ಮರಣಾರ್ಥ ನಮ್ಮ ತಂದೆ ನರಸಿಂಹಯ್ಯ ತಾಯಿ ಅನುಸೂಯಮ್ಮನವರ ಮಾರ್ಗ ದರ್ಶನದಲ್ಲಿ ನನ್ನ ಮಗಳು ಕೆ.ಎಚ್‌ ನಿಶ್ಚಿಕಳ ಹುಟ್ಟುಹಬ್ಬಕ್ಕೆ ಶಾಶ್ವತವಾಗಿರುವ ಕೊಡುಗೆ ನಮ್ಮ ಗ್ರಾಮಕ್ಕೆ ನೀಡುವ ಬಯಕೆ ಇತ್ತು. ಅದರಂತೆ ನಮ್ಮ ಗ್ರಾಮದ ಸರ್ಕಾರಿ ಶಾಲೆಗೆ ವಿವಿಧ ಸೌಲಭ್ಯಗಳನ್ನು ಸುಮಾರು 40 ಲಕ್ಷ ವೆಚ್ಚದಲ್ಲಿ ನೀಡಲಾಗಿದೆ ಎಂದರು.

ಹೈಟೆಕ್‌ ಸೌಲಭ್ಯ: ತೊರೆಕೆಂಪಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ 40 ಲಕ್ಷರೂ. ವೆಚ್ಚದಲ್ಲಿ ಮೂರು ಕೊಠಡಿ, ಅಡುಗೆ ಕೋಣೆ, ಭೋಜನಾಲಯ, ಎರಡು ಶೌಚಾಲಯ, ನೀರಿನ ಪಂಪು, ಶಾಲಾ ಕಾಂಪೌಂಡ್‌, ಶಾಲೆಯ ನಾಮಫ‌ಲಕ, ಶಾಲಾ ಕಾರ್ಯಾಲಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡಲಾಗಿದ್ದು, ಶಿಕ್ಷಕರು, ತಾಲೂಕು ಶಿಕ್ಷಣಾಧಿಕಾರಿಗಳು ಸಂತೋಷ ವ್ಯಕ್ತಪಡಿಸಿದರು.

ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್‌.ಶ್ರೀಕಂಠ, ನಿವೃತ್ತ ಉಪನಿರ್ದೇಶಕ ಗಂಗಮಾರೇಗೌಡ್ರು, ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮಯ್ಯ, ಕಾಂಗ್ರೆಸ್‌ ಕೆಪಿಸಿಸಿ ವೀಕ್ಷಕ ಎನ್‌.ಶ್ರೀನಿವಾಸ್‌, ಬೂದಿಹಾಳ್‌ ಗ್ರಾಪಂ ಮಾಜಿ ಅಧ್ಯಕ್ಷ ಎಂ.ಕೆ ನಾಗರಾಜು, ಇಸಿಒ ಶಿವಕುಮಾರ್‌. ಶಿಕ್ಷಕರ ಸಂಘದ ಅಧ್ಯಕ್ಷ ಪುಟ್ಟರುದ್ರಾರಾಧ್ಯ, ಶಿಕ್ಷಕ ಗಿರೀಶ್‌, ಕೃಷ್ಣಮೂರ್ತಿ, ಗ್ರಾಮದ ಮುಖಂಡ ನಾಗೇಂದ್ರಪ್ರಸಾದ್‌, ಅನಿಲ್‌, ಮುಖ್ಯ ಶಿಕ್ಷಕ ಗೋಪಾಲಗೌಡ, ಶಿಕ್ಷಕ ಚೌಡಮ್ಮ, ಉಮಾರಾಣಿ ಮತ್ತಿತರರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.