ಎಸ್ಕಾರ್ಟ್ ವಾಹನಕ್ಕೆ ಕಾರು ಡಿಕ್ಕಿ: ಇಬ್ಬರ ದುರ್ಮರಣ
Team Udayavani, Nov 19, 2018, 6:25 AM IST
ಹೊಸಕೋಟೆ: ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದರ ಪೊಲೀಸ್ ಬೆಂಗಾವಲು ವಾಹನಕ್ಕೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ತಾಲೂಕಿನ ಚಿಂತಾಮಣಿ ರಸ್ತೆಯ ಕರಪ್ಪನಹಳ್ಳಿ ಗೇಟ್ ಬಳಿ ಭಾನುವಾರ ಸಂಭವಿಸಿದೆ.
ಕಾರಿನಲ್ಲಿದ್ದ ಚಿಂತಾಮಣಿಯ ಎಸ್ಎಲ್ವಿ ಜ್ಯುವೆಲರಿ ಮಾಲೀಕ ಕೆ.ಎಲ್.ರಾಮಕೃಷ್ಣಯ್ಯ (85),ಪತ್ನಿ ಸ್ವರ್ಣಲೋಚನಮ್ಮ (80) ಮೃತಪಟ್ಟವರು.
ಸಂಬಂಧಿಕರ ವಿವಾಹ ಪ್ರಯುಕ್ತ ರಾಮಕೃಷ್ಣಯ್ಯ ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದಾಗ ಬೈಕನ್ನು ಹಿಂದಿಕ್ಕಲು ಪ್ರಯತ್ನಿಸಿದಾಗ ಎದುರುಗಡೆಯಿಂದ ಬರುತ್ತಿದ್ದ ನಂದಗುಡಿ ಠಾಣೆಗೆ ಸೇರಿದ ಪೊಲೀಸ್ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆಗ ರಾಮಕೃಷ್ಣಯ್ಯ ಹಾಗೂ ಸ್ವರ್ಣಲೋಚನಮ್ಮ ಮೃತಪಟ್ಟಿದ್ದಾರೆ. ಬೈಕ್ ಸವಾರ ಹೊಸಕೋಟೆಯ ನಟರಾಜ್, ಕಾರು ಚಾಲಕ ಚಿಂತಾಮಣಿಯ ನಾಗೇಂದ್ರ, ರಾಮಕೃಷ್ಣಯ್ಯ ಸೊಸೆ ನಳಿನಾಕುಮಾರಿ ಗಾಯಗೊಂಡಿದ್ದು, ಅವರನ್ನು ಎಂವಿಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ವಾಹನದಲ್ಲಿದ್ದ ಎಎಸ್ಐ ಶಂಭಯ್ಯ ಎಂಬುವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.
ಮಾನವೀಯತೆ ಮೆರೆದ ಸ್ವಾಮೀಜಿ: ಅಪಘಾತ ಸಂಭವಿಸಿದ ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ ಬರುವವರೆಗೂ ಪೇಜಾವರ ಶ್ರೀಗಳು ಸ್ಥಳದಲ್ಲಿಯೇ ಇದ್ದು ಮಾನವೀಯತೆ ಮೆರೆದರು. ಸ್ಥಳಕ್ಕೆ ಗ್ರಾಮಾಂತರ ಎಸ್ಪಿ ಟಿ.ಪಿ.ಶಿವಕುಮಾರ್ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ನಂದಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ