ಗಣರಾಜ್ಯೋತ್ಸವ ಸಂವಿಧಾನ ಜಾರಿ ದಿನವಾಗಿ ಆಚರಿಸಿ


Team Udayavani, Jan 27, 2019, 7:46 AM IST

ambdkr.jpg

ಆನೇಕಲ್‌: ಗಣರಾಜ್ಯೋತ್ಸವವನ್ನು ಸಂವಿಧಾನ ಜಾರಿ ದಿನವನ್ನಾಗಿ ಆಚರಣೆ ಮಾಡಬೇಕು ಎಂದು ಪ್ರಜಾ ವಿಮೋಚನ ಚಳವಳಿ ಸಂಘಟನೆ ರಾಜ್ಯಾಧ್ಯಕ್ಷ ಆನೇಕಲ್‌ ಕೃಷ್ಣಪ್ಪ ಒತ್ತಾಯಿಸಿದರು.ಪಟ್ಟಣದಲ್ಲಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆಯಿಂದ ಹಮ್ಮಿಕೊಂಡಿದ್ದ ಸಂವಿಧಾನದ ಜಾರಿ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ದೇಶಕ್ಕೆ ದೊಡ್ಡ ಸಂವಿಧಾನ ನೀಡಿದ ಮಹಾನ್‌ ಮಾನವತಾವಾದಿ ಡಾ.ಅಂಬೇಡ್ಕರ್‌ ಎಲ್ಲಾ ಸಮು ದಾಯಗಳಿಗೆ ಅನುಕುಲವಾಗುವಂತೆ ಹಾಗೂ ದೇಶದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ವಿಚಾರ ಧಾರೆಯ ಪುಸ್ತಕಗಳು ದೇಶದಾದ್ಯಂತ ಎಲ್ಲಾ ರಾಜ್ಯಗಳ ಭಾಷೆಗಳಿಗೆ ಅನುವಾದಿಸಿ ಪ್ರಚಾರ ಮಾಡಬೇಕು ಎಂದು ಆಗ್ರಹಿಸಿದರು.

ನಿರುದ್ಯೋಗ್ಯ ಭತ್ಯೆ ನೀಡಿ: ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ನೀಡಿದರೆ ಸ್ವಲ್ಪ ಸಮಾನತೆಯನ್ನು ಕಾಣಬಹುದು. ನಿರುದ್ಯೋಗಿ ಯುವಕರಿಗೆ ನಿರು ದ್ಯೋಗ್ಯ ಭತ್ಯೆ ನೀಡಲು ಸರ್ಕಾರಗಳು ಮುಂದಾ ಗಬೇಕೆಂದು ಸಲಹೆ ನೀಡಿದರು.

ಕೇಂದ್ರದ ಕ್ರಮಕ್ಕೆ ಖಂಡನೆ: ಕೇಂದ್ರ ಸರ್ಕಾರ ಗಣರಾಜ್ಯೋತ್ಸವದ ಜಾಹಿರಾತಿನಲ್ಲಿ ಡಾ.ಅಂಬೇ ಡ್ಕರ್‌ ಭಾವಚಿತ್ರವನ್ನು ಬಳಸದಿರುವುದನ್ನು ನೋಡಿದರೆ ಪ್ರಧಾನಿ ನರೇಂದ್ರ ಮೋದಿಯವರು ದಲಿತರಿಗೆ ಯಾವ ರೀತಿ ನ್ಯಾಯ ಕೊಡುತ್ತಾರೆ ಎಂಬ ಅನು ಮಾನ ಕಾಡುತ್ತಿದೆ. ಇಂತಹ ಧೋರಣೆಯನ್ನು ಖಂಡಿಸುತ್ತೇವೆ. ಸಂವಿಧಾನವನ್ನು ಜಾರಿಗೆ ತಂದ ದಿನವೇ ಅಂಬೇಡ್ಕರ್‌ ಭಾವಚಿತ್ರವಿಲ್ಲದಂತೆ ಮಾಡಿ ದ ಕೇಂದ್ರದ ಧೋರಣೆ ವಿಚಿತ್ರವಾಗಿದೆ. ದೇಶದಲ್ಲಿ ಸಂವಿಧಾನದಿಂದ ನಾನು ಗೆದ್ದು ಬಂದೆ ಎಂದು ಹೇಗೆ ಅವರು ಹೇಳುತ್ತಾರೆ ಎಂದು ಪ್ರಶ್ನಿಸಿದರು.

ಇಂಗ್ಲಿಷ್‌ ಮಾಧ್ಯಮ ಸ್ತುತ್ಯಾರ್ಹ: ರಾಜ್ಯ ಸರ್ಕಾರ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಜಾರಿಗೆ ತರಲು ಹೊರಟಿರುವುದು ಶ್ಲಾಘನೀಯ ಕ್ರಮವಾಗಿದೆ. ಇದರಿಂದ ದೀನ, ದಲಿತರೂ ಉತ್ತ ಮ ಶಿಕ್ಷಣ ಪಡೆಯಲು ಸಾದ್ಯವಾಗಲಿದೆ. ಕೇವಲ ಮಾತನಾಡುವ ಬದಲು ಯೋಜನೆಗಳು ಕಾರ್ಯರೂ ಪಕ್ಕೆ ಬಂದಾಗ ಪ್ರಯೋಜನವಾಗಲಿವೆ ಎಂದರು.

ಬೆಂಗಳೂರು ವಿಭಾಗೀಯ ಅಧ್ಯಕ್ಷ ಯಡವನ ಹಳ್ಳಿ ಕೃಷ್ಣಪ್ಪ ಮಾತನಾಡಿ, ಸಂವಿಧಾನ ರಚನೆಗೆ ಅನೇಕ ಮಹಾನೀಯರು ದುಡಿದಿದ್ದಾರೆ. ಅದರಲ್ಲಿ ಬಹಳ ಮುಖ್ಯವಾದವರು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್‌. ಆದರೆ, ದೇಶದಲ್ಲಿ ಕೇವಲ ಗಾಂಧೀಜಿ ಯವರನ್ನೇ ಮಾತ್ರ ಬಿಂಬಿಸಿ, ಅಂಬೇಡ್ಕರ್‌ರನ್ನು ಕಡೆಗಣಿಸಲಾಗಿದೆ. ರಾಷ್ಟ್ರೀಯ ಹಬ್ಬಗಳಿಗೆ ಮಾತ್ರ ಮಹನೀಯರು ಸೀಮಿತವಾಗಬಾರದು ಎಂದು ತಿಳಿಸಿದರು.

ಬೆಂಗಳೂರು ಜಿಲ್ಲಾಧ್ಯಕ್ಷ ಅಧ್ಯಕ್ಷ ಕೊಪ್ಪಗೇಟ್ ರಾಮಾಂಜಿನಪ್ಪ, ಕಸಬಾ ಹೋಬಳಿ ಅಧ್ಯಕ್ಷ ಯಲ್ಲಪ್ಪ, ಜಿಲ್ಲಾ ಕಾರ್ಯದರ್ಶಿ ವಿಜಯಕುಮಾರ್‌, ಸಂಘಟನೆ ಮುಖಂಡರಾದ ರಾಜಪ್ಪ, ಕೊಪ್ಪ ಗೋಪಿ, ವಜ್ರಪ್ಪ, ಮಡಿವಾಳ ನಾಗರಾಜು, ಮಂಜು ನಾಥ್‌, ಪ್ರಸನ್ನ, ರಾಜು, ಮುರಳಿ ಮತ್ತು ಉಪೇಂದ್ರ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.