ದಾಖಲೆ ಸಮೇತ ಚರ್ಚೆಗೆ ಬರಲು ಸಚಿವರಿಗೆ ಪಂಥಾಹ್ವಾನ

ನಿಜವಾದ ರೈತರನ್ನು ಗುರುತಿಸುವಲ್ಲಿ ಸರ್ಕಾರ ಪದೇ ಪದೆ ಎಡವುತ್ತಿದೆ.

Team Udayavani, Jun 23, 2022, 1:50 PM IST

ದಾಖಲೆ ಸಮೇತ ಚರ್ಚೆಗೆ ಬರಲು ಸಚಿವರಿಗೆ ಪಂಥಾಹ್ವಾನ

ದೇವನಹಳ್ಳಿ: ಚನ್ನರಾಯಪಟ್ಟಣದ 13 ಹಳ್ಳಿಗಳ 1,777 ಎಕರೆ ಭೂಮಿಯನ್ನು ಕೈಗಾರಿಕೆ ಉದ್ದೇಶಕ್ಕೆ ಕೆಐಎಡಿಬಿ ವತಿಯಿಂದ ಭೂಸ್ವಾಧೀನಕ್ಕೆ ಮುಂದಾಗಿದ್ದು, ಇದಕ್ಕೆ ಒಪ್ಪಿಗೆ ನೀಡಿರುವ ರೈತರ ಮಾಹಿತಿಯನ್ನು ಕೈಗಾರಿಕಾ ಸಚಿವ ನಿರಾಣಿ ಮುಂದಾಗಲಿ ಎಂದು ರೈತರು ಬಹಿರಂಗವಾಗಿ ಪಂಥಾಹ್ವಾನ ನೀಡಿದರು.

ಪಟ್ಟಣದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರು, “ಶೇ. 75ರಷ್ಟು ರೈತರು ಭೂಮಿ ನೀಡಲು ತಯಾರಾಗಿಲ್ಲ, ಅವರ ಸಂಪೂರ್ಣ ಮಾಹಿತಿ ನಮ್ಮಲ್ಲಿದೆ ಎಂದು ತಿಳಿಸಿದರು.

ಒಪ್ಪಿಕೊಂಡಿಲ್ಲ:ಬೆಂಗಳೂರಿಗೆ ದಲ್ಲಾಳಿಗಳು ಕರೆದೊಯ್ಯುವ ರೈತರನ್ನು ನೋಡಿ, ಎಲ್ಲರೂ ಭೂಮಿ ನೀಡಲು ಸಿದ್ಧರಿದ್ದಾರೆ ಎಂದು ಸಚಿವರು ಹೇಳಿಕೆ ನೀಡುತ್ತಿರುವುದು ಸಮಂಜಸವಲ್ಲ. ದಾಖಲೆ ಸಮೇತ ಅದಕ್ಕೆ ಉತ್ತರ ನೀಡಲಿ. ದಲಿತರ ಜಮೀನು ಕಬಳಿಸಲು ಒಂದಿಷ್ಟು ಹಣ ನೀಡಿ, ಜಾತ್ರೆಗಳನ್ನು ಮಾಡಿಸಿದ ಮಾತ್ರಕ್ಕೆ ಭೂಮಿ ನೀಡಲು ಅನ್ನದಾತರು ಒಪ್ಪಿಕೊಂಡಂತಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

79 ದಿನಗಳಿಂದ ಹೋರಾಟ ಮಾಡುತ್ತಿರುವ ರೈತರನ್ನು ಮಾತನಾಡಿಸಲು ಸೌಜನ್ಯವಿಲ್ಲದ ಸಚಿವರು, ಬ್ರೋಕರ್‌ಗಳು ಕರೆತಂದ ರೈತರನ್ನು ಮಾತನಾಡಿದರು. ಕೇವಲ 5 ನಿಮಿಷಗಳಲ್ಲಿ ಪ್ರತ್ಯಕ್ಷರಾಗುತ್ತಾರೆ. ಸಮಸ್ಯೆ ಇರುವ ರೈತರೊಂದಿಗೆ ಮಾತನಾಡುವೇ ಎನ್ನುವ ಅವರು, ಅದನ್ನು ಕಾರ್ಯರೂಪಕ್ಕೆ ತರಲು ಚನ್ನರಾಯಪಟ್ಟಣಕ್ಕೆ ಬರಲಿ ಎಂದು ಒತ್ತಾಯಿಸಿದರು.

ರೈತರು ಜಮೀನು ನೀಡಲು ಸಿದ್ಧರಿಲ್ಲ: ವರದಿಯಾದಂತೆ ಪ್ರಕಾಶ್‌ ಎಂಬುವರ ನೇತೃತ್ವದಲ್ಲಿ ರೈತರು ಸಚಿವರನ್ನು ಭೇಟಿ ಮಾಡಿ ಭೂಮಿ ನೀಡುವುದಾಗಿ ಒಪ್ಪಿಗೆ ಸೂಚಿಸಿದ್ದಾರೆ ಎಂಬ ವದಂತಿ ಕೇಳಿ ಬರುತ್ತಿದೆ. “ಪ್ರಕಾಶ್‌ ಎಂಬುವ ರೈತನೇ ಅಲ್ಲ, ಆತನೊಬ್ಬ ದಲ್ಲಾಳಿ, ದುಡ್ಡು ಮಾಡುವ ಪ್ರವೃತ್ತಿಯಿಂದ ರೈತರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾನೆ ಎಂದು ಆರೋಪಿಸಿದರು.

ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ನಿಲ್ಲಿಸಿ: ನಿಜವಾದ ರೈತರನ್ನು ಗುರುತಿಸುವಲ್ಲಿ ಸರ್ಕಾರ ಪದೇ ಪದೆ ಎಡವುತ್ತಿದೆ. ಒಂದು ಎಕರೆ ಭೂಮಿಗೆ 10 ಕೋಟಿ ನೀಡಿದರೂ, ಸಹ ಕೃಷಿ ಜಮೀನು ನೀಡಲು ಭೂಸ್ವಾಧೀನ ವಿರೋಧಿ ಹೋರಾಟದ ಬೆಂಬಲಕ್ಕೆ ನಿಂತಿರುವ ರೈತರು ಸಿದ್ಧವಿಲ್ಲ ಎಂಬುದನ್ನು ಸಚಿವರು ಅರ್ಥಮಾಡಿಕೊಂಡು, ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ನಿಲ್ಲಿಸಬೇಕು ಎಂದು ಒತ್ತಾಯಿಸಿದ ಅವರು, ದೇವನಹಳ್ಳಿ ಬಂದ್‌ಗೆ ಬೆಂಬಲ ನೀಡಿದ್ದ 40ಕ್ಕೂ ಅಧಿಕ
ಸಂಘಟನೆಗಳು ಹಾಗೂ ಕೋಲಾರ್‌, ಶಿವಮೊಗ್ಗ, ಬಳ್ಳಾರಿಯ ರೈತರಿಗೆ ಕೃತಜ್ಞತೆ ತಿಳಿಸಿದರು. ಮುಖಂಡ ಮಾರೇಗೌಡ, ಪ್ರಮೋದ್‌, ವೆಂಕಟರಮಣ್ಣಪ್ಪ, ದೇವರಾಜ, ನಲ್ಲಪ್ಪನಹಳ್ಳಿ ನಂಜಪ್ಪ, ರಮೇಶ್‌, ರಾಮಾಂಜಿನಪ್ಪ, ಲಕ್ಷ್ಮಮ್ಮ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.