ಕಕ್ಷಿದಾರರಿಗಿಲ್ಲ ಶುದ್ಧ ಕುಡಿವ ನೀರು


Team Udayavani, Nov 19, 2019, 3:00 AM IST

kakshidara

ನೆಲಮಂಗಲ: ತಾಲೂಕಿನ ನ್ಯಾಯಾಲಯದ ಸಂಕೀರ್ಣದಲ್ಲಿ ಶುದ್ಧ ಕುಡಿಯುವ ನೀರಿನ ಸೌಕರ್ಯವಿಲ್ಲದೆ ಪ್ರತಿನಿತ್ಯ ಕಕ್ಷಿದಾರರು, ವಕೀಲರು, ಪೊಲೀಸರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.  ಪಟ್ಟಣ ಸಮೀಪದ ಸೊಂಡೆಕೊಪ್ಪ ರಸ್ತೆಯ ನ್ಯಾಯಾಲಯದ ಸಂಕೀರ್ಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲು ಹೈಕೋರ್ಟ್‌ ಆದೇಶದಂತೆ 7.5 ಲಕ್ಷ ರೂ. ಅನುದಾನವನ್ನು ಖಾಸಗಿ ಕಂಪನಿಗೆ ನೀಡಲಾಗಿತ್ತು.

ಅದರಂತೆ ಘಟಕ ನಿರ್ಮಾಣವಾಗಿ ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಮಾತ್ರ ದೊರಕಿಲ್ಲ. ಘಟಕದ ಸುತ್ತಲು ಗಿಡಗಳು ಬೆಳೆದಿವೆ, ಶುದ್ಧೀಕರಿಸುವ ಯಂತ್ರಗಳು ತುಕ್ಕು ಹಿಡಿಯುವ ಹಂತ ತಲುಪಿವೆ, ಲಕ್ಷಾಂತರ ಹಣ ಖರ್ಚು ಮಾಡಿ ನಿರ್ಮಾಣ ಮಾಡಿದ ಘಟಕ ಉಪಯೋಗಕ್ಕೆ ಬಾರದೇ ಹಾಳಾಗುತಿದ್ದರೂ ಅಧಿಕಾರಿಗಳು ಮಾತ್ರ ಮೌನವಾಗಿದ್ದಾರೆ.

ನೀರಿಗಾಗಿ ಪರದಾಟ: ತಾಲೂಕಿನ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಲಯ, 1ನೇ ಮತ್ತು 2ನೇ ಶ್ರೇಣಿಯ ಅಧಿಕ ಹಿರಿಯ ಶ್ರೇಣಿಯ ನ್ಯಾಯಾಲಯ, ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು, ಪ್ರಧಾನ ಸಿವಿಲ್‌ ನ್ಯಾಯಾಲಯಗಳಿಗೆ ಪ್ರತಿದಿನ ಆಗಮಿಸುವ ಸಾವಿರಾರೂ ಕಕ್ಷಿದಾರರು ಬೆಳಗ್ಗೆಯಿಂದ ಸಂಜೆಯವರೆಗೂ ನ್ಯಾಯಾಲಯದ ಆವರಣದಲ್ಲಿ ಇರುವುದರಿಂದ ಕುಡಿಯಲು ನೀರಿಗಾಗಿ ಪರದಾಡುವ ದುಸ್ಥಿತಿ ಎದುರಾಗಿದೆ.

ನಿರ್ಮಾಣವಾಗಿ ವರ್ಷ ಕಳೆದಿದೆ: 2018ರ ಬೇಸಿಗೆಯಲ್ಲಿ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲು ಟೆಂಡರ್‌ ಮಾಡಿಕೊಂಡ ಅಕ್ವಾéಜ್‌ ಶೈನ್‌ ಕಂಪನಿ ಘಟಕ ನಿರ್ಮಾಣ ಮಾಡಿ ವರ್ಷ ಕಳೆದರೂ ಉಸ್ತುವಾರಿ ವಹಿಸಿಕೊಂಡಿರುವ ಲೋಕೋಪಯೋಗಿ ಅಧಿಕಾರಿಗಳು ಘಟಕ ಆರಂಭಿಸಲು ಮುಂದಾಗಿಲ್ಲ. ವಕೀಲರಿಗೆ , ಕಕ್ಷಿದಾರರಿಗೆ ನೀರಿನ ಸಮಸ್ಯೆ ಎಂದು ಹೇಳಿಕೊಂಡು ವರ್ಷದಿಂದ ಮೀನಮೇಷ ಮಾಡುತ್ತಿದ್ದಾರೆ.

ನೀತಿ ಸಂಹಿತೆ ಮುಗಿಯಲಿ: ನ್ಯಾಯಾಲಯದ ಸಂಕೀರ್ಣದಲ್ಲಿ ವರ್ಷದಿಂದ ಉದ್ಘಾಟನೆಯಾಗದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಮಾಡಲು ನೀತಿ ಸಂಹಿತೆ ಕಾರಣ ಹೇಳುತ್ತಿರುವ ಅಧಿಕಾರಿಗಳು, ನ್ಯಾಯಾಲಯಕ್ಕೆ ಯಾವ ನೀತಿ ಸಂಹಿತೆ, ಕಕ್ಷಿದಾರರಿಗೆ ನೀರು ಹೊದಗಿಸಲು ಯಾವ ನೀತಿ ಸಂಹಿತೆ, ರಾಜಕೀಯ ವ್ಯಕ್ತಿಗಳಿಂದ ಉದ್ಘಾಟನೆ ಮಾಡಲು ಕಾಯುತಿದ್ದಾರೆಯೇ?, ನ್ಯಾಯಾಲಯದ ಸಂಕೀರ್ಣದ ಘಟಕ ಉದ್ಘಾಟನೆಗೆ ಜನಪ್ರತಿನಿಧಿಗಳು ಕಡ್ಡಾಯವೇ? ಎಂಬುದನ್ನು ಮನಗಂಡು ಘಟಕ ಉದ್ಘಾಟನೆ ಮಾಡಿ ನೀರಿನ ಸೌಲಭ್ಯ ನೀಡಬೇಕಾಗಿದೆ.

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ನೀರಿನ ಸೌಲಭ್ಯದ ಕೊರತೆ ಇತ್ತು, ಮಲ್ಲಪುರದಿಂದ ಪೈಪ್‌ಲೈನ್‌ ವ್ಯವಸ್ಥೆ ಮಾಡಲಾಗಿದೆ. ಶೀಘ್ರದಲ್ಲಿ ಘಟಕಕ್ಕೆ ನೀರಿನ ಸರಬರಾಜು ಮಾಡಿ ಘಟಕ ಉದ್ಘಾಟನೆ ಮಾಡಲಾಗುತ್ತದೆ.
-ಉಮೇಶ್‌, ಸಹಾಯಕ ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ

ನ್ಯಾಯಾಲಯಕ್ಕೆ ಬೆಳಗ್ಗೆ ಕೇಸಿಗೆ ಬಂದರೆ ಕುಡಿಯಲು ನೀರಿಲ್ಲದೆ, ಬಾಯಾರಿಕೊಂಡು ನೀರಿಗಾಗಿ ಪರದಾಡಬೇಕು. ಹಣ ಇದ್ದವರು ಅಂಗಡಿಯಲ್ಲಿ ಖರೀದಿಸಿ ನೀರು ಕುಡಿಯುತ್ತಾರೆ. ನಮ್ಮಂತವರು ಬಾಯಾರಿಕೊಂಡು ಮನೆಗೆ ಹೋಗಬೇಕು. ನಿರ್ಮಾಣ ಮಾಡಿರುವ ಘಟಕ ಬಳಕೆಯಾಗದರೆ ಅನುಕೂಲವಾಗಲಿದೆ.
-ಮುತ್ತುರಾಜ್‌, ಕಕ್ಷಿದಾರ

* ಕೊಟ್ರೇಶ್‌.ಆರ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.