ಸೌಲಭ್ಯ ಕಲ್ಪಿಸಲು ಸಹಕಾರ ಸಂಘ ಪೂರಕ


Team Udayavani, Nov 20, 2020, 12:49 PM IST

ಸೌಲಭ್ಯ ಕಲ್ಪಿಸಲು ಸಹಕಾರ ಸಂಘ ಪೂರಕ

ಹೊಸಕೋಟೆ: ಹಾಲು ಉತ್ಪಾದಕರ ಹಿತ ಕಾಪಾಡುವುದರೊಂದಿಗೆ ಗ್ರಾಮಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಲ್ಲಿ ಸಹಕಾರ ಸಂಘ ಗಳ ಪಾತ್ರ ಅಭಿ ನಂದನಾರ್ಹ ಎಂದು ಶಾಸಕ ಶರತ್‌ ಬಚ್ಚೇಗೌಡ ಹೇಳಿದರು. ತಾಲೂಕಿನ ಓಬಳಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದರು.

ಕೇವಲ ಹೈನುಗಾರಿಕೆಯನ್ನು ಪ್ರೋತ್ಸಾಹಿಸುವುದ ರೊಂದಿಗೆ ಗ್ರಾಮ ಸ್ಥರ ಆರೋಗ್ಯ ಕಾಪಾಡಿಕೊಳ್ಳಲು ಅನುವಾಗುವಂತೆ ಶುದ್ಧ ಕುಡಿಯುವ ನೀರಿನ ಘಟಕ ವನ್ನು ಸ್ಥಾಪಿಸುವ ಮೂಲಕ ಸಾಮಾಜಿಕ ಕಾಳಜಿಯನ್ನು ಪ್ರದರ್ಶಿಸಿದಂತಾಗಿದೆ ಎಂದರು.

ತಾಲೂಕಿನಲ್ಲಿ ಈಗಾಗಲೇ ತಮ್ಮ ಸ್ವಂತ ವೆಚ್ಚದಲ್ಲಿ ಹಾಗೂ ದಾನಿಗಳ ಸಹಕಾರದೊಂದಿಗೆ 100ಕ್ಕೂ ಹೆಚ್ಚು ಘಟಕಗಳನ್ನು ಪ್ರಾರಂಭಿಸಿ ಅನು ಕೂಲ ಕಲ್ಪಿಸಲಾಗಿದೆ.ಸಂಘವು ಗಳಿಸಿದ ಲಾಭಾಂಶದಲ್ಲಿ ಗ್ರಾಮಗಳ ಬೆಳವಣಿಗೆಗೂ ಸಹ ಗಮನಹರಿಸಲಾಗುತ್ತಿದೆ. ನೀರು ಅತ್ಯ ಮೂಲ್ಯವಾದ ನೈಸರ್ಗಿಕ ಸಂಪತ್ತಾಗಿದ್ದು ಮಿತವಾಗಿ ಬಳಸಬೇಕಾದ್ದು ಅತ್ಯವಶ್ಯ ವಾಗಿದೆ ಎಂದು ತಿಳಿಸಿದರು. ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದಾಗಲೂ ಅಂತರ್ಜಲ ಮಟ್ಟದಲ್ಲಿ ನಿರೀಕ್ಷಿತ ಸುಧಾರಣೆ ಕಂಡು ಬಂದಿಲ್ಲ. ಈಗಲೂ ಸಹ ಕೊಳವೆಬಾವಿಗಳಿಂದ ನೀರು ಪಡೆಯಲು 2 ಸಾವಿರ ಅಡಿಗಳಷ್ಟು ಕೊರೆಯಬೇಕಾದ ಪರಿಸ್ಥಿತಿಯಿದೆ ಎಂದರು.

ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಸಿ. ಮಂಜುನಾಥ್‌ ಮಾತನಾಡಿ, ತಾಲೂಕಿನಲ್ಲಿರುವ 198 ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಪ್ರತಿದಿನ 1.5 ಲಕ್ಷ ಲೀ.ಗಳಷ್ಟು ಹಾಲು ಸಂಗ್ರಹಗೊಳ್ಳುತ್ತಿದ್ದು ಗುಣಮಟ್ಟ ಕಾಪಾಡಿಕೊಳ್ಳಲು ಆದ್ಯತೆ ನೀಡಲಾಗಿದೆ. ಒಕ್ಕೂಟದ ವ್ಯಾಪ್ತಿಯಲ್ಲಿನ 175ರಲ್ಲಿ ತಾಲೂಕಿನಲ್ಲಿ ಇದುವರೆವಿಗೂ 49 ಶುದ್ಧ ಕುಡಿಯುವ ನೀರಿನ ಘಟಕ ಗಳು ಕಾರ್ಯನಿರ್ವಹಿಸುತ್ತಿದ್ದು 2 ಲಕ್ಷ ರೂ.ಗಳ ಸಹಾಯಧನ ಸಹ ನೀಡಲಾಗುತ್ತಿದೆ. ಒಕ್ಕೂಟದಿಂದ ಕೋವಿಡ್ ಸೋಂಕು ತಡೆಗಟ್ಟುವ ಸಲುವಾಗಿ ಎಲ್ಲಾ 298ಗ್ರಾಮಗಳಲ್ಲೂಸಹಸೋಡಿಯಂಹೈಪೊಕ್ಲೋರೈಟ್‌ ರಾಸಾಯನಿಕ ದ್ರಾವಣ ಸಿಂಪಡಿಸುವ ಕಾರ್ಯ ಸಹ ಕೈಗೊಳ್ಳಲಾಗಿತ್ತು ಎಂದರು.

ಉತ್ಪಾದಕರಿಗೆ ರಿಯಾಯಿತಿ ದರದಲ್ಲಿ ಪಶು ಆಹಾರ ಒಳಗೊಂಡಂತೆ ವಿಮಾ ಯೋಜನೆಗೆ ನೋಂದಣಿಗೂ ಸಹ ಅವಕಾಶ ಮಾಡಿಕೊಡ ಲಾಗಿದೆ. ಕಳೆದ 6-7 ತಿಂಗಳುಗಳಲ್ಲಿ ಹಾಲಿನ ಮಾರಾಟ ಸಹ ಕಡಿಮೆಯಾಗಿದ್ದಾಗ್ಯೂ ಸಹ ಉತ್ಪಾದಕರ ಹಿತ ಕಾಪಾಡುವ ಉದ್ದೇಶದಿಂದ ನಿರಂತರವಾಗಿ ಹಾಲು ಸಂಗ್ರಹಣೆ ಮಾಡಲಾಗುತ್ತಿದೆ. ಪರಿಸ್ಥಿತಿ ಇದೀಗ ಸುಧಾರಣೆಗೊಳ್ಳುತ್ತಿದ್ದು ಮಾರಾಟ ದರ ಏರಿಕೆ‌ ಮಾಡಿದ್ದಲ್ಲಿ ಉತ್ಪಾದಕರಿಗೂ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದರು.

ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಿದ್ದಲಿಂಗಾರಾಧ್ಯ ಸ್ಥಾಪಿಸಲು ಸೂಲಿಬೆಲೆ ಹೋಬಳಿ ರಾಂಪುರ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಧರ್ಮೇಶ್‌, ತಾಪಂ ಮಾಜಿ ಅಧ್ಯಕ್ಷ ಟಿ.ಎಸ್‌. ರಾಜಶೇಖರ್‌, ಗ್ರಾಪಂ ಮಾಜಿ ಉಪಾಧ್ಯಕ್ಷ ಜಗದೀಶ್‌, ಬೆಂಗಳೂರು ಹಾಲು ಒಕ್ಕೂಟದ ಶಿಬಿರ ಕಚೇರಿಯ ಉಪ ವ್ಯವಸ್ಥಾಪಕ ವಿಜಯಭಾಸ್ಕರ್‌ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.