ಘಾಟಿ ಜಾತ್ರೆಯಲ್ಲಿ ಸೇರಿದ್ದ ರಾಸುಗಳ ತೆರವು


Team Udayavani, Jan 21, 2023, 10:02 AM IST

ಘಾಟಿ ಜಾತ್ರೆಯಲ್ಲಿ ಸೇರಿದ್ದ ರಾಸುಗಳ ತೆರವು

ದೊಡ್ಡಬಳ್ಳಾಪುರ: ಚರ್ಮಗಂಟು ರೋಗ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಘಾಟಿ ಕ್ಷೇತ್ರದಲ್ಲಿ ದನಗಳ ಜಾತ್ರೆ ನಿಷೇಧಿಸಿ ಜಿಲ್ಲಾಧಿ ಕಾರಿ ಆದೇಶ ನೀಡಿದ್ರೂ, ಸೇರಿದ್ದ ರಾಸುಗಳು ಹಾಗೂ ರೈತರನ್ನು ಬಿಗಿ ಪೊಲೀಸ್‌ ಭದ್ರತೆಯಲ್ಲಿ ವಾಪಸ್‌ ಕಳುಹಿಸಲಾಯಿತು.

ಜ.31ರವರೆಗೆ ಜಾನುವಾರು ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರೂ, ರೈತರು ಪೆಂಡಾಲ್‌ ಹಾಕಿ ರಾಸುಗಳನ್ನು ಕರೆ ತಂದಿದ್ದರು. ಮೂರು ದಿನಗಳಿಂದ ಜಾತ್ರೆ ನಡೆಯುತ್ತಿದ್ದು, ರಾಸುಗಳ ವ್ಯಾಪಾರ ಸಹ ಆರಂಭವಾಗಿತ್ತು. ಘಾಟಿ ದೇವಾಲಯದ ಇಒ, ಉಪತಹಶೀಲ್ದಾರ್‌, ಪಶು ವೈದ್ಯರು, ಅಧಿ ಕಾರಿಗಳು ಮನವಿ ಮಾಡಿದ್ದರೂ ರೈತರು ಪಟ್ಟು ಸಡಿಲಿಸಿರಲಿಲ್ಲ. ತಾಲೂಕು ಆಡಳಿತ ನೀಡುವ ಮೂಲ ಸೌಕರ್ಯ ನಮಗೆ ಬೇಡ, ರಾಸುಗಳನ್ನು ಮಾರಾಟ ಮಾಡಲು ಅವಕಾಶ ಕೊಡಬೇಕೆಂಬುದು ರೈತರ ವಾದವಾಗಿ, ಜಾತ್ರೆ ನಡೆಸಿಯೇ ತೀರುತ್ತೇವೆ ಎಂದು ಜಮಾಯಿಸಿದ್ದರು.

ಪಶು ವೈದ್ಯರಿಂದ ದೂರು ದಾಖಲು: ಜಾತ್ರೆಗೆ ನಿಷೇಧವಿದ್ದರೂ ರೈತರು ರಾಸುಗಳನ್ನು ಕರೆತಂದ ಹಿನ್ನೆಲೆಯಲ್ಲಿ ಪಶು ವೈದ್ಯರು ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ಇಲಾಖೆಗೆ ದೂರು ಸಲ್ಲಿಸಿದ್ದರು. ಜಾನುವಾರು ಜಾತ್ರೆ ತಡೆದು, ತೆರವು ಮಾಡುವಂತೆ ಜಿಲ್ಲಾಧಿಕಾರಿ ಆರ್‌.ಲತಾ ಅವರು ಗುರುವಾರ ರಾತ್ರಿ ಅಧಿಕಾರಿಗಳಿಗೆ ಸೂಚಿಸಿದ್ದರು. ಅಲ್ಲದೇ, ದೂರು ದಾಖಲಿಸುವಂತೆ ಸಲಹೆ ನೀಡಿದ್ದರು. ಅದರಂತೆ ಪಶು ಇಲಾಖೆ ಉಪನಿರ್ದೇಶಕ ಡಾ.ನಾಗರಾಜು, ಸಹಾಯಕ ನಿರ್ದೇಶಕ ಡಾ.ವಿಶ್ವನಾಥ ಅವರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಇದರನ್ವಯ ಶುಕ್ರವಾರ ಬೆಳಗ್ಗೆ ಡಿವೈಎಸ್ಪಿ ನಾಗರಾಜ್‌ ನೇತೃತ್ವದಲ್ಲಿ ನೂರಾರು ಪೊಲೀಸರು ಶ್ರೀಕ್ಷೇತ್ರ ಘಾಟಿಗೆ ಆಗಮಿಸಿ ರೈತರನ್ನು ವಾಪಸ್‌ ಕಳುಹಿಸಿದರು.

ಪೊಲೀಸ್‌ ಭದ್ರತೆಯಲ್ಲಿ ಪೆಂಡಾಲ್‌ಗ‌ಳನ್ನು ತೆರವು ಮಾಡುತ್ತಿದ್ದು, ಒಬ್ಬೊಬ್ಬರೇ ರೈತರು ಜಾನುವಾರುಗಳೊಂದಿಗೆ ತೆರಳುತ್ತಿದ್ದ ದೃಶ್ಯ ಕಂಡು ಬಂತು.

ಜಾತ್ರೆಯಲ್ಲಿ ಚರ್ಮಗಂಟಿ ರಾಸುಗಳು ಪತ್ತೆ: ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೇರಿದ್ದ ನಾಲ್ಕೈದು ಜಾನುವಾರುಗಳಿಗೆ ಚರ್ಮಗಂಟು ಕಾಯಿಲೆಯ ಲಕ್ಷಣಗಳಿರುವುದು ಪತ್ತೆಯಾಗಿದ್ದು, ಇದನ್ನು ಗಮನಿಸಿದ ಪಶುವೈದ್ಯರು ರೈತರಿಗೆ ತಿಳಿ ಹೇಳಿ ತೆರವು ಮಾಡಿಸಿದ್ದಾರೆ.

ಮೊದಲೇ ಮಾಡಬೇಕಿತ್ತು: ಜಿಲ್ಲಾಡಳಿತ ರಾಸುಗಳ ಜಾತ್ರೆ ಮಾಡಬಾರದೆಂದು ಆದೇಶ ಬಂದಿತ್ತು. ಆದರೂ, ರೈತರೆಲ್ಲ ಸೇರಿ ದನಗಳ ಜಾತ್ರೆ ಮಾಡಿದ್ದಾರೆ. ಜಾತ್ರೆಯಲ್ಲಿ ಚರ್ಮ ಗಂಟು ಕಾಯಿಲೆ ಇರುವುದು ಪತ್ತೆಯಾಗುವುದು ನಮ್ಮೆಲ್ಲರ ದುರಾದೃಷ್ಟ. ಆದರೆ, ಮೊದಲ ದಿನವೇ ಜಿಲ್ಲಾಡಳಿತ ಈ ಕೆಲಸ ಮಾಡಿದ್ದರೆ, ಬೇರೆ ಕಡೆಯಿಂದ ರೈತರು ಬರುತ್ತಿರಲಿಲ್ಲ ಎನ್ನುತ್ತಾರೆ ರೈತ ಚಂದ್ರಶೇಖರ್‌. ಬಳ್ಳಾರಿ ಹಾಗೂ ಸುತ್ತಮುತ್ತ ಜಿಲ್ಲೆಗಳಿಂದ 100 ಜನ ಬಂದಿದ್ದೇವೆ. ನಮಗೆ ಗೊತ್ತಿದ್ದರೆ ಜಾತ್ರೆಗೆ ಬರುತ್ತಿಲ್ಲ. ಆದರೆ, ಜಾತ್ರೆಗೆ ಬಂದಿದ್ದೇವೆ. ಇದೀಗ ಚರ್ಮ ಗಂಟು ಇರುವುದರಿಂದ ಜಾತ್ರೆಯನ್ನು ಜಿಲ್ಲಾಡಳಿತ ರದ್ದು ಮಾಡಿಸುತ್ತಿದ್ದಾರೆ. ಇದರಿಂದ ನಮಗೆ ಸಹಸ್ರಾರು ರೂ. ನಷ್ಟವಾಗಿದೆ ಎನ್ನುತ್ತಾರೆ ರೈತ ಲಿಂಗಪ್ಪ.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.