ಸಿಎಂ ಬಹುಮತ ಸಾಬೀತು ಪಡಿಸಲಿದ್ದಾರೆ


Team Udayavani, Jul 15, 2019, 3:00 AM IST

cm-bahuma

ದೇವನಹಳ್ಳಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸರ್ಕಾರ ಸುಭದ್ರವಾಗಿಯೇ ಇದೆ. ಐದು ವರ್ಷ ಪೂರ್ಣಗೊಳಿಸುತ್ತದೆ. ಬಹುಮತ ಸಾಬೀತು ಪಡಿಸುವಲ್ಲಿ ಕುಮಾರಸ್ವಾಮಿ ಯಶಸ್ಸು ಸಾಧಿಸುತ್ತಾರೆ ಎಂದು ಜೆಡಿಎಸ್‌ ಶಾಸಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಕೋಡಗುರ್ಕಿ ಸಮೀಪದಲ್ಲಿರುವ ಪ್ರಸ್ಟೀಜ್‌ ಗಾಲ್ಫ್ಶೈರ್‌ ರೆಸಾರ್ಟ್‌ಗೆ ತೆರಳುವ ವೇಳೆ ಹಲವು ಶಾಸಕರು ಮಾಧ್ಯಮದವರೊಂದಿಗೆ ಮಾತನಾಡಿ, ವಿಷಯ ಸ್ಪಷ್ಟಪಡಿಸಿದರು.

ಅತೃತ್ಪರ ಮನವೊಲಿಕೆ ವಿಶ್ವಾಸವಿದೆ: ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್‌ ಮಾತನಾಡಿ, ರಾಜ್ಯ ರಾಜಕೀಯ ಹಲವು ತಿರುವುಗಳನ್ನು ಪಡೆಯುತ್ತಿದೆ. ಎರಡೂ ಪಕ್ಷಗಳ ನಾಯಕರು ಅತೃಪ್ತರ ಮನವೊಲಿಸುವ ಪ್ರಯತ್ನಗಳು ನಡೆಯುತ್ತಿವೆ. ಬಿಜೆಪಿ ಉಸ್ತುವಾರಿ ಮುರಳಿಧರ್‌, ಈಶ್ವರಪ್ಪ ಭೇಟಿ ಆಕಸ್ಮಿಕವಾದುದು. ಇದಕ್ಕೆ ರಾಜಕೀಯ ಲೇಪನ ಬಳಿಯುವುದು ಸರಿಯಲ್ಲ.

ಅಲ್ಲದೆ ಅತೃಪ್ತ ಶಾಸಕರ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಜತೆಗೆ ಕೆಲ ಶಾಸಕರು ಇನ್ನೂ ನಾವು ಜನತಾದಳದಲ್ಲಿಯೇ ಇದ್ದೇವೆ. ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಹೇಳಿದ್ದಾರೆ. ಎಲ್ಲರೂ ಒಟ್ಟಾಗಿ ಹೋಗುವ ಉದ್ದೇಶದಿಂದಲೇ ರೆಸಾರ್ಟ್‌ನಲ್ಲಿ ತಂಗಿದ್ದೇವೆ. ಜತೆಗೆ ಸೋಮವಾರ ಅಧಿವೇಶನವಿದ್ದು, ಎಲ್ಲರೂ ಹಾಜರಾಗುತ್ತೇವೆ ಎಂದು ಹೇಳಿದರು.

ಸರ್ಕಾರ 5 ವರ್ಷ ಪೂರೈಸುತ್ತದೆ: ವಿಧಾನ ಪರಿಷತ್‌ ಸದಸ್ಯ ಶರವಣ ಮಾತನಾಡಿ, ಸರ್ಕಾರ ಸುಭದ್ರವಾಗಿಯೇ ಇದೆ. ಮೈತ್ರಿ ಸರ್ಕಾರ, 5 ವರ್ಷ ಪೂರ್ಣಗೊಳಿಸುತ್ತದೆ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬಹುಮತ ಸಾಬೀತು ಮಾಡಲಿದ್ದಾರೆ. ಎಲ್ಲವೂ ಶುಭ ಸೂಚಕವಾಗಿಯೇ ಇದೆ. ಕುಮಾರಸ್ವಾಮಿ ಬಹುಮತ ಸಾಬೀತಿನಲ್ಲಿ ಜಯಶೀಲರಾಗುತ್ತಾರೆ.

ಭಗವಂತನ ಆಶೀರ್ವಾದದಿಂದ ಈ ಸರ್ಕಾರ ರಚನೆ ಆಗಿದೆ. ಈ ಸರ್ಕಾರ ಉಳಿಯುತ್ತೆ, ಜನರಿಗೆ ಉತ್ತಮ ಕೆಲಸ ಮಾಡಿಕೊಡುತ್ತದೆ. ಸುಧಾಕರ್‌ ಸೇರಿದಂತೆ ಯಾರ ನಡೆ ಬಗ್ಗೆ ನಾನು ಈಗ ಮಾತನಾಡೋದಿಲ್ಲ, ನಿಮಗೆಲ್ಲ ಶುಭ ಸೂಚನೆ ಸಿಗುತ್ತದೆ ಎಂದು ಹೇಳಿದರು.

ಶಾಸಕರ ಸಮನ್ವಯದ ಕೊರತೆ: ಮಳವಳ್ಳಿ ಶಾಸಕ ಅನ್ನದಾನಿ ಮಾತನಾಡಿ, ಆಯಾ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳುವುದು ಸಹಜ. ಹಿಂದೆ ಸೋನಿಯಾ ಗಾಂಧಿ, ಗುಲಾಂ ನಬೀ ಅಜಾದ್‌ ನಿರ್ಧರಿಸಿದಂತೆ ಎಚ್‌.ಡಿ. ಕುಮಾರಸ್ವಾಮಿ 5 ವರ್ಷಗಳವರೆಗೆ ಮುಖ್ಯಮಂತ್ರಿಯಾಗಿಯೇ ಇರುತ್ತಾರೆ. ಎರಡು ಪಕ್ಷಗಳು ಸೇರಿ ಮೈತ್ರಿ ಸರ್ಕಾರ ನಡೆಸುವಾಗ ಭಿನ್ನಮತ ಸರ್ವೇ ಸಾಮಾನ್ಯ.

ಎಲ್ಲವೂ ಬಗೆಹರಿಸುವ ಸಾಮಾರ್ಥಯ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರಿಗಿದೆ. ಅವರೊಂದಿಗೆ ನಾವಿದ್ದೇವೆ. ಸರ್ಕಾರದ ಸಚಿವರ ಖಾತೆಗಳಲ್ಲಿ ಎಚ್‌.ಡಿ.ರೇವಣ್ಣ ಹಸ್ತಕ್ಷೇಪ ಆರೋಪ, ಕೆಎಎಸ್‌ ಮತ್ತು ಐಎಎಸ್‌ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ನಡುವಿನ ಸಮನ್ವಯ ಕೊರತೆ ಇದೆ.

ಭಿನ್ನಮತೀಯರ ಎಲ್ಲ ಬೇಡಿಕೆಗಳನ್ನು ಆಲಿಸಿ, ಹಿರಿಯ ನಾಯಕರು ಕ್ರಮಕೈಗೊಳ್ಳುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದರು. ಶ್ರವಣಬೆಳಗೋಳ ಶಾಸಕ ಬಾಲಕೃಷ್ಣ ಮಾತನಾಡಿ, ಮೋಜು ಮಸ್ತಿಗಾಗಿ ಶಾಸಕರು ರೆಸಾರ್ಟ್‌ ವಾಸ್ತವ್ಯ ಮಾಡ್ತಿಲ್ಲ. 14 ತಿಂಗಳು ಯಶಸ್ವಿಯಾಗಿ ಎಚ್‌.ಡಿ. ಕುಮಾರಸ್ವಾಮಿ ಸರ್ಕಾರ ಆಡಳಿತ ನಡೆಸಿದೆ.

5 ವರ್ಷ ಆಡಳಿತ ನಡೆಸುವುದು ಖಚಿತ. ಕೆಲ ಶಾಸಕರು ಸ್ವಾರ್ಥಕ್ಕಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಡಿಕೆಶಿ, ಪರಮೇಶ್ವರ್‌ ಸೇರಿ, ಎಂಟಿಬಿ ಮನವೊಲಿಸಿದ್ದಾರೆ. ಎಚ್‌.ಡಿ. ಕುಮಾರಸ್ವಾಮಿ ವಿಶ್ವಾಸಮತಯಾಚನೆ ದಿನಾಂಕ ನಿಗದಿ ಮಾಡುವಂತೆ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಸಾರ್ವಜನಿಕರ ಹಣ ಬಳಸುತ್ತಿಲ್ಲ: ರೆಸಾರ್ಟ್‌ನ ಎಲ್ಲ ಖರ್ಚನ್ನು ಸ್ವಂತ ಹಣದಲ್ಲಿ ನಿಭಾಯಸುತ್ತಿದ್ದೇವೆ. ನಮಗೆ ವ್ಯವಸಾಯ, ಉದ್ದಿಮೆ ಸೇರಿದಂತೆ ಆದಾಯವಿದೆ. ಅದರಲ್ಲೇ ಎಲ್ಲ ಖರ್ಚುಗಳನ್ನು ಭರಿಸುತ್ತಿದ್ದೇವೆ. ಆ ಸಾಮರ್ಥ್ಯ ನಮಗಿದೆ. ರೆಸಾರ್ಟ್‌ನ ಒಂದು ವಿಲ್ಲಾಗೆ 30 ಸಾವಿರ ಇದ್ದು, 5 ಮಂದಿ ವಾಸ್ತವ್ಯ ಮಾಡಬಹುದು. ಯಾವುದೇ ಕಾರಣಕ್ಕೂ ಸಾರ್ವಜನಿಕರ ಹಣ ಬಳಸುತ್ತಿಲ್ಲ ಎಂದು ಶಾಸಕರು ತಿಳಿಸಿದರು. ಆದರೆ ಇತ್ತ ಜನರ ಕುಂದುಕೊರತೆ ಆಲಿಸದ ಶಾಸಕರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದಾರೆ.

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.