ಜೆಡಿಎಸ್‌ ಶಾಸಕರನ್ನು ಭೇಟಿಯಾದ ಸಿಎಂ


Team Udayavani, Jul 10, 2019, 3:00 AM IST

jds-sasa

ದೇವನಹಳ್ಳಿ: ದೇವನಹಳ್ಳಿ ತಾಲೂಕಿನ ನಂದಿಬೆಟ್ಟದ ರಸ್ತೆಯ ಕೋಡಗುರ್ಕಿ ಗ್ರಾಮದ ಸಮೀಪವಿರುವ ಪ್ರಸ್ಟೀಜ್‌ ಗಾಲ್ಫ್ ರೇಸಾರ್ಟ್‌ನಲ್ಲಿ ತಂಗಿರುವ ಜೆಡಿಎಸ್‌ ಶಾಸಕರನ್ನು ಸಿಎಂ ಕುಮಾರಸ್ವಾಮಿ ಭೇಟಿ ಮಾಡಿದರು. ಆದರೆ ಭೇಟಿಯಾದ ಬಳಿಕ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡದೆ ತೆರಳಿದರು.

ಸೋಮವಾರ ರಾತ್ರಿ 23 ಶಾಸಕರ ತಂಡ ಬಸ್ಸಿನಲ್ಲಿ ನಂದಿಬೆಟ್ಟದ ಮಾರ್ಗ ಮಧ್ಯದಲ್ಲಿರುವ ರೇಸಾರ್ಟ್‌ಗೆ ಬಂದಿತ್ತು. ರೇಸಾರ್ಟ್‌ ಸುತ್ತಲು ಮತ್ತು ಮುಂಭಾಗದಲ್ಲಿ ಪೊಲೀಸ್‌ ಬಿಗಿ ಭದ್ರತೆ ವ್ಯವಸ್ಥೆಗೊಳಿಸಲಾಗಿದೆ. ಮಂಗಳವಾರ ಮಧ್ಯಾಹ್ನ 2.15ರ ಸಮಯದಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಭೇಟಿ ನೀಡಿ, ಶಾಸಕರೊಂದಿಗೆ ಚರ್ಚಿಸಿದರು. ಆದರೆ ಏನು ಚರ್ಚೆ ನಡೆಯಿತು ಎಂಬುದರ ಕುರಿತು ಸಿಎಂ ಮಾಧ್ಯಮದವರಿಗೆ ಪ್ರತಿಕ್ರಿಯಿಸಲಿಲ್ಲ.

ಈಗಾಗಲೇ ಜೆಡಿಎಸ್‌ನ 3 ಶಾಸಕರು ರಾಜೀನಾಮೆ ನೀಡಿದ್ದು, ಆಪರೇಷನ್‌ ಕಮಲಕ್ಕೆ ಒಳಗಾಗಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಇದೀಗ ಉಳಿದಂತಹ ಶಾಸಕರುಗಳು ತಮ್ಮ ಸ್ವಕ್ಷೇತ್ರ ಅಥವಾ ಬೆಂಗಳೂರಿನಲ್ಲಿಯೇ ನೆಲೆಸಿದ್ದರೆ, ಅವರಿಗೂ ಆಮಿಷವೊಡ್ಡಿ ಕೇಸರಿ ಪಾಳೆಯ ಸೇರುವ ಆತಂಕದಲ್ಲಿ ರೇಸಾರ್ಟ್‌ಗೆ ತಂದಿರಿಸಲಾಗಿದೆ.

ಸಚಿವ ಬಂಡೆಪ್ಪ ಕಾಶೆಂಪೂರ್‌ ಮಾತನಾಡಿ, ಎಲ್ಲ ಶಾಸಕರು ಒಗ್ಗಟ್ಟಿನಿಂದ ಇರಬೇಕೆಂದು ಎಲ್ಲರೂ ಇಲ್ಲಿ ಸೇರಿದ್ದೇವೆ. ವರಿಷ್ಠರಿಂದ ಬುಲಾವ್‌ ಬರುತ್ತದೆಯೋ, ಆಗ ಹೊರಗೆ ಬರುತ್ತೇವೆ. ಪ್ರತಿ ಮಂಗಳವಾರ ದೇವಿ ಮಾರಮ್ಮ ಗುಡಿಗೆ ಹೋಗುವ ಪದ್ಧತಿ ಇದೆ. ಅದರಂತೆ ದೇವನಹಳ್ಳಿಯಲ್ಲಿರುವ ಮಾರಮ್ಮದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ಬಂದಿದ್ದೇನೆ ಎಂದು ಹೇಳಿದರು.
ಜೆಡಿಎಸ್‌ ಶಾಸಕರು, ಭೇಟಿ, ಸಿಎಂ, JDS legislators, meet, CM
ರೇಸಾರ್ಟ್‌ನಲ್ಲಿ ಜೆಡಿಎಸ್‌ ಶಾಸಕರು ವಾಸ್ತವ ಹೂಡುತ್ತಿರುವುದು ಮೊದಲೇನಲ್ಲ. ಈ ಹಿಂದೆಯೂ ಮೈತ್ರಿ ಸರ್ಕಾರ ಗದ್ದುಗೆಗೆ ಏರುವ ಹಾಗೂ ವಿಶ್ವಾಸ ಮತಯಾಚನೆ ಮಾಡುವ ಮುನ್ನಾ ಕೂಡ ಇದೇ ರೇಸಾರ್ಟ್‌ನಲ್ಲಿ ತಂಗಿದ್ದರು. ಯಡಿಯೂರಪ್ಪ ಬಹುಮತ ಸಾಬೀತು ಪಡಿಸುವ ವೇಳೆ ಆಪರೇಷನ್‌ ಕಮಲಕ್ಕೆ ಒಳಗಾಗುವ ಬೀತಿಯಲ್ಲಿ ಎಲ್ಲಾ ಶಾಸಕರುಗಳನ್ನು ಇಲ್ಲಿಗೆ ತರಲಾಗಿತ್ತು. ಶಾಸಕರ ವಾಸ್ತವ್ಯ ಶುಕ್ರವಾರದವರೆಗೂ ಇಲ್ಲಿಯೇ ಇರಲಿದೆ ಎಂದು ತಿಳಿದಿದ್ದು, ಬಳಿಕ ಹೊಸ ಬೆಳವಣಿಗೆಗಳು ಕಾಣುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.