ಸಭೆಗೆ ಸಮಗ್ರ ಮಾಹಿತಿಯೊಂದಿಗೆ ಬನ್ನಿ


Team Udayavani, Jan 5, 2021, 3:10 PM IST

ಸಭೆಗೆ ಸಮಗ್ರ ಮಾಹಿತಿಯೊಂದಿಗೆ ಬನ್ನಿ

ದೇವನಹಳ್ಳಿ: ಸಭೆಗೆ ಬಂದು ಹೋದರೆ ಸಾಲದು, ಸಮರ್ಪಕ ಮಾಹಿತಿಯೊಂದಿಗೆಹಾಜರಾಗಬೇಕು ಎಂದು ಜಿಪಂ ಅಧ್ಯಕ್ಷ ವಿ.ಪ್ರಸಾದ್‌ ತಿಳಿಸಿದರು.

ತಾಲೂಕಿನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೊರೊನಾ,ಗ್ರಾಪಂ ಚುನಾವಣೆ ನೀತಿ ಸಂಹಿತೆ, ಇತರೆಕಾರಣಗಳಿಂದ ಸರ್ವ ಸದಸ್ಯರ ಸಾಮಾನ್ಯಸಭೆ ಒಂದು ತಿಂಗಳು ಮುಂದೂಡಲಾಗಿತ್ತು.ಸಭೆಯಲ್ಲಿ ಏನೋ ಒಂದು ಹರಕೆ ಉತ್ತರನೀಡಬಹುದೆಂದು ಅಧಿಕಾರಿಗಳುಅಂದುಕೊಂಡಿದ್ದಾರೆ. ಆದರೆ, ಎಲ್ಲಾಮಾಹಿತಿಗಳನ್ನು ಕಡ್ಡಾಯವಾಗಿ ನೀಡಬೇಕು ಎಂದು ಹೇಳಿದರು.

ಕಠಿಣ ಕ್ರಮದ ಎಚ್ಚರಿಕೆ: ಆರೋಗ್ಯ ಇಲಾಖೆಯಲ್ಲಿ ಡಿ ದರ್ಜೆ ನೌಕರರು, ನರ್ಸ್ ಗಳಿಗೆ ಆರೇಳು ತಿಂಗಳಾದರೂ ಸಂಬಳನೀಡುತ್ತಿಲ್ಲ ಎಂದು ದೂರುಗಳು ಬರುತ್ತಿವೆ.ಆದರೆ, ಜಿಲ್ಲಾ ಆರೋಗ್ಯಾಧಿಕಾರಿಗಳುಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೇಸಂಬಳ ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ ಜಿಲ್ಲಾ ಆರೋಗ್ಯಾಧಿಕಾರಿಗಳಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ದೂರಿದರು.

ವರ್ಗ ಮಾಡಿಸಿಕೊಂಡು ಹೋಗಿ: ಆರೋಗ್ಯ ಅಧಿಕಾರಿಗಳೇ ನಿಮಗೆ ಒಂದುತಿಂಗಳ ಸಂಬಳ ಅಗದಿದ್ದರೆ ಏನುಮಾಡುತ್ತೀರಿ? ಕೋವಿಡ್‌ ಸಂದರ್ಭದಲ್ಲಿಡಿ ದರ್ಜೆ ನೌಕರರು, ನರ್ಸ್‌ಗಳಿಗೆ ಸಂಬಳಇಲ್ಲದಿದ್ದರೆ ಹೇಗೆ ಜೀವನ ಸಾಗಿಸುತ್ತಾರೆ.ಮಾನವೀಯ ರೀತಿ ಕೆಲಸ ಮಾಡಿ,ಇಲ್ಲದಿದ್ದರೆ ಬೇರೆ ಜಿಲ್ಲೆಗೆ ವರ್ಗಮಾಡಿಸಿಕೊಂಡು ಹೋಗಿ ಎಂದು ಹೇಳಿದರು.

ಡೀಸಿ, ಸಿಇಒಗೆ ಮನೆ ನಿರ್ಮಾಣ: ಜಿಲ್ಲೆಯಲ್ಲಿ ಕೆಲಸ ಮಾಡುವ ಅಧಿಕಾರಿಗಳು ಜನರಿಗೆಅನುಕೂಲವಾಗುವ ರೀತಿ ಕೆಲಸಮಾಡಬೇಕು. ಕಾಟಾಚಾರಕ್ಕೆ ಬಂದುಹೋದರೆ ಆಗದು. ಕೋವಿಡ್ 2ನೇ ಅಲೆಬರುತ್ತಿದೆ. ಅದಕ್ಕೆ ಪೂರಕವಾಗಿಕಾರ್ಯಕ್ರಮ ರೂಪಿಸಬೇಕು. ಕುಡಿಯುವ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು. ಕೋವಿಡ್ ಲಸಿಕೆ ಬಂದರೆ ದಾಸ್ತಾನು ಮಾಡಲು, ಈಗಾಗಲೇ ರೂಪುರೇಷೆಕೈಗೊಂಡು, ಜಿಲ್ಲಾಧಿಕಾರಿ, ಜಿಪಂ ಸಿಇಒಗೆ ಮನೆ ನಿರ್ಮಿಸಲು ದೊಡ್ಡಬಳ್ಳಾಪುರದ ಬಳಿ ಜಾಗ ಗುರುತಿಸಲಾಗಿದೆ. ಶೀಘ್ರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ನೀರಿಗೆ ತೊಂದರೆ ಆಗದಿರಲಿ: ಜಿಪಂ ಸಿಇಒ ಎಂ.ಆರ್‌.ರವಿಕುಮಾರ್‌ ಮಾತನಾಡಿ, ಬೇಸಿಗೆ ಸಮೀಪಿಸುತ್ತಿರುವ ಕಾರಣ 4 ತಾಲೂಕುಗಳಲ್ಲಿ ಕುಡಿಯುವನೀರಿಗೆ ಎಲ್ಲೆಲ್ಲಿ ಸಮಸ್ಯೆ ಇರುವುದೆಂದು ನೋಡಿಕೊಂಡು, ನಿರ್ವಹಣೆ ಮಾಡಲುಗ್ರಾಪಂಗೆ ಹೊಣೆ ನೀಡಿದರೆ ಯಾವುದೇ ಸಮಸ್ಯೆಗಳು ಬರುವುದಿಲ್ಲ ಎಂದರು.

ಸರ್ಕಾರ ವಿವಿಧ ಇಲಾಖೆಗಳ ಕಾಮಗಾರಿಗೆ ಈಗಾಗಲೇ ಹಣಬಿಡುಗಡೆಗೊಳಿಸಿದೆ. ಸಂಬಂಧಪಟ್ಟ ಅಧಿಕಾರಿಗಳು ಸಂಪೂರ್ಣ ಬಳಸಿಕೊಂಡುಮಾ.5 ರೊಳಗೆ ಖಜಾನೆಗೆ ಹಣಬಳಕೆಪತ್ರವನ್ನು ಸಲ್ಲಿಸಬೇಕು. ಹಣ ಒಂದು ವೇಳೆದುರುಪಯೋಗವಾದಲ್ಲಿ ಸಂಬಂಧಿಸಿದಇಲಾಖೆಯ ಅಧಿಕಾರಿಗಳ ಸಂಬಳದಿಂದ ನಷ್ಟ ಪಡೆಯಲಾಗುವುದು ಎಂದು ತೀರ್ಮಾನಿಸಿ ಆದೇಶ ಹೊರಡಿಸಿದೆ ಎಂದರು.

ಜಿಪಂ ಉಪಕಾರ್ಯದರ್ಶಿ ಕರಿಯಪ್ಪ,ಯೋಜನಾಧಿಕಾರಿ ವಿನುತಾರಾಣಿ, ಜಿಲ್ಲಾಲೆಕ್ಕಾಧಿಕಾರಿ ರಮೇಶ್‌ ರೆಡ್ಡಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮೀನಾರಾಯಣಪ್ಪ, ಕೈಗಾರಿಕೆ ಮತ್ತು ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ, ಜಿಪಂ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತಿತತರು ಇದ್ದರು.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.