ಹೈನುಗಾರಿಕೆ ಪ್ರೋತ್ಸಾಹಿಸಲು ಬದ್ಧ: ಬಚ್ಚೇಗೌಡ


Team Udayavani, Sep 16, 2019, 3:00 AM IST

hynugaarike

ಹೊಸಕೋಟೆ: ಹೈನುಗಾರಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಸುಗಳ ಖರೀದಿಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಹಾಯಧನ ಒದಗಿಸುವ ಬಗ್ಗೆ ನಬಾರ್ಡ್‌ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಂಸದ ಬಿ.ಎನ್‌.ಬಚ್ಚೇಗೌಡ ಹೇಳಿದರು.

ನಗರದ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತಾಲೂಕಿನ ಜನತೆ ಹೆಚ್ಚಾಗಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದು, ಪ್ರತಿದಿನ 1.36 ಲಕ್ಷ ಲೀಟರ್‌ ಹಾಲು ಸಂಗ್ರಹಣೆಗೊಳ್ಳುತ್ತಿದೆ. 1997ರಲ್ಲಿ ಶೀಥಲೀಕರಣ ಕೇಂದ್ರ ಸ್ಥಾಪಿಸಿದ ನಂತರ ಹಾಲು ಹಾಳಾಗಿ ರೈತರು ಅನುಭವಿಸುತ್ತಿದ್ದ ನಷ್ಟ ಈಗ ನಿವಾರಣೆಗೊಂಡಿದೆ ಎಂದರು.

ಹಸಿರು ಮೇವಿನ ಕೊರತೆ: ತಾಲೂಕಿನಲ್ಲಿ ಬರ ಪರಿಸ್ಥಿತಿಯಿಂದಾಗಿ ಹಸಿರು ಮೇವಿನ ತೀವ್ರ ಕೊರತೆಯಿದ್ದು, ರಾಸುಗಳ ಪೋಷಣೆಗೆ ಪಶು ಆಹಾರವನ್ನೆ ಅವಲಂಬಿಸಬೇಕಾಗಿದೆ. ಪ್ರತಿ ತಿಂಗಳೂ 65 ಸಾವಿರ ಮೆಟ್ರಿಕ್‌ ಟನ್‌ಗಳಷ್ಟು ಬೇಡಿಕೆಯಿದ್ದು ಉತ್ಪಾದನಾ ಘಟಕಗಳು ಕಡಿಮೆಯಿರುವ ಕಾರಣ ಒಕ್ಕೂಟಕ್ಕೆ 45 ಸಾವಿರ ಮೆಟ್ರಿಕ್‌ ಟನ್‌ಗಳನ್ನಷ್ಟೇ ಪೂರೈಸಲು ಸಾಧ್ಯವಾಗುತ್ತಿದೆ. ಇದರಿಂದಾಗಿ ರೈತರು ಅಧಿಕ ಹಣ ನೀಡಿ ಖಾಸಗಿಯಾಗಿ ಪಶು ಆಹಾರ ಖರೀದಿಸಬೇಕಾದ್ದು ಅನಿವಾರ್ಯವಾಗಿದ್ದು ರಾಸುಗಳ ನಿರ್ವಹಣಾ ವೆಚ್ಚ ಹೆಚ್ಚಾಗಿದೆ ಎಂದು ತಿಳಿಸಿದರು.

ಜಾಗ ಮಂಜೂರು: ರೈತರ ಬೇಡಿಕೆಗೆ ಅನುಗುಣವಾಗಿ ಸಕಾಲದಲ್ಲಿ ಪಶು ಆಹಾರ ಪಡೆಯುವುದೇ ಅಲ್ಲದೆ ಸ್ಥಳೀಯರಿಗೂ ಉದ್ಯೋಗವಕಾಶಗಳು ದೊರಕಲು ಒಕ್ಕೂಟ ನೀಡಿರುವ ಪ್ರಸ್ತಾವನೆ ಅನ್ವಯ ತಾಲೂಕಿನ ಜಡಿಗೇನಹಳ್ಳಿ ಹೋಬಳಿಯಲ್ಲಿ ಕನಿಷ್ಠ 25 ಎಕರೆಯಷ್ಟು ಸರಕಾರಿ ಜಾಗ ಮಂಜೂರಾತಿಗೆ ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಹೇಳಿದರು.

ತಪಾಸಣಾ ಶಿಬಿರ: ಜಾನುವಾರುಗಳಿಗೆ ಸೋಂಕು ರೋಗ ಹರಡುವುದನ್ನು ತಡೆಗಟ್ಟಲು ಪಶುಪಾಲನಾ ಇಲಾಖೆಯ ಸಹಯೋಗದಲ್ಲಿ ಗ್ರಾಮಗಳಲ್ಲಿ ತಪಾಸಣಾ ಶಿಬಿರಗಳನ್ನು ಆಯೋಜಿಸಿ ರೈತರಿಗೆ ಸೂಕ್ತ ತಿಳಿವಳಿಕೆ ನೀಡುವ ಬಗ್ಗೆ ಒಕ್ಕೂಟ ಗಮನಹರಿಸಬೇಕು. ರಾಸುಗಳ ಪೋಷಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಆ್ಯಂಟಿಬಯೊಟಿಕ್ಸ್‌ಗೆ ಬಳಸುವ ಬದಲು ಸಾವಯವ ಉತ್ಪನ್ನಗಳನ್ನು ಬಳಸುವುದರಿಂದ ಗ್ರಾಹಕರು ಸಹ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಆಮದು ನಿಷೇಧ: ವಿದೇಶದ ಹಾಲಿನ ಉತ್ಪನ್ನಗಳ ಆಮದು ನಿಷೇಧಿಸುವ ಬಗ್ಗೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗುವುದು. ತಾಲೂಕಿನಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಂತ ಕಟ್ಟಡ ನಿರ್ಮಾಣಕ್ಕೆ ಸಂಸದರ ಸ್ಥಳೀಯ ಅಭಿವೃದ್ಧಿ ನಿಧಿಯಿಂದ ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಿದರು. ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ, ನಿರ್ದೇಶಕರಾದ ಸಿ.ಮಂಜುನಾಥ್‌, ಕೆ.ಎಂ.ಮಂಜುನಾಥ್‌, ತಾಲೂಕು ಹಾಲು ಉತ್ಪಾದಕ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್‌. ಕಾಮಯ್ಯ, ಪದಾಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.