ಸಂಸ್ಕರಣಾ ಘಟಕ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ


Team Udayavani, Sep 7, 2020, 12:31 PM IST

ಸಂಸ್ಕರಣಾ ಘಟಕ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

ದೇವನಹಳ್ಳಿ: ಲಾಕ್‌ಡೌನ್‌ನಿಂದಾಗಿ ಕೋಲ್ಡ್‌ ಸ್ಟೋರೇಜ್‌ನ ಬೆಲೆ ಗೊತ್ತಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತರಕಾರಿ ಹಣ್ಣು ಸಂಸ್ಕರಣಾ ಘಟಕಗಳ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ತಿಳಿಸಿದರು.

ತಾಲೂಕಿನ ಪೂಜನಹಳ್ಳಿ ಗಾಂಧಿ ಶತಮಾನದ ತೋಟದಲ್ಲಿ ಕರ್ನಾಟಕ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮದಿಂದ ನಿರ್ಮಿಸುತ್ತಿರುವ ಶೀತಲ ಸರಪಳಿ ಹಾಗೂ ಹಣ್ಣು ಮತ್ತು ತರಕಾರಿಗಳ ಸಂಸ್ಕರಣಾ ಘಟಕದ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು.

24.60 ಕೋಟಿ ವೆಚ್ಚದಲ್ಲಿ ನಿರ್ಮಾಣ: ಈ ಭಾಗ ದಲ್ಲಿ ಅತೀ ಹೆಚ್ಚು ರೈತರು ಇರುವಜಾಗದಲ್ಲಿಯೇ ಹಣ್ಣು, ತರಕಾರಿ, ಪ್ರತಿನಿತ್ಯ ಬೆಂಗಳೂರು ಇತರೆ ಕಡೆಗಳಿಗೆ ಕಳುಹಿಸಿಕೊಡುತ್ತಿದ್ದಾರೆ. ಈ ಭಾಗದ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಶೀತಲ ಸರಪಳಿ, ಹಣ್ಣು ತರಕಾರಿ ಶೀತಲ ಕೇಂದ್ರವನ್ನು 24.60 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗು ತ್ತಿದ್ದು, ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಿ ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಬೇಕು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಕ್ಕದಲ್ಲಿಯೇ ಇಂತಹ ಘಟಕವಾಗುತ್ತಿರುವುದರಿಂದ ರಫ್ತು ಮಾಡಲು ಅನುಕೂಲವಾಗುತ್ತದೆ. ಅಧಿಕಾರಿಗಳು ಘಟಕದ ಕಾಮಗಾರಿ ಕೆಲಸದ ವೇಗವನ್ನು ಹೆಚ್ಚಿಸಬೇಕು ಎಂದು ಹೇಳಿದರು.

ತಪ್ಪು ಸರಿಪಡಿಸಬಹುದು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಬೆಳೆ ಸಮೀಕ್ಷೆ ಮಾಡಿಸುವುದಕ್ಕೆ ರೈತರು ಹಿಂದೇಟು ಹಾಕುತ್ತಾರೆ. ಆದರೆ ಈ ಬಾರಿ ರೈತರಿಂದಲೇ ಬೆಳೆ ಸಮೀಕ್ಷೆಯನ್ನು ಸ್ಮಾರ್ಟ್‌ಫೋನ್‌ನಲ್ಲಿ ಬೆಳೆ ಸಮೀಕ್ಷೆ ಆ್ಯಪ್‌ ಮೂಲಕ ಬೆಳೆಗಳ ವಿವರಗಳನ್ನು ಅಪ್‌ಲೋಡ್‌ ಮಾಡಬಹುದು. ಈ ಭಾಗದಲ್ಲಿ ಅತೀ ಹೆಚ್ಚು ರಾಗಿ ಬೆಳೆಯುವುದರಿಂದ ರಾಗಿ ಖರೀದಿ ಸಂದರ್ಭದಲ್ಲಿಪಹಣಿಗ ಳಲ್ಲಿ ಒಂದೊಂದು ರೀತಿ ತಪ್ಪು ಇರುತ್ತದೆ ಎಂದು ರೈತರು ತಮ್ಮ ಗಮನಕ್ಕೆ ತಂದಿದ್ದರು. ಬೆಳೆ ಸಮೀಕ್ಷೆ ಆ್ಯಪ್‌ ಮೂಲಕ ರೈತರು ಮಾಡಿಕೊಂಡಾಗ ಈ ರೀತಿ ಯ ತಪ್ಪುಗಳನ್ನು ಸರಿದೂಗಿಸಬಹುದು ಎಂದರು.

ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ, ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಜಯಸ್ವಾಮಿ, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಮಹಾಂತೇಶ್‌ ಮುರು ಗೋಡ್‌, ತಹಶೀಲ್ದಾರ್‌ ಅಜಿತ್‌ಕುಮಾರ್‌ ರೈ, ಉಪನಿರ್ದೇಶಕಿ ವಿನುತಾ, ತಾಲೂಕು ಸಹಾಯಕ ನಿರ್ದೇಶಕಿ ವೀಣಾ ಇದ್ದರು.

ರಫ್ತು ಮಾಡಲು ಅನುಕೂಲ :  ಕರ್ನಾಟಕ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫು¤ ನಿಗಮದ ವ್ಯವಸ್ಥಾಪಕ ಬಿ.ಶಿವರಾಜ್‌ ಮಾತನಾಡಿ, 24.60 ಕೋಟಿ ರೂ. ವೆಚ್ಚದಲ್ಲಿ ಶೀತಲ ಘಟಕವನ್ನು ನಿರ್ಮಾಣ ಮಾಡಲಾಗುತ್ತಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹತ್ತಿರದಲ್ಲಿಯೇ ಇರುವುದರಿಂದ ದೇಶ ವಿದೇಶಗಳಿಗೆ ಹಣ್ಣು-ತರಕಾರಿ ರಫು¤ ಮಾಡಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಶೀತಲ ಸರಪಳಿ ಘಟಕ, ಶೀತಲ ಗೃಹ, ಪ್ಯಾಕ್‌ಹೌಸ್‌, ಹಣ್ಣು ಮಾಗಿಸುವ ಘಟಕ, ಬಿಸಿ ನೀರಿನಲ್ಲಿ ಶಾಖೋಪಕರಣ ಘಟಕ, ಪ್ರಯೋಗಾಲಯ ಮುಂತಾದವು ಗಳನ್ನು ಸ್ಥಾಪಿಸಲಿದೆ. ಈ ಎಲ್ಲಾ ಘಟಕಗಳಲ್ಲಿ ಒಣದ್ರಾಕ್ಷಿ, ದಾಳಿಂಬೆ, ನಿಂಬೆ ಸೇರಿದಂತೆ ವಿವಿಧ ರೀತಿಯ ಬೇಳೆ ಕಾಳುಗಳನ್ನು ಸಂಗ್ರಹಿಸಲಾಗುವುದು. ದೇಶ-ವಿದೇಶಗಳಲ್ಲಿ ಈ ಉತ್ಪನ್ನಗಳಿಗೆ ಬೇಡಿಕೆ ಹೊಂದಿದೆ. ಆದ್ದರಿಂದ ತೋಟಗಾರಿಕಾ ಉತ್ಪನ್ನಗಳ ರಫ್ತಿಗೆ ಹಾಗೂ ಸ್ಥಳೀಯ ಮಾರುಕಟ್ಟೆಗೆ ಅನುಕೂಲವಾಗುವಂತೆ ಹೆಚ್ಚು ದಿನ ಉತ್ಪನ್ನಗಳನ್ನು ಹಾಳಾಗದಂತೆ ಸಂಗ್ರಹಿಸಿಡಲು, ಸಮಗ್ರ ಶೀತಲ ಘಟಕವು ರೈತ ಸಮುದಾಯಕ್ಕೆ ಉಪಯೋಗವಾಗಲಿದೆ ಎಂದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.