ಅಧಿಕಾರಕ್ಕಾಗಿ ಯಾವ ಪಕ್ಷಕ್ಕಾದರೂ ಜೆಡಿಎಸ್ ‌ಬೆಂಬಲ


Team Udayavani, Dec 12, 2020, 2:05 PM IST

ಅಧಿಕಾರಕ್ಕಾಗಿ ಯಾವ ಪಕ್ಷಕ್ಕಾದರೂ ಜೆಡಿಎಸ್ ‌ಬೆಂಬಲ

ದೇವನಹಳ್ಳಿ: ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರಾದ್ಯಂತ ರೈತರುಪ್ರತಿಭಟಿಸುತ್ತಿದ್ದಾರೆ. ರೈತರ ಪಕ್ಷ ಎಂದು ಹೇಳುವ ಜೆಡಿಎಸ್‌ನವರು ಇದೀಗ ಬಿಜೆಪಿಗೆ ಬೆಂಬಲ ನೀಡಿರುವುದು ರೈತರ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುವುದು ತಿಳಿಯುತ್ತದೆ. ಅಧಿಕಾರದ ಆಸೆಗಾಗಿ ಯಾವ ಪಕ್ಷಕ್ಕಾದರೂ ಬೆಂಬಲಿಸುತ್ತಾರೆ ಎಂದು ಮಾಜಿ ಸಚಿವಕೃಷ್ಣಬೈರೇಗೌಡ ಆರೋಪಿಸಿದರು.

ತಾಲೂಕಿನ ಚಿಕ್ಕಸಣ್ಣೆ ಬಳಿ ಇರುವ ಎಸ್‌ಎಸ್‌ಬಿ ಕನ್‌ವೆನ್ಷನ್‌ ಹಾಲ್‌ನಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮುಖಂಡರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಎಪಿಎಂಸಿಕಾಯ್ದೆಯನ್ನು ತಿದ್ದುಪಡಿ ತಂದು, ರೈತರ ಮೇಲೆದುಷ್ಪರಿಣಾಮ ಬೀರಲಿದೆ. ಈ ಕಾಯ್ದೆಯಿಂದ ಅಂಬಾನಿ, ಅದಾನಿಯಂತಹವರು ಅನುಕೂಲ ಮಾಡಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರೈತರ ಭವಿಷ್ಯವನ್ನೇ ಕಿತ್ತುಕೊಳ್ಳುವ ಉನ್ನಾರ ನಡೆಯುತ್ತಿದೆ ಎಂದರು.

ಬಯಲು ಸೀಮೆಯ ಜನರಿಗೆ ಶಾಶ್ವತ ನೀರಾವರಿ ಒದಗಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹೆಬ್ಟಾಳ ಮತ್ತು ನಾಗವಾರ ಕೆರೆಯ ನೀರನ್ನುಶುದ್ಧಿಕರಿಸಿ, ಈ ಭಾಗದ ಕೆರೆಗಳಿಗೆ ಹರಿಸಲಾಯಿತು. ಇನ್ನೂ ಅತೀ ಹೆಚ್ಚು ಕೆರೆಗಳನ್ನು ಸೇರಿಸಲು ಸರ್ಕಾರದಮೇಲೆ ಒತ್ತಡ ತರಲಾಗುವುದು. ಅಧಿಕಾರ ಇದ್ದರೂಅಭಿವೃದ್ಧಿಗೆ ಒತ್ತು ನೀಡುತ್ತೇವೆ. ಅಧಿಕಾರ ಇಲ್ಲದಿದ್ದರೂ ಹೋರಾಟದ ಮೂಲಕ ಜನರಿಗೆ ಕೆಲಸ ಮಾಡುತ್ತೇವೆ. ಎತ್ತಿನ ಹೊಳೆ ಯೋಜನೆ ಸ್ಥಗಿತಗೊಂಡಿದೆ. ದೊಡ್ಡಬಳ್ಳಾಪುರ ಹತ್ತಿರ ಭೂ ಸ್ವಾಧೀನ ಪ್ರಕ್ರಿಯೆಯಾಗಿದ್ದರೂ ಈಗಿನ ಬಿಜೆಪಿ ಸರ್ಕಾರಕ್ಕೆ ಜಮೀನಿನ ದರ ನಿಗದಿಗೊಳಿಸಲು ಇವರ ಕೈಯಲ್ಲಿ ಆಗುತ್ತಿಲ್ಲ. ನಮ್ಮ ಕಾಂಗ್ರೆಸ್‌ ಸರ್ಕಾರ ಬಂದರೆ, ಎತ್ತಿನ ಹೊಳೆ ಯೋಜನೆ ಕಾಮಗಾರಿಯ ವೇಗ ಹೆಚ್ಚಿಸಲಾಗುತ್ತದೆ ಎಂದರು.

ಗ್ರಾಪಂ ಚುನಾವಣೆಯಲ್ಲಿ ಒಗ್ಗಟ್ಟಾಗಿ ಶ್ರಮಿಸಬೇಕು. ಪ್ರತಿ ಮನೆ ಮನೆಗೆ ಹೋಗಿ ಕಾರ್ಯಕರ್ತರು ಮುಖಂಡರು ಕಾಂಗ್ರೆಸ್‌ ಸರ್ಕಾರವಿದ್ದಾಗ ಜನಪರ ಆಡಳಿತ ನೀಡಿರುವ ಬಗ್ಗೆಮನವರಿಕೆ ಮಾಡಿಕೊಡಬೇಕು. ಕಂಪನಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿರುವ ಸರ್ಕಾರ ಕೃಷಿ ನೂತನ ಮಸೂದೆಗಳನ್ನು ಜಾರಿತಂದು ರೈತರಿಗೆ ಅನ್ಯಾಯ ಎಸಗುತ್ತಿದೆ. ರೈತರು ಇದೀಗ ಬೀದಿಗೆ ಬರಲುಬಿಜೆಪಿಸರ್ಕಾರದದುರಾಡಳಿತಸಾಕ್ಷಿಯಾಗಿದೆ ಎಂದರು.

ಇದೇವೇಳೆಮಾಜಿಸಂಸದಸಿ.ನಾರಾಯಣಸ್ವಾಮಿ, ಮಾಜಿ ಶಾಸಕರಾದ ಮುನಿನರಸಿಂಹಯ್ಯ, ವೆಂಕಟಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಿ.ಪ್ರಸನ್ನಕುಮಾರ್‌, ಉಪಾಧ್ಯಕ್ಷ ವಿ.ಶಾಂತಕುಮಾರ್‌, ಪ್ರಧಾನ ಕಾರ್ಯದರ್ಶಿ ಎಸ್‌.ಪಿ.ಮುನಿರಾಜು, ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯ ಉಪಾಧ್ಯಕ್ಷ ಸಿ.ಜಗನ್ನಾಥ್‌, ಕಾರ್ಯದರ್ಶಿ ಎಸ್‌.ಆರ್‌. ರವಿಕುಮಾರ್‌, ಜಿಪಂ ಸದಸ್ಯರಾದ ಲಕ್ಷ್ಮೀ ನಾರಾಯಣ್‌, ಕೆ.ಸಿ.ಮಂಜುನಾಥ್‌, ಅನಂತ ಕುಮಾರಿ, ಜಿಪಂ ಮಾಜಿ ಅಧ್ಯಕ್ಷ ಬಿ.ರಾಜಣ್ಣ, ತಾಪಂ ಅಧ್ಯಕ್ಷೆ ಶಶಿಕಲಾಆನಂದ್‌, ಮಾಜಿ ಅಧ್ಯಕ್ಷೆ ಚೈತ್ರಾವೀರೇಗೌಡ, ಕೆಪಿಸಿಸಿ ಸದಸ್ಯರಾದ ಚೇತನ್‌ ಗೌಡ, ಚಿನ್ನಪ್ಪ, ತಾಪಂ ಮಾಜಿ ಸದಸ್ಯ ಲಕ್ಷ್ಮಣ್‌ ಗೌಡ, ಯುವ ಮುಖಂಡರಾದ ಕೆ.ಆರ್‌.ನಾಗೇಶ್‌ ಇತರರು ಹಾಜರಿದ್ದರು.

ಚರ್ಮೋದ್ಯಮದ ಮೇಲೆ ದುಷ್ಪರಿಣಾಮ :

ವಿರೋಧ ಪಕ್ಷಗಳ ಒಪ್ಪಿಗೆ ಪಡೆಯದೆ ವಿಧಾನ ಸಭೆಯಲ್ಲಿ ಗೋಹತ್ಯೆ ನಿಷೇಧ ಮಸೂದೆಯನ್ನುಅಂಗೀಕರಿಸಿ, ರೈತರು ಹಾಗೂ ಚರ್ಮೋದ್ಯಮದಮೇಲೆ ತೀವ್ರ ಪರಿಣಾಮ ಬೀರಲಿದೆ. ವಯಸ್ಸಾದ ಜಾನುವಾರುಗಳನ್ನು ರೈತರು ಇಟ್ಟುಕೊಂಡು ಏನು ಮಾಡುತ್ತಾರೆ. ಅದನ್ನು ನೇರ ವಾಗಿ ಸರ್ಕಾರವೇ ಖರಿಧಿಸುವಂತಾಗಲಿ ಬಿಜೆಪಿ ಮುಖಂಡರ ಮನೆಯಲ್ಲೂ, ಜಮೀನಿನಲ್ಲೂ ಸಾಕಲಿ ಎಂದು ಲೇವಡಿ ಮಾಡಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.