ಇ.ಡಿ. ತನಿಖೆ ವಿರೋಧಿಸಿ ಪಥಸಂಚಲನ


Team Udayavani, Jul 26, 2022, 4:30 PM IST

ಇ.ಡಿ. ತನಿಖೆ ವಿರೋಧಿಸಿ ಪಥಸಂಚಲನ

ದೊಡ್ಡಬಳ್ಳಾಪುರ: ನ್ಯಾಷನಲ್‌ ಹೆರಾಲ್ಡ್ ಪ್ರಕರಣದ ಹೆಸರಿನಲ್ಲಿ ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆ ಜಾರಿ ನಿರ್ದೇಶನಾಲಯವನ್ನು ದುರುಪಯೋಗ ಮಾಡಿಕೊಂಡು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ, ಕಾಂಗ್ರೆಸ್‌ ಸೇವಾದಳದ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಸಿದರು.

ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ ಕಾರ್ಯಕರ್ತರು, ತಾಲೂಕು ಕಚೇರಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಕಾಂಗ್ರೆಸ್‌ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್‌ ಮಾತನಾಡಿ, ಜನಜಾಗೃತಿ ಮೂಡಿಸುವ ಸಲುವಾಗಿಹಾಗೂ ರಾಜಕೀಯ ದುರುದ್ದೇಶದಿಂದ ಸೋನಿಯಾ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿರುವ ಬಿಜೆಪಿಸರ್ಕಾರದ ವಿರುದ್ಧ ಜನರ ಗಮನ ಸೆಳೆಯಲು, ಈಪಥಸಂಚಲನವನ್ನು ನಡೆಸಲಾಗುತ್ತಿದೆ. 52 ವರ್ಷಆರ್‌ಎಸ್‌ಎಸ್‌ ಕಚೇರಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುತ್ತಿರಲಿಲ್ಲ. ಜನ ಸಂಘವಾಗಲಿ, ಆರ್‌ಎಸ್‌ಎಸ್‌ ಅವರಿಗಾಗಲಿ ತ್ರಿವರ್ಣ ದ್ವಜದ ಬಗ್ಗೆ ಗೌರವ ಇರಲಿಲ್ಲ.ತ್ರಿವರ್ಣ ಧ್ವಜವನ್ನು ಅಪಮಾನಿಸಲು ಪಾಲಿಸ್ಟರ್‌ ಧ್ವಜ ಬಳಕೆಗೆ ಮೂಲಕ ಮುಂದಾಗಿದ್ದಾರೆ ಎಂದರು.

ರಾಷ್ಟ್ರಧ್ವಜಕ್ಕೆ ಅವಮಾನ: ಭಾರತದ ದೇಶದ ಭೂಭಾಗವನ್ನು ವಶಪಡಿಸಿಕೊಂಡಿರುವ ಚೀನಾದಿಂದ ಪಾಲಿಸ್ಟರ್‌ ಧ್ವಜ ತರಿಸುವ ರಾಷ್ಟ್ರ ದ್ರೋಹದಕೆಲಸವನ್ನು ಕೇಂದ್ರದ ಬಿಜೆಪಿ ಸರ್ಕಾರ ಮಾಡುತ್ತಿದೆ. ಧ್ವಜಸಂಹಿತೆ -2002ಕ್ಕೆ ತಿದ್ದುಪಡಿ ತಂದು ಪಾಲಿಸ್ಟರ್‌ ಧ್ವಜದ ಬಳಕೆಗೆ ಅನುಮತಿ ನೀಡುವ ಮೂಲಕ ಬಿಜೆಪಿ ಸರ್ಕಾರ ದೇಶ, ಗಾಂಧೀಜಿ ಹಾಗೂ ರಾಷ್ಟ್ರಧ್ವಜಕ್ಕೆ ಅವಮಾನ ಮಾಡುತ್ತಿದೆ ಎಂದರು.

ಜಾರಿ ನಿರ್ದೇಶನಾಲಯ ತನಿಖೆಗೆ ಖಂಡನೆ: ಸ್ವಾತಂತ್ರ್ಯ ನಂತರ ಕಾಂಗ್ರೆಸ್‌ ಸರ್ಕಾರಗಳು ಹಲವಾರು ಸಾರ್ವಜನಿಕ ಉದ್ದಿಮೆ ಸ್ಥಾಪಿಸಿತ್ತು. 20ಕ್ಕೂ ಹೆಚ್ಚುಅಣೆಕಟ್ಟುಗಳನ್ನು ನಿರ್ಮಿಸಿತ್ತು. ಆದರೆ, ಈಗಿನ ಬಿಜೆಪಿ ಸರ್ಕಾರ ಅವುಗಳನ್ನು ಮಾರಾಟ ಮಾಡುತ್ತಿದ್ದಾರೆ.ರಾಜ್ಯದಲ್ಲಿ ಸ್ವತಃ ಶಕ್ತಿಯಿಂದ ಅಧಿಕಾರಕ್ಕೆ ಬರದೇಆಪರೇಷನ್‌ ಕಮಲದ ಮೂಲಕ ಅಧಿಕಾರಪಡೆದಿದ್ದಾರೆ. ದೇಶದಲ್ಲಿ 16 ಕೋಟಿ ಉದ್ಯೋಗದಭರವಸೆಗೆ ಬರೀ 40 ಲಕ್ಷ ಉದ್ಯೋಗ ನೀಡಿದ್ದಾರೆ.ಅಗ್ನಿಪಥ್‌ನಿಂದ ಯುವಕರಿಗೆ ಉದ್ಯೋಗದಭವಿಷ್ಯ ಇಲ್ಲವಾಗಿದೆ. ನ್ಯಾಷನಲ್‌ ಹೆರಾಲ್ಡ್‌ನಲ್ಲಿಸಿಬ್ಬಂದಿಗೆ ಹಾಗೂ ಪತ್ರಕರ್ತರಿಗೆ ನೀಡಿದ್ದ ಸಂಬಳವನ್ನು ದುರುಪಯೋಗ ಎಂದುಆರೋಪಿಸಿ, ರಾಜಕೀಯ ದುರುದ್ದೇಶದಿಂದ ಜಾರಿನಿರ್ದೇಶನಾಲಯದಿಂದ ತನಿಖೆ ಮಾಡಲಾಗು ತ್ತಿರುವುದು ಖಂಡನೀಯ ಎಂದರು.

ಜನೋತ್ಸವ ಸಾಧನೆಯಿಲ್ಲದ ಸುಳ್ಳಿನ ಉತ್ಸವ: ಶಾಸಕ ಟಿ. ವೆಂಕಟರಮಣಯ್ಯ ಮಾತನಾಡಿ, 2013ರಿಂದ 18ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಇಎಸ್‌ಐಆಸ್ಪತ್ರೆ, ಯಲಹಂಕ- ದೊಡ್ಡಬಳ್ಳಾಪುರ ರಸ್ತೆಕಾಮಗಾರಿ, ತಾಯಿ-ಮಗು ಆಸ್ಪತ್ರೆ ಸೇರಿದಂತೆಅನೇಕ ಅಭಿವೃದ್ಧಿ ಕಾರ್ಯ ಮಾಡಲಾಗಿದ್ದು, ಸಾಧನಾ ಸಮಾವೇಶ ಮಾಡುವುದರಲ್ಲಿ ಅರ್ಥವಿತ್ತು. ಆದರೆ,ಬಿಜೆಪಿ ಸರ್ಕಾರದ ಸಾಧನೆ ತಾಲೂಕಿಗೆ ಏನೆಂಬುದೇ ತಿಳಿಯದೆ ಸಾಧನ ಸಮಾವೇಶ ಮಾಡಲು ಮುಂದಾಗಿದ್ದಾರೆ. ಈ ಜನೋತ್ಸವ ಸಾಧನೆಯಿಲ್ಲದ ಸುಳ್ಳಿನ ಉತ್ಸವವಷ್ಟೇ ಎಂದರು.

ಅಖಿಲ ಬಾರತ ಕಾಂಗ್ರೆಸ್‌ ಸೇವಾದಳದ ಕಾರ್ಯದರ್ಶಿ ಬಲರಾಮ್‌ಸಿಂಗ್‌ ಬದರಿಯಾ, ಸೇವಾದಳದ ರಾಜ್ಯಾಧ್ಯಕ್ಷ ಎಂ. ರಾಮಚಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎಂ. ಕಾಂತರಾಜ್‌, ನಗರಸಭಾ ಸದಸ್ಯ ಆನಂದ್‌, ನಾಗವೇಣಿ ಹಾಗೂ ಕಾಂಗ್ರೆಸ್‌ ಸೇವಾದಳ ಹಾಗೂ ಕಾಂಗ್ರೆಸ್‌ ಪಕ್ಷದ ವಿವಿಧ ಘಟಕಗಳು ಮುಖಂಡರು ಇದ್ದರು.

ಬಿಜೆಪಿ ಜನೋತ್ಸವ, ಸಾಧನೆ ಇಲ್ಲದ ಉತ್ಸವ :

ಸ್ವಾತಂತ್ರ್ಯ ನಂತರ ದೇಶವನ್ನು ಸದೃಢವಾನ್ನಾಗಿಸಿದ ಕಾಂಗ್ರೆಸ್‌ ಸರ್ಕಾರದ ಕಾರ್ಯಗಳ ಕುರಿತು,ಯುವಜನತೆ ಮನೆಯಲ್ಲಿನ ಹಿರಿಯರಿಂದತಿಳಿದುಕೊಳ್ಳಬೇಕಿದೆ. ಬಿಜೆಪಿ ಜನೋತ್ಸವಕಾರ್ಯಕ್ರಮ ಯಾವುದೇ ಸಾಧನೆ ಇಲ್ಲದಉತ್ಸವವಾಗಿದೆ. ಸರ್ಕಾರ ಅಧಿಕಾರ ಬಂದ ನಂತರ ರಾಜ್ಯಕ್ಕಾಗಲಿ, ದೊಡ್ಡಬಳ್ಳಾಪುರ ತಾಲೂಕಿಗಾಗಲಿ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ, ಬೆಲೆಏರಿಕೆಯೇ ಬಿಜೆಪಿ ಸಾಧನೆಯಾಗಿದ್ದು, ಸಾಧನೆಯ ಅರ್ಥವನ್ನು ಬಿಜೆಪಿ ಮುಖಂಡರಿಗೆತಾಲೂಕಿನ ಜನತೆ ಕೇಳಬೇಕಿದೆ ಎಂದು ಶಾಸಕ ಟಿ. ವೆಂಕಟರಮಣಯ್ಯ ಹೇಳಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.