ಜೆಸಿಬಿಯಿಂದ ಸಂಪರ್ಕ ರಸ್ತೆ ಅಗೆದ ಕಿಡಿಗೇಡಿಗಳು


Team Udayavani, Jun 9, 2019, 3:00 AM IST

jcb-inda

ದೇವನಹಳ್ಳಿ: ತಾಲೂಕಿನ ಕಸಬ ಹೋಬಳಿ ಅಣ್ಣೇಶ್ವರ ಗ್ರಾಮದಿಂದ ಯರಪ್ಪನ ಹಳ್ಳಿ ಮತ್ತು ದೊಡ್ಡ ಸಣ್ಣೆ ಗ್ರಾಮಗಳನ್ನು ಸಂಪರ್ಕಿಸುವ ಭುವನಹಳ್ಳಿ ರಸ್ತೆಯನ್ನು ಶುಕ್ರವಾರ ರಾತ್ರಿ ಕಿಡಿಗೇಡಿಗಳು ಜೆಸಿಬಿಯಿಂದ ಅಗೆದಿದ್ದಾರೆ. ಇದರಿಂದ ವಾಹನ ಸವಾರರು ಸುತ್ತಿ ಬಳಸಿ ಹೋಗುವಂತಾಯಿತು.

ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆ ಅಡಿ ಕಳೆದ ಒಂದು ವರ್ಷದ ಡಾಂಬರೀಕರಣ ಮಾಡಲಾಗಿತ್ತು. ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಣ್ಣೇಶ್ವರ ಗ್ರಾಮದಿಂದ ಯರಪ್ಪನ ಹಳ್ಳಿ ಮತ್ತು ದೊಡ್ಡಸಣ್ಣೆ ಗ್ರಾಮಗಳಿಗೆ ಹೋಗುವ ಭುವನಹಳ್ಳಿ ಸಂಪರ್ಕ ರಸ್ತೆ ಮಧ್ಯದಲ್ಲಿ ಗುಂಡಿ ತೋಡಿರುವುದು ಖಂಡನೀಯ. ಸಂಬಂಧಿಸಿದ ಅಧಿಕಾರಿಗಳು ತನಿಖೆ ನಡೆಸಿ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಕಾಮಗಾರಿ ವೆಚ್ಚ ವಸೂಲಿ ಮಾಡಿ: ಸಾರ್ವಜನಿಕರು ಓಡಾಡುವ ರಸ್ತೆಯಲ್ಲಿ ಗುಂಡಿ ತೋಡಿರುವುದರಿಂದ ಜನರು ಓಡಾಡಲು ಕಷ್ಟಪಡಬೇಕು. ವಾಹನ ಚಲಾಯಿಸಲು ಒದ್ದಾಡಬೇಕಿದೆ. ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕಾಮಗಾರಿ ವೆಚ್ಚವನ್ನು ಆರೋಪಿಗಳಿಂದ ವಸೂಲಿ ಮಾಡಿ ಕಾನೂನು ಶಿಕ್ಷೆಗೆ ಒಳಪಡಿಸಬೇಕು. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಿಸಿದ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಗ್ರಾಮಸ್ಥ ಮುನಿಯಪ್ಪ ಆಗ್ರಹಿಸಿದರು.

ಜಿಪಂ ಸದಸ್ಯ ಹೇಳಿಕೆ: ಸರ್ಕಾರ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಹಲವಾರು ಬಾರಿ ಒತ್ತಡ ತಂದು ಲಕ್ಷಾಂತರ ರೂ. ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಮಾಡಿಸುತ್ತೇವೆ. ಮೂಲಸೌಲಭ್ಯ ವಿನಾಕಾರಣ ನಾಶ ಮಾಡಿದರೆ ಸ್ಥಳೀಯರು ಜವಾಬ್ದಾರರು. ವೈಯಕ್ತಿಕ ದ್ವೇಷಕ್ಕೆ ಸಾರ್ವಜನಿಕ ರಸ್ತೆ ಹಾಳು ಮಾಡಿದವರ ವಿರುದ್ಧ ಕ್ರಮಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲಾಗುವುದು ಎಂದು ಜಿಪಂ ಸದಸ್ಯ ಕೆಸಿ ಮಂಜುನಾಥ್‌ ತಿಳಿಸಿದರು.

ಸಾರ್ವಜನಿಕ ರಸ್ತೆಯನ್ನು ಅಕ್ರಮವಾಗಿ ರಾತ್ರಿ ವೇಳೆ ಗುಂಡಿ ತೋಡಿರುವವರ ವಿರುದ್ಧ ಇಲಾಖೆಯ ವತಿಯಿಂದ ಪೊಲೀಸ್‌ ಠಾಣೆಗೆ ದೂರು ನೀಡಲಾಗುವುದು.
-ಮುರುಡಯ್ಯ ತಾಪಂ ನಿರ್ವಹಣಾಧಿಕಾರಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.