ಕೋವಿಡ್‌  ಪರಿಸ್ಥಿತಿ ಎದುರಿಸಲು ನಿರಂತರ ಶ್ರಮ


Team Udayavani, Jun 2, 2021, 4:03 PM IST

Constant effort to deal with the covid situation

ಡಿ.ಶ್ರೀಕಾಂತ್

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಮೆಡಿಕಲ್‌ ಕಾಲೇಜು ಇಲ್ಲದಿದ್ದರೂ ಸುಸಜ್ಜಿತ ವಸತಿ ನಿಲಯಗಳನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಾಗಿ ಪರಿವರ್ತಿಸಲಾಗಿದೆ.

ಅಧಿಕಾರಿಗಳೊಂದಿಗೆ ಆರೋಗ್ಯ ಇಲಾಖೆ ಸಿಬ್ಬಂದಿನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಕೋವಿಡ್‌ನಿಯಂತ್ರಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದ್ದೇವೆಎನ್ನುವ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ,ಕೊರೊನಾಕುರಿತಾಗಿ “ಉದಯವಾಣಿ’ಯ ಸಂದರ್ಶನದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು ಹೀಗೆ…

 ಕ್ಷೇತ್ರದಲ್ಲಿಕೋವಿಡ್‌ ಪರಿಸ್ಥಿತಿ ಹೇಗಿದೆ?

ಕೋವಿಡ್‌ ಪರಿಸ್ಥಿತಿ ಕ್ಲಿಷ್ಟಕರವಾಗಿದೆ. ಆದರೆ, ಅಂಕಿ-ಅಂಶಗಳನ್ನು ನೋಡಿದರೆ ಮೊದಲಿಗಿಂತಲೂ ಸುಧಾರಿಸುತ್ತಿದೆ. ತಾಲೂಕಿನಲ್ಲಿ ಭಾನುವಾರ 144ಪ್ರಕರಣಗಳು ದಾಖಲಾಗಿದ್ದು, ಇಬ್ಬರು ಮರಣಹೊಂದಿದ್ದಾರೆ.ಜಿಲ್ಲೆಯಲ್ಲಿಯೂಸೋಂಕಿತರಪ್ರಮಾಣ ಕಡಿಮೆಯಾಗುತ್ತಿದೆ. ಆದರೆ,ಜನರುನಿರ್ಲಕ್ಷ  ವಹಿಸಿದರೆಸೋಂಕಿತರಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

 ಕೋವಿಡ್‌ ಪರಿಸ್ಥಿತಿ ನಿರ್ವಹಣೆಯಲ್ಲಿನಿಮ್ಮ ಪಾತ್ರ?

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಯಾವುದೇಮೆಡಿಕಲ್‌ ಕಾಲೇಜುಗಳಿಲ್ಲ. ಹಿಂದಿನ ಕಾಂಗ್ರೆಸ್‌ಸರ್ಕಾರವಿದ್ದಾಗ ತಾಯಿ- ಮಗುಆಸ್ಪತ್ರೆ ಆರಂಭಿಸಲಾಗಿದ್ದು,ಕೋವಿಡ್‌ ಚಿಕಿತ್ಸೆ ಉತ್ತಮವಾಗಿ ನಡೆಯುತ್ತಿದೆ.ಇದರೊಂದಿಗೆ ತಾಲೂಕಿನ ಇಸ್ತೂರು, ಮಾಡೇಶ್ವರ,ಬಚ್ಚಹಳ್ಳಿಯ ವಸತಿ ಶಾಲೆಗಳನ್ನು ಕೋವಿಡ್‌ ಕೇರ್‌ಸೆಂಟರ್‌ಗಳಾಗಿ ಪರಿವರ್ತಿಸಲಾಗಿದೆ. ವಿವಿಧಕೈಗಾರಿಕೋದ್ಯಮಿಗಳು ಹಾಗೂ ದಾನಿಗಳನ್ನುಸಂಪರ್ಕಿಸಿ, ಈ ವಸತಿ ನಿಲಯಗಳಿಗೆ ಅಗತ್ಯವಿರುವ ಆಮ್ಲಜನಕ ಸಾಂದ್ರಕಗಳು,ಬೆಡ್‌ಗಳು ಸೇರಿದಂತೆ ಮೂಲ ಸೌಲಭ್ಯಗಳನ್ನು ಪಡೆಯಲಾಗಿದೆ. ನಗರದಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ 100ಆಮ್ಲಜನಕ,ಬೆಡ್‌ ವ್ಯವಸ್ಥೆಇರುವ ಆಸ್ಪತ್ರೆಗೆ ಕಂದಾಯ ಸಚಿವಆರ್‌.ಆಶೋಕ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕೋವಿಡ್‌ ನಿಯಂತ್ರಣ ಕುರಿತಂತೆ ಕಾರ್ಯಕ್ರಮಗಳನ್ನು ರೂಪಿಸುವುದು ಹಾಗೂ ಜಾಗೃತಿ ಮೂಡಿಸುವ ಕಾರ್ಯಗಳನ್ನು ಮಾಡಲಾಗುತ್ತಿದೆ.

ಕೋವಿಡ್‌ಕೇರ್‌ ಸೆಂಟರ್‌ಗಳಿಗೆ ಭೇಟಿ ನೀಡಲಾಗುತ್ತಿದೆ.ತಾಲೂಕಿನಲ್ಲಿ ಸಿಟಿ ಸ್ಕ್ಯಾನ್‌ ಪ್ರಯೋಗಾಲಯದಸ್ಥಾಪನೆಗೆ 1.25 ಕೋಟಿ ರೂ., ಯೋಜನೆರೂಪಿಸಲಾಗಿದೆ. ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆವಿವಿಧ ಸೌಲಭ್ಯಗಳನ್ನು ವೈಯಕ್ತಿಕವಾಗಿ ನೀಡಿದ್ದೇನೆ.ಪ್ರತಿದಿನ ಕ್ಷೇತ್ರಕ್ಕೆ ಭೇಟಿ ನೀಡಿ, ಅಧಿಕಾರಿಗಳು, ಆರೋಗ್ಯ ಸಿಬ್ಬಂದಿಯೊಂದಿಗೆ ಚರ್ಚಿಸಿ ಮಾಹಿತಿ ಪಡೆಯುತ್ತಿದ್ದೇನೆ.ಗ್ರಾಮಾಂತರ ಪ್ರದೇಶಗಳಲ್ಲಿಯೂಕೋವಿಡ್‌ ನಿಯಂತ್ರಣಕ್ಕೆ ಬೇಕಾದ ಕ್ರಮಗಳನ್ನುಕೈಗೊಳ್ಳಲು ಆದ್ಯತೆ ನೀಡಲಾಗುತ್ತಿದೆ.

ಕೋವಿಡ್‌ ಸಂಕಷ್ಟ ನಿಯಂತ್ರಿಸಲು ಪರಿಹಾರಸಿಕ್ಕಿದೆಯೇ?

ಕೊರೊನಾ 2ನೇ ಅಲೆಯ ಆರಂಭದಲ್ಲಿ ತೀವ್ರಕಷ್ಟವಾಯಿತು. ಈಗ ಪರಿಸ್ಥಿತಿ ಸುಧಾರಿಸುತ್ತಿದೆ. ಕೈಗಾರಿಕಾಪ್ರದೇಶದ ಆಮ್ಲಜನಕ ಉತ್ಪಾದಕರ ಸಭೆ ಕರೆದುತಾಲೂಕಿಗೆ ಮೊದಲ ಆದ್ಯತೆ ನೀಡುವಂತೆ ಸೂಚನೆನೀಡಿದ್ದೇವು. ತಾಲೂಕಿನಲ್ಲಿ ಆಮ್ಲಜನಕದ ಕೊರತೆನೀಗಿದೆ. ಲಸಿಕೆ ಸರಬರಾಜುದಾರರನ್ನು ಸಂಪರ್ಕಿಸಿ,ತಾಲೂಕಿಗೆ ಅಗತ್ಯವಿರುವಷ್ಟು ಲಸಿಕೆ ಸರಬರಾಜುಮಾಡಲು ಮನವಿ ಮಾಡಲಾಗಿದೆ. ಈಗ ಲಸಿಕೆಸಮಸ್ಯೆ ಬಹುಪಾಲು ಬಗೆಹರಿದಿದೆ. ಕೂಲಿ ಕಾರ್ಮಿಕರು, ನಿರ್ಗತಿಕರಿಗೆ ಇಂದಿರಾ ಕ್ಯಾಂಟಿನ್‌ನಲ್ಲಿ ಊಟಕ್ಕೆವ್ಯವಸ್ಥೆ ಮಾಡಲಾಗಿದೆ. ಇದರೊಂದಿಗೆ, ವಿವಿಧಕೈಗಾರಿಕೋದ್ಯಮಿಗಳು ಹಾಗೂ ದಾನಿಗಳ ಸಹಕಾರದೊಂದಿಗೆ ನಿತ್ಯ ಬೆಳಗ್ಗೆ ಹಾಗೂ ಮಧ್ಯಾಹ್ನ ಊಟದವ್ಯವಸ್ಥೆ ಮಾಡಲಾಗುತ್ತಿದೆ.

ವೈದ್ಯರು ಕೋವಿಡ್‌ಸಂಚಾರಿ ಕ್ಲಿನಿಕ್‌ ಮೂಲಕ ಪ್ರತಿ ಗ್ರಾಮಗಳಿಗೆ ಭೇಟಿನೀಡಿ, ಕೋವಿಡ್‌ ಸೋಂಕಿತರಮಾಹಿತಿಪಡೆದು ಚಿಕಿತ್ಸೆನೀಡುತ್ತಿದ್ದಾರೆ. ಕೊರೊನಾ ವಾರಿಯರ್ಗಳಿಗಾಗಿ 50ಬೆಡ್‌ಗಳ ಪ್ರತ್ಯೇಕ ಕೋವಿಡ್‌ ಕೇರ್‌ ಸೆಂಟರ್‌ಆರಂಭಿಸಲಾಗಿದೆ.

 ಲಾಕ್‌ಡೌನ್‌ ವಿಸ್ತರಣೆ ಅಗತ್ಯವಿದೆಯೇ?

ಕೇಂದ್ರ ಸರ್ಕಾರ ಜೂನ್‌ 30ರವರೆಗೆ ಲಾಕ್‌ಡೌನ್‌ವಿಸ್ತರಿಸಲು ರಾಜ್ಯಗಳಿಗೆ ಸೂಚಿಸಿದೆ. ಆದರೆ, ರಾಜ್ಯಸರ್ಕಾರಇನ್ನೂಯಾವುದೇತೀರ್ಮಾನಕೈಗೊಂಡಿಲ್ಲ.ಜನರ ಹಿತದೃಷ್ಟಿಯಿಂದ ಪರಿಸ್ಥಿತಿ ಅವಲೋಕಿಸಿ,ತೀರ್ಮಾನಿಸುವುದು ಸೂಕ್ತ.z ಕೋವಿಡ್‌ ವಿಚಾರದಲ್ಲಿ ಶಾಸಕರಾಗಿ, ಒಬ್ಬವ್ಯಕ್ತಿಯಾಗಿ ನಿಮ್ಮ ಸಲಹೆ ಏನು?ನೇಕಾರರು, ಕೂಲಿ ಕಾರ್ಮಿಕರ ಜೀವನ ಭದ್ರತೆಗೆಸರ್ಕಾರ ಕ್ರಮ ಕೈಗೊಳ್ಳಬೇಕಿದೆ. ಕೇಂದ್ರ ಹಾಗೂರಾಜ್ಯ ಸರ್ಕಾರಗಳು ಕೋವಿಡ್‌ 2ನೇ ಅಲೆ ಆರಂಭದಲ್ಲಿ ಮುಂಜಾಗ್ರತೆ ತೆಗೆದುಕೊಂಡಿಲ್ಲ. ಈ ಬಗ್ಗೆ ತಜ್ಞರಸಲಹೆಗಳನ್ನು ಪರಿಗಣಿಸಿಲ್ಲ. ಸಾರ್ವಜನಿಕರುಯಾವುದನ್ನೂ ಸಹ ನಿರ್ಲಕ್ಷ್ಯ ಮಾಡದೇ ಆರಂಭದಲ್ಲಿಯೇ ತಪಾಸಣೆ ಮಾಡಿಸಿಕೊಂಡು ಅಗತ್ಯವಿದ್ದರೆಕೋವಿಡ್‌ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆಪಡೆದರೆ ಗುಣಮುಖರಾಗಬಹುದು. ಈಗ 3ನೇಅಲೆಯ ಆತಂಕ ಪ್ರಾರಂಭವಾಗಿದೆ. ಇನ್ನು ಕನಿಷ್ಟಆರು ತಿಂಗಳು ಜನರು ಕಟ್ಟುನಿಟ್ಟಾಗಿ ಕೋವಿಡ್‌ಮಾರ್ಗಸೂಚಿಗಳನ್ನು ಪಾಲಿಸಬೇಕಿದೆ. ಗುಂಪುಗುಂಪಾಗಿ ಜನ ಸೇರದೇ, ಮಾಸ್ಕ್ ಧರಿಸಿ ವ್ಯಕ್ತಿಗತಅಂತರ ಕಾಪಾಡಿಕೊಂಡು ಕೋವಿಡ್‌ ಸೋಂಕುಹರಡುವುದನ್ನು ತಡೆಯಬೇಕಿದೆ.

ಟಾಪ್ ನ್ಯೂಸ್

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.