ಮೂಲದಲ್ಲೇ ಪಾರ್ಥೇನಿಯಂ ನಿಯಂತ್ರಿಸಿ


Team Udayavani, Aug 17, 2019, 3:00 AM IST

parthenium

ದೊಡ್ಡಬಳ್ಳಾಪುರ: ಪಾರ್ಥೇನಿಯಂ ಜಗತ್ತಿನ ಅತಿ ದೊಡ್ಡ ಹಾಗೂ ಬಹಳ ದುಷ್ಪರಿಣಾಮಕಾರಿ ಕಳೆ. ಇದರಿಂದಾಗಿ ಶೇ.40ರಷ್ಟು ಇಳುವರಿ ಕಡಿಮೆಯಾಗುತ್ತದೆ. ಆರಂಭದಲ್ಲೇ ಕಳೆ ನಿಯಂತ್ರಿಸದಿದ್ದರೆ ನಂತ ರ ನಿಯಂತ್ರಿಸುವುದು ಬಹಳ ಕಷ್ಟವಾಗುತ್ತದೆ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಎ.ಪಿ. ಮಲ್ಲಿಕಾರ್ಜುನಗೌಡ ತಿಳಿಸಿದರು. ಪಾರ್ಥೇನಿಯಂ ಜಾಗೃತಿ ಸಪ್ತಾಹದ ನಿಮಿತ್ತ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರ, ಹೆಬ್ಟಾಳದ ಕಳೆ ನಿರ್ವಹಣೆ ವಿಭಾಗದಿಂದ ನ ಡೆದ ಪಾರ್ಥೇನಿಯಂ ಕಳೆ ನಿರ್ಮೂಲನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮನುಷ್ಯರು, ಪ್ರಾಣಿಗಳ ಆರೋಗ್ಯಕ್ಕೆ ತೊಂದರೆ: ಕಾಂಗ್ರೆಸ್‌ ಕಸ, ಬಿಳಿ ಟೋಪಿ, ಗಜ್ಜರಿ ಕಸ ಎಂಬ ಇತ್ಯಾದಿ ಹೆಸರುಗಳಿಂದ ಕರೆಯಲ್ಪಡುವ ಇದು, ಬೆಳೆಗಳಿಗೆ ಹಾನಿ ಮಾಡುತ್ತದೆ. ಜತೆಗೆ ಮನುಷ್ಯರ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ತೊಂದರೆಯನ್ನುಂಟು ಮಾಡುತ್ತದೆ. ಒಂದಲ್ಲ ಒಂದು ಕಡೆ ವರ್ಷವೆಲ್ಲ ಸಸ್ಯದ ಬೀಜೋತ್ಪಾದನೆಯಾಗುತ್ತದೆ. ಇದರ ನಿಯಂತ್ರಣಕ್ಕಾಗಿ ರೈತರು, ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ಮಹಿಳಾ ಸಂಘಗಳು ಸರ್ಕಾರಿ ಸಂಶೋಧನೆ ವಿಭಾಗಗಳೊಂದಿಗೆ ಸಾಮೂಹಿಕವಾಗಿ ಸಹಕರಿಸಿದ್ದಲ್ಲಿ ಮಾತ್ರ ಕಳೆಯನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಬಹುದು ಎಂದು ಅಭಿಪ್ರಾಯಪಟ್ಟರು.

ಸಸ್ಯನಿಯೋಗಿ ಗಿಡ ಬೆಳೆಸಲು ಸಲಹೆ: ಅಖೀಲ ಭಾರತ ಸುಸಂಘಟಿತ ಸಂಶೋಧನೆ ಪ್ರಾಯೋಜನೆಯ ಕಿರಿಯ ಬೇಸಾಯ ಶಾಸ್ತ್ರಜ್ಞೆ ಡಾ. ಎಸ್‌.ಕಮಲಾಬಾಯಿ ಮಾ ಹಿತಿ ನೀಡಿ, ಪಾರ್ಥೇನಿಯಂ ಕಳೆಯನ್ನು ನಾಶಗೊಳಿಸಲು ಜೈವಿಕ ಕ್ರಮಗಳು ಮತ್ತು ಸಸ್ಯ ನಿಯೋಗಿ ಗಿಡಗಳನ್ನು ಬೆಳೆಸಬೇಕು. ಇದರಿಂದ ಪಾರ್ಥೇನಿಯಂ ಕಳೆಯ ಸಂತತಿ ಕಡಿಮೆಯಾಗುತ್ತದೆ. ಸಸ್ಯ ನಿಯೋಗಿ ಗಿಡಗಳಿಂದ ಕಾಂಪೋಸ್ಟ್‌ ತಯಾರಿಸಬಹುದು. ಜೈವಿಕ ವಿಧಾನದಲ್ಲಿ ವಿಶಾಲತೆ ಕಾಪಾಡಿಕೊಂಡು ಪರಿಣಾಮಕಾರಿ ಹಾಗೂ ಪ್ರಭಾವಶಾಲಿ ಸಸ್ಯಗಳನ್ನು (ಅಗಸೆ, ಕಾಡು ಹುರುಳಿ ಇತ್ಯಾದಿ) ಬೆಳೆಸುವುದರಿಂದ ಪಾರ್ಥೇನಿಯಂ ಕಳೆ ನಿಯಂತ್ರಿಸಬಹುದು ಎಂದು ತಿಳಿ ಹೇಳಿದರು.

ಪಾರ್ಥೇನಿಯಂ ಮಾತ್ರ ತಿನ್ನುವ ಮೆಕ್ಸಿಕನ್‌ ದುಂಬಿ:
ಮೆಕ್ಸಿಕನ್‌ ದುಂಬಿ (ಜೈಗೊಗ್ರಾಮ ಬೈಕೋಲೋರೇಟ)ಗಳನ್ನು ಪಾರ್ಥೇನಿಯಂ ಕಳೆ ಹೆಚ್ಚು ಬೆಳೆದಿರುವ ಬಂಜರು ಅಥವಾ ಬೀಡು ಜಮೀನಿನಲ್ಲಿ ಬಿಟ್ಟಾಗ ಮೆಕ್ಸಿಕನ್‌ ದುಂಬಿಗಳು ನೈಸರ್ಗಿಕ ವಾತಾವರಣ ಕಾಪಾಡಿಕೊಂಡು ಪಾರ್ಥೇನಿಯಂ ಕಳೆ ಮಾತ್ರ ತಿನ್ನುತ್ತವೆ ಎಂದು ವಿವರಿಸಿದರು.

ಅಖಿಲ ಭಾರತ ಸುಸಂಘಟಿತ ಸಂಶೋಧನಾ ಪ್ರಾಯೋಜನೆಯ (ಕಳೆ ನಿರ್ವಹಣಾ ವಿಭಾಗ, ಹೆಬ್ಟಾಳ), ಮುಖ್ಯಸ್ಥ ಡಾ. ಜಿ.ಎನ್‌. ಧನಪಾಲ್‌ ಪಾರ್ಥೇನಿಯಂ ಬಗ್ಗೆ ಅರಿವು ಮೂಡಿಸಿ ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸಿಕೊಟ್ಟರು. ಪಾರ್ಥೇನಿಯಂ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ಸದಸ್ಯರು ಕೈಗವಸುಗಳನ್ನು ಧರಿಸಿ ಉತ್ಸಾಹದಿಂದ ಪಾರ್ಥೇನಿಯಂ ಕಳೆಯನ್ನು ಕಿತ್ತುಹಾಕಿದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.