ಕೋವಿಡ್‌ ಮುಕ್ತ ತಾಲೂಕಿಗೆ ಸಹಕರಿಸಿ: ಶಾಸಕ


Team Udayavani, May 18, 2021, 10:52 AM IST

ಕೋವಿಡ್‌ ಮುಕ್ತ ತಾಲೂಕಿಗೆ ಸಹಕರಿಸಿ: ಶಾಸಕ

ದೊಡ್ಡಬಳ್ಳಾಪುರ: ಗ್ರಾಮೀಣ ಪ್ರದೇಶಗಳಲ್ಲಿನ ಸೋಂಕಿತರಿಗೆ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಂಚಾರ ಕ್ಲಿನಿಕ್‌ಗಳ ಸೌಲಭ್ಯ ಒದಗಿಸಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಸಹಯೋಗದಲ್ಲಿ ನಡೆದ ಕೋವಿಡ್‌ ಸಂಚಾರಿ ಕ್ಲಿನಿಕ್‌ನ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ಹೋಂ ಐಸೋಲೇಷನ್‌ಗೆ ಒಳಗಾಗಿರುವವರಿಗೆ ಸೂಕ್ತ ಚಿಕಿತ್ಸೆ ನೀಡಲು, ಈ ಮೂಲಕ ಸೋಂಕನ್ನು ತಡೆಗಟ್ಟಲು ಈ ಸಂಚಾರಿ ಕ್ಲಿನಿಕ್‌ಗಳು ಸಹಕಾರಿ ಆಗಿವೆ. ಸಾರ್ವಜನಿಕರು ಕೋವಿಡ್‌ ಮುಕ್ತ ತಾಲೂಕನ್ನಾಗಿಸಲು ಎಲ್ಲಾ ರೀತಿಯ ಸಹಕಾರ ನೀಡಬೇಕಿದೆ ಎಂದು ಮನವಿ ಮಾಡಿದರು.

ಅರಿವು ಮೂಡಿಸಿ: ಕೋವಿಡ್ ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷ್ಯ ವಹಿಸದೇ ಮೊದಲು ಸರ್ಕಾರಿ ಆಸ್ಪತ್ರೆಗಳ ವೈದ್ಯರಲ್ಲಿ ಚಿಕಿತ್ಸೆ ಪಡೆಯಬೇಕು. ಅಗತ್ಯವಿದ್ದರೆ ಕೋವಿಡ್‌ ಪರೀಕ್ಷೆ ಕಡ್ಡಾಯವಾಗಿ ಮಾಡಿಸಬೇಕು. ಈ ಬಗ್ಗೆ ಸರ್ಕಾರ ಆಸ್ಪತ್ರೆಯ ಸಿಬ್ಬಂದಿ ಅರಿವು ಮೂಡಿಸಬೇಕಿದೆ ಎಂದು ಹೇಳಿದರು.

ಜಾಗೃತಿ ವಹಿಸಿ: ಸಂಚಾರ ಕ್ಲಿನಿಕ್‌ನಲ್ಲಿ ಭಾಗವಹಿಸುವ ವೈದ್ಯರು, ಪೊಲೀಸ್‌ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು,ವಾಹನ ಚಾಲಕರುಬಹಳಷ್ಟು ಮುಂಜಾಗ್ರತೆ ವಹಿಸಬೇಕಿದ್ದು, ಗ್ರಾಮಗಳಲ್ಲಿ ಕೋವಿಡ್‌ ಹಿನ್ನೆಲೆ ಚಿಕಿತ್ಸೆಗೆ ತೆರಳದೆ ಇರುವವರನ್ನು ಗುರುತಿಸಿ ತಪಾಸಣೆಗೆ ಒಳಪಡಿಸಲು ಸಲಹೆ ನೀಡುವುದರ ಜೊತೆಗೆ,ಕೋವಿಡ್‌ ಸಂಪರ್ಕಿತರ ಆರೋಗ್ಯ ಸ್ಥಿತಿಗತಿ ಗಮನಿಸುವಂತೆ ಸಲಹೆ ನೀಡಿದರು.

ಕಾರ್ಯಕರ್ತೆಯರ ಸಹಕಾರ: ತಹಶೀಲ್ದಾರ್‌ ಟಿ.ಎಸ್‌. ಶಿವರಾಜ್‌ ಮಾತನಾಡಿ, 15 ಕೋವಿಡ್‌ ಚಿಕಿತ್ಸಾ ಮೊಬೈಲ್‌ ವಾಹನಗಳಿಗೆ ಚಾಲನೆ ನೀಡಲಾಗಿದೆ. ತಾಲೂಕಿನಲ್ಲಿ ಮೊದಲು 304 ಗ್ರಾಮಗಳನ್ನು

ಗುರುತಿಸಿದ್ದು, ಕೋವಿಡ್‌ ತಪಾಸಣಾ ಕ್ಲಿನಿಕ್‌ಮೊಬೈಲ್‌ ವಾಹನಗಳಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ, ಪೊಲೀಸ್‌ ಪ್ರಯಾಣಿಸಲಿದ್ದಾರೆ. ಇವರಿಗೆ ಸ್ಥಳೀಯವಾಗಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸಹಕರಿಸಲಿದ್ಗದಾರೆ ಎಂದು ಹೇಳಿದರು.

ಕೋವಿಡ್‌ ಸೋಂಕು ಉಲ್ಬಣವಾಗದಂತೆ ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಸೋಂಕಿತ ವ್ಯಕ್ತಿಗಳಿಗೆ ಔಷಧೀಯ ಕಿಟ್‌ಗಳನ್ನೂ ನೀಡುವುದರ ಜೊತೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಸಂಚಾರಿ ಕ್ಲಿನಿಕ್‌ಗಳು ನೆರವಾಗಲಿದೆ. ಹೆಚ್ಚಿನ ಚಿಕಿತ್ಸೆ ಇರುವವರನ್ನು ನಗರದ ಸಾರ್ವಜನಿಕರ ಆಸ್ಪತ್ರೆಗೆ ದಾಖಲಾಗಲು ವೈದ್ಯರು ಸೂಚಿಸಲಿದ್ದಾರೆ. ಪ್ರತಿ ಗ್ರಾಮಕ್ಕೆ ಸಂಚಾರಿ ಕ್ಲಿನಿಕ್‌ ಸಿಬ್ಬಂದಿ ಮೂರು ಬಾರಿ ಭೇಟಿ ನೀಡಲಿದ್ದಾರೆ.

ಅವಶ್ಯಕತೆ ನೋಡಿಕೊಂಡು ಇನ್ನೂ ಇತರ ಗ್ರಾಮಗಳಿಗೆ ಸಂಚಾರಿ ಕ್ಲಿನಿಕ್‌ ಸೇವೆ ವಿಸ್ತರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ತಾಪಂ ಇಒಮುರುಡಯ್ಯ, ಇನ್ಸ್ ಪೆಕ್ಟರ್‌ ಸುರೇಶ್‌, ಸಬ್‌ಇನ್ಸ್‌ಪೆಕ್ಟರ್‌ಗಳಾದ ಬಸವನಗೌಡ ಪಾಟೀಲ್‌, ಮಂಜುನಾಥ್‌, ಸಿಡಿಪಿಒ ಅನಿತಾಲಕ್ಷ್ಮೀ ಇದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.