![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
16 ಮಂದಿಗೆ ಸೋಂಕು
Team Udayavani, Sep 8, 2020, 1:31 PM IST
![16 ಮಂದಿಗೆ ಸೋಂಕು](https://www.udayavani.com/wp-content/uploads/2020/09/BR-TDY-3-3-620x372.jpg)
ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಸೋಮವಾರದ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 16 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತ ಮೂರು ಮಂದಿಯಲ್ಲಿ ಇಬ್ಬರು ಹೃದಯಾಘಾತ ಹಾಗೂ ಓರ್ವ ತೀವ್ರ ಉಸಿರಾಟದ ತೊಂದರೆ ಹಾಗೂ ಸಕ್ಕರೆ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.
ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂ ಕಿನ ಹೆಲ್ತ್ ಬುಲೆಟಿನ್ ಅನ್ವಯ, ಸೋಮವಾರದ ಸಂಜೆವರೆಗೆ. ದೊಡ್ಡಬಳ್ಳಾಪುರ ತಾಲೂಕಿನ 12 ಪುರುಷ, 4 ಮಹಿಳೆಯರು ಸೇರಿ 16 ಮಂದಿಗೆ ಸೋಂಕು ದೃಢಪಟ್ಟಿದೆ.ಸೋಂಕಿಗೆ ಒಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋಟೆ ಬೀದಿ 50 ವರ್ಷದ ಪುರುಷ, ದೊಡ್ಡ ಬಳ್ಳಾಪುರ ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಲೇಪೇಟೆ 76 ವರ್ಷದ ಪುರುಷ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪ್ರಸ್ತುತ ತಾಲೂಕಿನಲ್ಲಿ 1395 ಮಂದಿಗೆ ಸೋಂಕು ತಗುಲಿದ್ದು, 894 ಮಂದಿ ಗುಣಮುಖರಾಗಿದ್ದರೆ 46 ಮಂದಿ ಸಾವನ್ನಪ್ಪಿದ್ದಾರೆ.
………………………………………………………………………………………………………………………………………………………
ತಪಾಸಣೆ ಹೆಚ್ಚಳ : ದೊಡ್ಡಬಳ್ಳಾಪುರ: ನಗರದಲ್ಲಿ ಹೆಚ್ಚುತ್ತಿರುವ ಸರಣಿ ಕಳವು ಪ್ರಕರಣಗಳ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳ ವೃತ್ತದಲ್ಲಿ ಪೊಲೀಸರು ವಾಹನಗಳ ದಾಖಲಾತಿಗಳ ಪರಿಶೀಲನೆ ನಡೆಸಿದರು.
ಈ ಬಗ್ಗೆ ಮಾಹಿತಿ ನೀಡಿದ ಡಿವೈಎಸ್ಪಿ ಟಿ.ರಂಗಪ್ಪ, ನಗರದಲ್ಲಿ ನಡೆಯುತ್ತಿರುವ ಸರಣಿ ಕಳವು ಪ್ರಕರಣಗಳಲ್ಲಿ ಸ್ಥಳೀಯರ ಕೈ ಚಳಕವೇ ಕಾಣುತ್ತಿದೆ. ಪೊಲೀ ಸರ ರಾತ್ರಿ ಗಸ್ತು ಹೆಚ್ಚಿ ಸುವುದು ಬೈಕ್, ಕಾರು ಸೇರಿ ಎಲ್ಲಾ ರೀತಿಯ ವಾಹನ ತಪಾಸಣೆ ತೀವ್ರ ಗೊಳಿಸಲಾಗಿದೆ. ವಾಹನಗಳ ಸವಾರರು ಸೂಕ್ತ ದಾಖಲೆ ಗಳನ್ನು ಸದಾ ತಮ್ಮ ಬಳಿ ಇಟ್ಟು ಕೊಂಡಿರಲೇ ಬೇಕು. ಇಲ್ಲವಾದರೆ ದಂಡ ವಿಧಿಸಲಾಗು ವುದು ಎಂದರು. ಒಂದೆರಡು ದಿನ ಮನೆಯಿಂದ ಹೊರ ಹೋಗುವ ಸಂದರ್ಭಗಳಲ್ಲಿ ಯಾರಾದರೂ ಒಬ್ಬರಿಗೆ ಜವಾಬ್ದಾರಿ ವಹಿಸಿ ಹೋಗುವುದು, ಮನೆಗಳ ಸಮೀಪ ಸಿಸಿ ಟಿವಿ ಕ್ಯಾಮರಾ ಅಳವಡಿಸ ಬೇಕು. ಇದರಿಂದ ಸಾಕಷ್ಟು ಅಪರಾಧ ಗಳನ್ನು ತಡೆಯಬಹುದಾಗಿದೆ ಎಂದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಕಾಂಗ್ರೆಸ್ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್ನಲ್ಲಿ ಉದ್ವಿಗ್ನ ಸ್ಥಿತಿ](https://www.udayavani.com/wp-content/uploads/2024/07/6-25-150x90.jpg)
Crime: ಕಾಂಗ್ರೆಸ್ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್ನಲ್ಲಿ ಉದ್ವಿಗ್ನ ಸ್ಥಿತಿ
![Ganja peddler: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್ಗೆ ಗುಂಡೇಟು; ಸೆರೆ](https://www.udayavani.com/wp-content/uploads/2024/07/Untitled-1-15-150x90.jpg)
Ganja peddler: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್ಗೆ ಗುಂಡೇಟು; ಸೆರೆ
![R.Ashok](https://www.udayavani.com/wp-content/uploads/2024/07/R.Ashok_-150x90.jpg)
Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್
![BRural](https://www.udayavani.com/wp-content/uploads/2024/06/BRural-150x90.jpg)
Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ
![Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್ ಅಡ್ಡೆಯಾದ ಹೆದ್ದಾರಿ!](https://www.udayavani.com/wp-content/uploads/2024/05/9-21-150x90.jpg)
Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್ ಅಡ್ಡೆಯಾದ ಹೆದ್ದಾರಿ!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.