ಗ್ರಾಮೀಣ ಪ್ರದೇಶಗಳಲ್ಲಿಯೂ ಹೆಚ್ಚಿದ ಕೊರೊನಾತಂಕ
Team Udayavani, May 7, 2021, 3:52 PM IST
ದೊಡ್ಡಬಳ್ಳಾಪುರ: ತಾಲೂಕು ಸೇರಿದಂತೆಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದಿನೇ ದಿನೆಕೊವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಒಟ್ಟುಪ್ರಕರಣಗಳು ಸಾವಿರ ದಾಟಿವೆ. 250ಕ್ಕೂ ಹೆಚ್ಚುಮಂದಿ ಸೋಂಕಿನಿಂದ ಮೃತರಾಗಿದ್ದಾರೆ. ಆಸ್ಪತ್ರೆಗಳಲ್ಲಿ ರೋಗಿಗಳ ಸಾಲು. ಸ್ಮಶಾನದಲ್ಲಿ ಮೃತದೇಹಗಳ ಸರದಿ ಸಾಮಾನ್ಯವಾಗಿ ಪರಿಣಮಿಸಿದೆ.
ಗ್ರಾಮೀಣ ಪ್ರದೇಶಗಳಲ್ಲಿಯೂ ಹೆಚ್ಚಿದ ಆತಂಕ:ಕೊವಿಡ್ ಪ್ರಕರಣಗಳು ನಗರದಷ್ಟೇ ಅಲ್ಲದೇಗ್ರಾಮೀಣ ಭಾಗಗಳಲ್ಲಿಯೂ ಹೆಚ್ಚಾಗುತ್ತಿವೆ.ಜಿಲ್ಲೆಯಲ್ಲಿ 5 ಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದ ಹಿನ್ನಲೆಯಲ್ಲಿ, ತೀವ್ರತೆಗಳನ್ನು ಆಧರಿಸಿ,ಕೋವಿಡ್ ಪ್ರಕರಣಗಳಿರುವ 80 ಗ್ರಾಮಗಳನ್ನು ಸೀಲ್ಡೌನ್ ಮಾಡಲಾಗಿದೆ.
12 ಕಡೆಗಳಲ್ಲಿ ಸೆಮಿಕಂಟೆ, ನ್ಮೆಂಟ್ ಹಾಗೂ 2 ಕಡೆಗಳಲ್ಲಿ ಕಂಟೆ„ನ್ಮೆಂಟ್ವಲಯವನ್ನಾಗಿ ಮಾಡಲಾಗಿದೆ. ರೈತರು ತಮ್ಮ ಕೃಷಿಉತ್ಪನ್ನಗಳನ್ನು ಮಾರುಕಟ್ಟೆಗೆ ತರಲು ಅಥವಾಇತ್ತಿತರೆ ಕೆಲಸಗಳಿಗೆ ನಗರ ಪ್ರದೇಶಗಳಿಗೆ ಬರಲುಸಾರಿಗೆ ವ್ಯವಸ್ಥೆ ಇಲ್ಲದೇ ಆಟೋ ಹಾಗೂ ಇತರವಾಹನಗಳನ್ನು ಬಳಸುವ ಅನಿವಾರ್ಯತೆ ಇದ್ದು,ವ್ಯಕ್ತಿಗತ ಅಂತರ ಕಾಪಾಡಿಕೊಳ್ಳದೇ ಸೋಂಕುಹರಡುವ ಸಂಭವ ಹೆಚ್ಚಾಗುತ್ತಿದೆ.
ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆ: ತಾಲೂಕಿನಲ್ಲಿಹೆಚ್ಚುವರಿ ಆಕ್ಸಿಜನ್ ಬೆಡ್ಗಳ ಸ್ಥಾಪನೆಗೆ ಕಾರ್ಯಪ್ರವೃತ್ತವಾಗಿದ್ದು ಒಂದು ತಿಂಗಳ ಒಳಗೆ ಆಕ್ಸಿಜನ್ಕೊರತೆ ಇರದಂತೆ ಮಾಡಲು ಸರ್ವ ಪ್ರಯತ್ನನಡೆಸಲಾಗುತ್ತಿದ್ದು, ಈ ಒಂದು ತಿಂಗಳು ಸಾಧ್ಯವಾದಷ್ಟು ಸಮಸ್ಯೆ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ.ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 100 ಬೆಡ್ಗಳಕಂಟೈನರ್ಗಳ ತಾತ್ಕಾಲಿಕ ಕೊವಿಡ್ ಸೆಂಟರ್ಮಾಡಲು ಸಿದ್ಧತೆ ಕೈಗೊಳ್ಳಲಾಗಿದೆ.
ಕೋವಿಡ್ಸೋಂಕಿತರ ಚಿಕಿತ್ಸೆಗೆ ಶೀಘ್ರದಲ್ಲಿಯೇ ಜಿಲ್ಲಾಡಳಿತದಿಂದ100 ಆಕ್ಸಿಜನ್ ಕಾನ್ಸಂಟ್ರೇಟರ್ ಲಭ್ಯವಾಗಲಿದೆ ಎಂದುತಹಶೀಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.ಶಾಸಕರ ಮನವಿ: ತಾಲೂಕಿನಲ್ಲಿ ಆಮ್ಲಜನಕ,ವೆಂಟಿಲೇಟರ್, ಐಸಿಯು ಬೆಡ್ಗಳ ಕೊರತೆಯಿದೆ.ತಾಲೂಕಿನ ಸುತ್ತಮುತ್ತಲ ಇರುವ ವಿವಿಧಆಸ್ಪತ್ರೆಗಳಲ್ಲಿ ಪಡೆದಿರುವ ಮಾಹಿತಿ ಪ್ರಕಾರಕೊವಿಡ್ ಸೋಂಕಿತರಿಗೆ ಬೆಡ್ಗಳ ಕೊರತೆಹೆಚ್ಚಾಗುತ್ತಿದೆ.
ಈ ಬಗ್ಗೆ ತಾಲೂಕು ಹಾಗೂಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ಹೆಚ್ಚವರಿ ಬೆಡ್ಗಳ ವ್ಯವಸ್ಥೆಯಾಗಲಿದೆ.ಆದರೆ ಸಾರ್ವಜನಿಕರು ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಅನಾವಶ್ಯಕವಾಗಿ ತಿರುಗಾಡದೇಮಾರ್ಗಸೂಚಿ ಪಾಲಿಸಬೇಕಿದೆ. ಗ್ರಾಮೀಣಭಾಗದ ಜನರು ನಗರ ಪ್ರದೇಶಗಳಿಗೆ ಬರುವುದು ನಿಲ್ಲಿಸಬೇಕಿದೆ. ಮನೆಯಲ್ಲಿಯೇ ಸುರಕ್ಷಿತವಾಗಿದ್ದು, ಕೊವಿಡ್ ತಡೆಗಟ್ಟಲು ಸಹಕರಿಸಬೇಕಿದೆಎಂದು ಶಾಸಕ ಟಿ.ವೆಂಕಟರಮಣಯ್ಯ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ