ಕೋವಿಡ್ ಕರಿನೆರಳಲ್ಲಿ ದೀಪಾವಳಿ ಸಡಗರ


Team Udayavani, Nov 15, 2020, 7:14 PM IST

ಕೋವಿಡ್ ಕರಿನೆರಳಲ್ಲಿ ದೀಪಾವಳಿ ಸಡಗರ

ದೇವನಹಳ್ಳಿ: ಕೋವಿಡ್ ಎಂಬ ಹೆಮ್ಮಾರಿ ಇಡೀಜಗತ್ತನ್ನೇ ಬೆಚ್ಚಿಬೀಳಿಸಿರುವ ಸಂದರ್ಭದಲ್ಲಿ ಕತ್ತಲಿ ನಿಂದ ಬೆಳಕಿನಡೆಗೆ, ಅಜ್ಞಾನದಿಂದ ಜ್ಞಾನದ ಕಡೆಗೆ ಕೊಂಡೊಯ್ಯುವ ಭಾರತೀಯ ಪರಂಪರೆ ಬಹು ದೊಡ್ಡ ಹಬ್ಬ ದೀಪಾವಳಿಯನ್ನು ಜಿಲ್ಲೆಯಾದ್ಯಂತಶ್ರದ್ಧಾಭಕ್ತಿ ಭಾವದಿಂದ ಆಚರಿಸಲಾಯಿತು.

ದೇವಾಲಯಗಳಲ್ಲಿ ಕೋವಿಡ್ ಎಂಬ ಹೆಮ್ಮಾರಿ ಇರುವುದರಿಂದ ಪ್ರತಿಯೊಬ್ಬರೂ ದೇವಾಲಯಕ್ಕೆ ಬರುವಾಗ ಕಡ್ಡಾಯವಾಗಿ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅರ್ಚಕರು ಸೂಚನೆನೀಡುತ್ತಿದ್ದದ್ದು, ಗಮನ ಸೆಳೆಯಿತು.ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿಯೂವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ನರಕಚತುದರ್ಶಿ ದಿನದಂದು ಹಲವು ಮನೆತನಗಳಲ್ಲಿ ಪಾರಂಪರಿಕವಾಗಿ ಆಚರಿಸುವ ದೀಪಾವಳಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಜಿಲ್ಲೆಯಲ್ಲಿ ಅಮಾವಾಸ್ಯೆ ಅಂಗವಾಗಿ ಲಕ್ಷ್ಮೀ ಪೂಜೆಯನ್ನು ನೆರವೇರಿಸಲಾಯಿತು. ರಾಜಸ್ಥಾನ ಮೂಲದ ವರ್ತಕರು ದೀಪಾವಳಿ ಅಮವಾಸ್ಯೆ ದಿನ ಹೊಸಲೆಕ್ಕಪುಸ್ತಕಗಳಿಗೆ ಪೂಜೆ ಮಾಡುವ ಪರಿಪಾಠವಿದ್ದು, ವಿಶೇಷವಾಗಿವರ್ತಕರುಅಂಗಡಿಗಳನ್ನುಅಲಂಕರಿಸಿ, ಲಕ್ಷ್ಮೀ ಪೂಜೆ ಮಾಡಿ, ಸಿಹಿ ಹಂಚಿದರು.

ದೇವನಹಳ್ಳಿ ನಗರದ ವೀರಭದ್ರ ಸ್ವಾಮಿ, ಪರ್ವತೇಶ್ವರ, ನಗರೇಶ್ವರ, ಗಂಗಮ್ಮ ದೇವಾಲಯ ಸೇರಿದಂತೆ ತಾಲೂಕಿನ ವಿವಿಧ ದೇವಾಲಯಗಳಲ್ಲಿಗೌರಿ ದೇವಿ ಮತ್ತು ಕೇದಾರೇಶ್ವರ ಸ್ವಾಮಿಯಪ್ರತಿಷ್ಠಾಪನಾ ಕಾರ್ಯಗಳು ಬೆಳಗಿನಿಂದಲೇನಡೆದವು. ಮಹಿಳೆಯರು ಬಿದಿರಿನ ಮರ ಮತ್ತುಬೆಳ್ಳಿಯ ತಟ್ಟೆಯಲ್ಲಿ ಕಜ್ಜಾಯ ಬಾಳೆಹಣ್ಣು, ಇತರೆ ವಸ್ತುಗಳನ್ನು ಇರಿಸಿ ಗೌರಿದೇವಿಗೆ ಸಮರ್ಪಿಸಿದರು.ಹಬ್ಬದಲ್ಲಿ ಕುಟುಂಬಸ್ಥರು ನೋಮಿದ ದಾರವನ್ನುಕೈಗೆ ಕಟ್ಟಿಕೊಂಡಿದ್ದರು. ಮನೆ ಮನೆ ಬೆಳಗುವ ದೀಪದಬೆಳಕು ಎಲ್ಲೆಡೆ ಪಸರಿಸಬೇಕೆಂಬುವುದು ದೀಪಾವಳಿ ಹಬ್ಬದ ಸಂಕೇತವಾಗಿದ್ದು, ಪ್ರತಿ ಮನೆ ಬಾಗಿಲಿನಲ್ಲಿಸಂಜೆ ದೀಪ ಹಚ್ಚಿ ಭಕ್ತಿ ಭಾವದಿಂದ ಆಚರಿಸಲಾಯಿತು. ದೀಪಾವಳಿದಿನದಂತೆ ಲಕ್ಷ್ಮೀ  ಹುಟ್ಟಿದ್ದಾಳೆಂಬಪ್ರತೀತಿ ಇದ್ದು, ಇಂದು ಲಕ್ಷ್ಮೀ ದೇವಿಯನ್ನು ಪೂಜೆ ಮಾಡಿದರೆ, ಲಕ್ಷ್ಮೀ ಕಟಾಕ್ಷ ಇರುತ್ತದೆ ಎಂದು ಹಿರಿಯರು ಹೇಳುತ್ತಾರೆ.

ಈ ಬಾರಿ ಕೊರೊನಾ ಇರುವುದರಿಂದ ಪಟಾಕಿ ನಿಷೇಧ ಮಾಡಿದ್ದರೂ ಸರ್ಕಾರ ಅನೇಕ ಕಾನೂನುಗಳನ್ನು ಜಾರಿಗೊಳಿಸಿದೆ. ಪಟಾಕಿ ಮಾರಾಟಗಾರರಂತೂ ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಹಸಿರು ಪಟಾಕಿ ಯಾವ ಕಂಪನಿಗಳು ತಯಾರಿಸಿದೆ. ಯಾವ ರೀತಿ ಹಸಿರುವ ಪಟಾಕಿ ಇದೆ ಎಂಬುವುದೇ ಜನರಿಗೆ ತಿಳಿದಿಲ್ಲ ಎಂಬುವುದುಪಟಾಕಿಮಾರಾಟಗಾರರಅಭಿಪ್ರಾಯ. ವಿಜಯಪುರಮತ್ತುಬೆಂಗಳೂರು ನಗರದಲ್ಲಿಪಟಾಕಿ ಮಾರಾಟ ಮಾಡಲು ಮಂಜೂರಾತಿ ನೀಡುತ್ತಾರೆ. ಆದರೆ, ದೇವನಹಳ್ಳಿಯಲ್ಲಿ ಯಾವುದೇ ಪರವಾನಗಿ ನೀಡಿಲ್ಲ ಎಂದು ಪಟಾಕಿ ಮಾರಾಟಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.