ಕೊರೊನಾ ನಿಯಂತ್ರಣಕ್ಕೆ ಶಕ್ತಿ ಮೀರಿ ಶ್ರಮ


Team Udayavani, Jun 16, 2021, 6:14 PM IST

covid news

ದೊಡ್ಡಬಳ್ಳಾಪುರ: ಕೊರೊನಾ ಭೀಕರತೆಯಿಂದಹಲವು ಕುಟುಂಬಗಳು ತಮ್ಮ ಕುಟುಂಬಕ್ಕೆ ಆಸರೆಇದ್ದವರನ್ನು ಕಳೆದುಕೊಂಡಿದ್ದಾರೆ. ಇಂತಹಸಂದರ್ಭದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಮುಂದಿನ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ನೆರವುನೀಡುವ ಸೇವಾ ಸಂಸ್ಥೆಗಳ ಪಾತ್ರ ಅಭಿನಂದನೀಯ ಎಂದು ಕಂದಾಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಅಶೋಕ್‌ ತಿಳಿಸಿದರು.

ನಗರದ ಡಾ.ರಾಜ್‌ಕುಮಾರ್‌ ಕಲಾ ಮಂದಿರದಲ್ಲಿಮಹಾತ್ಮ ಗಾಂಧಿ ಸೇವಾ ಟ್ರಸ್ಟ್‌ ವತಿಯಿಂದ “ನೀವುಅನಾಥರಲ್ಲ’ ಮಕ್ಕಳ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿಸಾಂಕೇತಿಕವಾಗಿ ಮಕ್ಕಳನ್ನು ದತ್ತು ಸ್ವೀಕಾರ ಪ್ರಮಾಣಪತ್ರ ವಿತರಿಸಿ ಮಾತನಾಡಿ, ಕೊರೊನಾ ಪರಿಸ್ಥಿತಿನಿರ್ವಹಣೆಯಲ್ಲಿ ಸರ್ಕಾರ ಶಕ್ತಿ ಮೀರಿ ಕೆಲಸಮಾಡುತ್ತಿದೆ. ಕೊರೊನಾದಿಂದ ಸಾವಿಗೀಡಾದ ಬಡಕುಟುಂಬಗಳಿಗೆ 1 ಲಕ್ಷ ರೂ. ನೀಡಲಾಗುತ್ತಿದೆ. ಕೇಂದ್ರಸರ್ಕಾರದ ಸಹಯೋಗದಲ್ಲಿ ಡಿಸೆಂಬರ್‌ ಒಳಗಾಗಿಎಲ್ಲರಿಗೂ ಲಸಿಕೆ ನೀಡಲಾಗುವುದು.

ಕೋವಿಡ್‌ಎಲ್ಲರನ್ನೂ ಸಂಕಷ್ಟಕ್ಕೆ ಸಿಲುಕಿಸಿದ್ದು, ಅನಾಹುತಗಳುಸಂಭವಿಸಿವೆ. ಪ್ರತಿಯೊಬ್ಬರು ಅಗತ್ಯ ಎಚ್ಚರಿಕೆ ವಹಿಸಿದರೆಕೊರೊನಾ ಮುಕ್ತ ಮಾಡಬಹುದು. ಮಾಸ್ಕ್ ಧರಿಸಿ,ಸ್ಯಾನಿಟೈಸರ್‌ ಬಳಸಿ ಹಾಗೂ ಸಾಮಾಜಿಕ ಅಂತರಪಾಲಿಸುವ ಮೂಲಕ ಎಲ್ಲರೂ ಮುನ್ನೆಚ್ಚರಿಕೆಕ್ರಮಗಳನ್ನು ಕೈಗೊಳ್ಳಬೇಕು. ಕೊರೊನಾ ನಮಗೆಮಾನವೀಯತೆ ಹಾಗೂ ಆತ್ಮಸಾಕ್ಷಿಯಿಂದ ಬದುಕುವಪಾಠ ಕಲಿಸಿದ್ದು, ಇನ್ನೊಬ್ಬರ ಕಷ್ಟಕ್ಕೆ ನೆರವಾಗಬೇಕಿದೆಎಂದು ಹೇಳಿದರು.

ಸಂಚಾರಿ ವಿಜಯ್ನಿಧನಕ್ಕೆ ಸಂತಾಪ: ನಟ ಸಂಚಾರಿವಿಜಯ್‌ ನಿಧನಕ್ಕೆ ಸಂತಾಪ ಸೂಚಿಸಿದ ಅವರು,ವಿಜಯ್‌ ಅವರು ಪರಿಸರ ಹಾಗೂ ಸಾಮಾಜಿಕ ಕಳಕಳಿಹೊಂದಿದ್ದ ಅಸಮಾನ್ಯ ವ್ಯಕ್ತಿಯಾಗಿದ್ದು, 20 ವರ್ಷಗಳನಂತರ ರಾಷ್ಟ್ರಪ್ರಶಸ್ತಿ ಸಿಕ್ಕಿದೆ ವಿಜಯ್‌ ಅವರಿಂದ.ಸಾವಿನಲ್ಲಿಯೂ ಅಂಗಾಂಗಗಳನ್ನು ದಾನ ಮಾಡುವಮೂಲಕ ಸಾರ್ಥಕತೆ ಮೆರೆದಿದ್ದಾರೆ ಎಂದರು.

ಕೋವಿಡ್ಸೋಂಕಿನ ಪ್ರಮಾಣ ಕಡಿಮೆ: ಮಹಾತ್ಮಗಾಂಧಿ ಸೇವಾ ಟ್ರಸ್ಟ್‌ ಸಂಸ್ಥಾಪಕ ವಿನಯ್‌ ಗುರೂಜಿಮಾತನಾಡಿ, ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಮಾಡುವಲ್ಲಿ ಯಶಸ್ವಿಯಾಗಿದ್ದು, ಕೋವಿಡ್‌ ಸೋಂಕಿನಪ್ರಮಾಣ ಗಣನೀಯವಾಗಿ ಕಡಿಮೆಯಾಗುತ್ತಿದೆ.ಕೇವಲ ಮತ ಹಾಕುವುದಷ್ಟೇ ಪ್ರಜೆಗಳ ಕೆಲಸವಲ್ಲ.ಸಾಂಕ್ರಾಮಿಕ ರೋಗಗಳಂತಹ ಸಮಸ್ಯೆಗಳು ಬಂದಾಗ,ಪಕ್ಷಾತೀತವಾಗಿ ಎಲ್ಲರೂ ಕೆಲಸ ನಿರ್ವಹಿಸಬೇಕು.ಕೋವಿಡ್‌ ಸಂದರ್ಭದಲ್ಲಿ ರಾಜಕೀಯ ಮಾಡುವುದುಸರಿಯಲ್ಲ. ಸರ್ಕಾರದ ಜೊತೆ ಕೈ ಜೋಡಿಸಿತಮ್ಮಿಂದಾಗುವ ಸಹಾಯ ಮಾಡಬೇಕು.

ರಾಜ್ಯದಲ್ಲಿನಿರಂತರವಾಗಿ 47ನೇ ದಿನ ಕಾರ್ಯಕ್ರಮಗಳನ್ನುಹಮ್ಮಿಕೊಳ್ಳಲಾಗಿದ್ದು, ಕೋವಿಡ್‌ನಿಂದ ತಂದೆ ಅಥವಾತಾಯಿಯನ್ನು ಕಳೆದುಕೊಂಡ ಮಕ್ಕಳನ್ನು ದತ್ತು ಪಡೆದು, ಅವರ ಶಿಕ್ಷಣ, ಆಹಾರ, ಕೆಲಸ ಹಾಗೂ ಹೆಣ್ಣುಮಕ್ಕಳ ಮದುವೆಯನ್ನು ಟ್ರಸ್ಟ್‌ ವತಿಯಿಂದ ಮಾಡಲಾಗುತ್ತದೆ. ಗಂಡು ಮಕ್ಕಳಿಗೆ ಉದ್ಯೋಗ ಕಲ್ಪಿಸುವವರೆಗೆದತ್ತು ಪಡೆಯಲಾಗುವುದು. ಈಗಾಗಲೇ ರಾಜ್ಯಾದ್ಯಂತಜಿಲ್ಲಾ ಕೇಂದ್ರದಲ್ಲಿ ಟ್ರಸ್ಟ್‌ ವತಿಯಿಂದ ಅನ್ನಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಕೊರೊನಾದಿಂದ ಮೃತಪಟ್ಟಿದ್ದ 5ಪೋಷಕರ 7 ಮಕ್ಕಳನ್ನು ಸಾಂಕೇತಿಕವಾಗಿ ದತ್ತು ಪಡೆಯಲಾಯಿತು. ಆಶಾ ಕಾರ್ಯಕರ್ತೆಯರಿಗೆ ಆಕ್ಸಿಮೀಟರ್‌,ಮಾಸ್ಕ್, ಪೇಸ್‌ ಶೀಲ್ಡ್‌ ವಿತರಿಸಿದರು.

ಜಿÇÉಾಡಳಿತಕ್ಕೆಆಮ್ಲಜನಕ ಸಾಂದ್ರಕಗಳನ್ನು ಹಸ್ತಾಂತರಿಸಲಾಯಿತು.ಶಾಸಕ ಟಿ.ವೆಂಕಟರಮಣಯ್ಯ, ಉತ್ತರಹಳ್ಳಿಶಾಸಕ ಎಂ.ಕೃಷ್ಣಪ್ಪ, ಕರ್ನಾಟಕ ಕರಕುಶಲ ಅಭಿವೃದ್ಧಿನಿಗಮ ಹಾಗೂ ಮಹಾತ್ಮ ಗಾಂಧಿ ಸೇವಾ ಟ್ರಸ್ಟ್‌ಅಧ್ಯಕ್ಷ ಡಾ.ಬೇಳೂರು ರಾಘವೇಂದ್ರ ಶೆಟ್ಟಿ,ಕಾರ್ಯದರ್ಶಿ ಎ.ಸಿ.ಶಿವರಾಜು, ಜಿಲ್ಲಾಧಿಕಾರಿಕೆ.ಶ್ರೀನಿವಾಸ್‌, ಎಂ.ಸಿ.ಎ ಅಧ್ಯಕ್ಷ ಮುನಿಕೃಷ್ಣ,ಮುಖಂಡರಾದ ಬಿ.ಸಿ.ನಾರಾಯಣಸ್ವಾಮಿ,ಧೀರಜ್‌ ಮುನಿರಾಜು ಮತ್ತು ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.