ನಕಲಿ ದಾಖಲೆ ಸೃಷ್ಟಿಸಿ ಭೂಮಿ ಮಾರಾಟ ದಂಧೆ


Team Udayavani, Apr 17, 2021, 12:40 PM IST

Create a duplicate record of land sales

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ನಡೆದಿರುವ 164 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷಿಗೆ ಸಂಬಂಧಿಸಿದಂತೆ ನಡೆದಿರುವ ಅಕ್ರಮಗಳ ಕುರಿತು ವಿವಿಧ ಠಾಣೆಗಳಲ್ಲಿ 25 ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಬೆಂಗಳೂರುಗ್ರಾಮಾಂತರ ಜಿಲ್ಲಾ ಪೊಲೀಸ್‌ ಅಧೀಕ್ಷಕ ರವಿ ಡಿ.ಚನ್ನಣ್ಣನವರ್‌ ಹೇಳಿದರು.

ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,ಕೈಗಾರಿಕಾ ಪ್ರದೇಶಕ್ಕೆ ಸಮೀಪದ ರಘುನಾಥಪುರ, ಶಿವಪುರ ಗ್ರಾಮಗಳಲ್ಲಿ ಜೀವಂತವಾಗಿರುವ ವ್ಯಕ್ತಿಗಳು ಮೃತ ಪಟ್ಟಿದ್ದಾರೆ ಎಂದು ಮರಣ ಪ್ರಮಾಣ ಪತ್ರ ಪಡೆದು ಅಕ್ರಮವಾಗಿ ಖಾತೆ ಬದಲಾವಣೆ ಮಾಡಿಕೊಂಡು ಜಮೀನುಮಾರಾಟ ಮಾಡಲಾಗಿದೆ. ಸಾಸಲು ಹೋಬಳಿಯ ತೋಡಲ ಬಂಡೆ ಗ್ರಾಮದಲ್ಲಿ ರುದ್ರಪ್ಪ ಎಂಬುವವರು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲಾಗಿ ಮುತ್ತು ರಾಯಪ್ಪ ಎಂಬುವವರಿಗೆ ಸೇರಿದ್ದ ಜಮೀನನ್ನುತನ್ನದು ಎಂದು ವಂಶವೃಕ್ಷ ಮಾಡಿಸಿಕೊಂಡಿದ್ದಾರೆ. ಗ್ರಾಮದ ಹತ್ತು ಜನ ಸಾಕ್ಷಿಗಳ ನಕಲಿಸಹಿಗಳನ್ನು ಹಾಕುವ ಮೂಲಕ ಅಕ್ರಮವಾಗಿ ತಮ್ಮ ಹೆಸರಿಗೆ ಖಾತೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಒಂದೊಂದು ಜಮೀನು ಪ್ರಕರಣದಲ್ಲೂ ಒಂದೊಂದು ರೀತಿಯ ಅಕ್ರಮಗಳು ನಡೆದಿವೆ ಎಂದು ತಿಳಿಸಿದರು.

ತಾಲೂಕಿನಲ್ಲಿ ವಿವಿಧ ಯೋಜನೆಗಳಿಗೆ ಭೂಸ್ವಾಧೀನ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಕಲಿ ದಾಖಲೆಗಳ ಸೃಷ್ಟಿ ಮಿತಿ ಮೀರಿದೆ. ಜಮೀನುಗಳಿಗೆ ಅಕ್ರಮ ದಾಖಲೆಗಳನ್ನು ಸೃಷ್ಟಿಸುವಲ್ಲಿ ತಾಲೂಕಿನಲ್ಲಿ ಮೂರು ಗುಂಪುಗಳು ಸಕ್ರಿಯವಾಗಿರುವುದು ಬೆಳಕಿಗೆ ಬಂದಿದೆ. ನಕಲಿ ದಾಖಲೆ ಹೊಂದಿರುವ ಜಮೀನು ಮಾರಾಟ, ಖರೀದಿಯಲ್ಲಿ ರೌಡಿಶೀಟರ್‌ಗಳು, ಬೆಂಗಳೂರು ಮೂಲದ ರಿಯಲ್ ಎಸ್ಟೇಟ್‌ ಕಂಪನಿಯೊಂದು ಸಕ್ರಿಯವಾಗಿದೆ.ಈ ಬಗ್ಗೆಯು ತನಿಖೆಯಲ್ಲಿ ಬೆಳಕಿಗೆ ಬಂದಿದೆಎಂದರು.

ಆರ್‌ಟಿಸಿ ಪರಿಶೀಲಿಸಿಕೊಳ್ಳಿ: ಊರಿನಲ್ಲಿ ಇರದೇ ನೀಲಗಿರಿ ತೋಪುಗಳನ್ನು ಬೆಳೆಸಿರುವ ಹಾಗೂ ಹೊರ ಊರುಗಳಲ್ಲಿ ಇರುವವರು ಕನಿಷ್ಠ ವರ್ಷಕ್ಕೆ ಒಮ್ಮೆಯಾದರೂ ತಮ್ಮಜಮೀನಿನ ಆರ್‌ಟಿಸಿ ಗಳನ್ನು ಪರಿಶೀಲಿಸಿಕೊಳ್ಳಬೇಕು. ಅಲ್ಲದೆ ಯಾವುದೇ ಜಮೀನಿನ ಖಾತೆ ವರ್ಗಾವಣೆಯ ವಿವಿಧ ಹಂತಗಳನ್ನುತಮ್ಮ ಮೊಬೈಲ್‌ಗ‌ಳಲ್ಲಿಯೇ ಆನ್‌ಲೈನ್‌ಗಳ ಮೂಲಕ ಪರಿಶೀಲನೆ ನಡೆಸಿಕೊಳ್ಳಬಹುದಾಗಿದೆ. ಹೀಗಾಗಿ ಖಾತೆ ಬದಲಾವಣೆ ಕುರಿತಂತೆ ಅನುಮಾನ ಬಂದ ಕೂಡಲೇ ಕಂದಾಯ ಇಲಾಖೆಗೆ ಹಾಗೂ ಪೊಲೀಸರಿಗು ಲಿಖೀತದೂರು ನೀಡಬಹುದಾಗಿದೆ ಎಂದರು.

ಜಮೀನುಗಳಿಗೆ ನಕಲಿ ದಾಖಲೆ ಸೃಷ್ಟಿಯತಂಡವನ್ನು ಬೆಯಲಿಗೆ ತಂದ ಡಿವೈಎಸ್ಪಿಟಿ.ರಂಗಪ್ಪ ಸೇರಿದಂತೆ ಪೊಲೀಸರ ತಂಡಕ್ಕೆಕೇಂದ್ರವಲಯ ಐಜಿಪಿ ಅವರು ನಗದುಬಹುಮಾನ ಘೋಷಣೆ ಮಾಡಿದ್ದಾರೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್‌ಅಧೀಕ್ಷಕ ಲಕ್ಷ್ಮೀಗಣೇಶ್‌, ಡಿವೈಎಸ್ಪಿಟಿ.ರಂಗಪ್ಪ, ಸರ್ಕಲ್‌ ಇನ್ಸ್‌ಪೆಕ್ಟರ್‌ಎಂ.ಬಿ.ನವೀನ್‌ಕುಮಾರ್‌, ಇನ್ಸ್‌ಪೆಕ್ಟರ್‌ಸತೀಶ್‌, ಸಬ್‌ ಇನ್ಸೆಪೆಕ್ಟರ್‌ ಮಂಜುನಾಥ್‌,ಗಜೇಂದ್ರ ಇತರರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.