ಬೆಳೆ ಹಾನಿ: ಕೇಂದ್ರ ವಿಪತ್ತು ಅಧ್ಯಯನ ತಂಡದಿಂದ ಪರಿಶೀಲನೆ


Team Udayavani, Dec 19, 2021, 12:57 PM IST

ಬೆಳೆ ಹಾನಿ: ಕೇಂದ್ರ ವಿಪತ್ತು ಅಧ್ಯಯನ ತಂಡದಿಂದ ಪರಿಶೀಲನೆ

ದೇವನಹಳ್ಳಿ: ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದಾಗಿ ಕೃಷಿ, ತೋಟಗಾರಿಕೆ, ಹೈನುಗಾರಿಕೆ, ದ್ರಾಕ್ಷಿ, ಸೇರಿದಂತೆ ಹಲವಾರು ಬೆಳೆಗಳು ನಷ್ಟಕ್ಕೆ ಒಳಗಾಗಿದ್ದು ಬೆಳೆ ಹಾನಿ ಪರಿಶೀಲನೆ ನಡೆಸಲು ಕೇಂದ್ರ ವಿಪತ್ತು ಅಧ್ಯಯನ ತಂಡ ಹಾನಿ ಕುರಿತು ಮಾಹಿತಿ ಪಡೆಯಿತು.

ತಾಲೂಕಿನ ಹಿರೆ ಅಮಾನಿಕೆರೆ ಸಮೀಪದ ರೈತರ ತೋಟಗಳಿಗೆ ಭೇಟಿ ನೀಡಿದ್ದ ಅವರು, ರಾಗಿ, ಜೋಳ, ಶೆಂಗಾ, ಶುಂಠಿ, ಗುಲಾಬಿ ಸೇರಿದಂತೆ ಹಲವಾರು ನಷ್ಟವಾಗಿರುವ ಬೆಳೆ ವೀಕ್ಷಿಸಿದರು.  ಕೊರೊನಾದಿಂದಾಗಿ ಮಾರುಕಟ್ಟೆ ಸೌಲಭ್ಯ ಸಿಗದೆ ಬೆಳೆ ನಾಶ ಮಾಡಿಕೊಂಡಿದ್ದೇವೆ. ಬಿತ್ತನೆ ಮಾಡಲು ಮಾಡಿರುವ ಸಾಲ ತೀರಿಸಲು ಸಾಧ್ಯವಾಗಿಲ್ಲ, ಕೃಷಿಗಾಗಿ ಬ್ಯಾಂಕುಗಳಲ್ಲಿ ಮಾಡಿಕೊಂಡಿರುವ ಸಾಲಗಳಿಗೆ ಬ್ಯಾಂಕಿನವರು ನೋಟಿಸ್‌ ನೀಡಿದ್ದಾರೆ. ಇದರೊಂದಿಗೆ ಇತ್ತಿಚೆಗೆ ಸುರಿದ ಮಳೆಯಿಂದಾಗಿ ಕೈಗೆ ಬಂದಿದ್ದ ಬೆಳೆಗಳೆಲ್ಲಾ ನಾಶವಾಗಿದೆ. ರಾಗಿ ಕಟಾವಿಗೂ ಮೊದಲೇ ನೆಲಕ್ಕುರುಳಿ ಮೊಳಕೆ ಬಂದು ಬೆಳೆಗಳು ಹಾಳಾಗಿವೆ. ತೋಟಗಾರಿಕಾ ಬೆಳೆಗಳೂ ಕೈಗೆ ಸಿಗಲಿಲ್ಲ, ನಮ್ಮ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಕೇಂದ್ರದಿಂದ ನಮಗೆ ಶೀಘ್ರ ಪರಿಹಾರ ಕೊಡಲಿಕ್ಕೆ ಶಿಫಾರಸ್ಸು ಮಾಡಿ ಎಂದು ತಿಳಿಸಿದರು.

ವಿಡಿಯೋ ಮೂಲಕ ಮಾಹಿತಿ: ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌ ಮಳೆಯಿಂದಾಗಿ ಹಾನಿಯಾದ ಸಮಗ್ರ ಮಾಹಿತಿ ಸಲ್ಲಿಸಿದರು. ಕೇಂದ್ರ ವಿಪತ್ತು ಅಧ್ಯಯನ ತಂಡದ ಮುಖ್ಯಸ್ಥ ಸುಶಿಲ್ಪಾಲ್ (ಮುಖ್ಯ ನಿಯಂತ್ರಕರು, ಲೆಕ್ಕಪತ್ರ, ಭಾರತ ಸರ್ಕಾರ), ಸದಸ್ಯ ಸುಭಾಷ್‌ ಚಂದ್ರ (ನಿರ್ದೇಶಕರು, ಕೃಷಿ ಇಲಾಖೆ, ಭಾರತ ಸರ್ಕಾರ) ಅವರಿಗೆ ಅಕ್ಟೋಬರ್‌ನಿಂದ ಜಿಲ್ಲೆಯಲ್ಲಿ ಅತಿವೃಷ್ಟಿ(ಮಳೆ ಹಾನಿ)ಯಿಂದ ಸಂಭವಿಸಿರುವ ಹಾನಿ ಕುರಿತು ಪಿಪಿಟಿ ಮೂಲಕ ಅಂಕಿ ಅಂಶ ಹಾಗೂ ವಿಡಿಯೋ ತುಣುಕುಗಳ ಸಮೇತ ಸಮಗ್ರವಾಗಿ ತಂಡಕ್ಕೆ ಮಾಹಿತಿ ನೀಡಿದರು.

ಪ್ರವಾಸಿ ಮಂದಿರದ ಹೊರಗೆ ನಿರ್ಮಿಸಿದ್ದ ಫೋಟೋ ಗ್ಯಾಲರಿ ಹಾಗೂ ಪ್ರಾತ್ಯಕ್ಷಿಕೆ ಮೂಲಕಮಳೆ ಹಾನಿ ಬಗ್ಗೆ ವಿವರಿಸಿದರು. ದೇವನಹಳ್ಳಿ ತಾಲೂಕಿನ ಕಸವಿಲೇವಾರಿ ಘಟಕ ಮತ್ತು ರೈತರ ಜಮೀನುಗಳಿಗೆ ಕೇಂದ್ರ ವಿಪತ್ತು ತಂಡ ಭೇಟಿ ನೀಡಿ ರೈತರಿಂದ ಮಾಹಿತಿ ಪಡೆಯಿತು.

ಮೇವು ಬೀಜ ವಿತರಿಸಿ: ಕೇಂದ್ರ ವಿಪತ್ತು ಅಧ್ಯಯನ ತಂಡದ ಮುಖ್ಯಸ್ಥ ಸುಶಿಲ್ಪಾಲ್‌ ಮಾತನಾಡಿ, ಈಗಾಗಲೇ ಹಂತ ಹಂತವಾಗಿ ರಾಜ್ಯದ ವಿವಿಧ ಕಡೆ ವಿಪತ್ತು ಅಧ್ಯಯನ ನಡೆಸಲಾಗುತ್ತಿದೆ. ರಾಜ್ಯಕ್ಕೆ ಇನ್ನಷ್ಟು ಅನುದಾನ ಬಿಡುಗಡೆಯಾಗಬೇಕಿದೆ. ಈಗಾಗಲೇ 857ಕೋಟಿ 12.5 ಲಕ್ಷ ರೂ.ಗಳವರೆಗೆ ರೈತರಿಗೆ ಜಮೆ ಮಾಡಲಾಗಿದೆ. ಮತ್ತಷ್ಟು ಆಗಬೇಕಿದೆ. ಹಾವೇರಿ ಮತ್ತು ಧಾರವಾಡ ಕಡೆಗಳಲ್ಲಿ ಹತ್ತಿ ಬೆಳೆ ನಷ್ಟವಾಗಿದೆ. ಚಿಕ್ಕಬಳ್ಳಾಪುರ ಮತ್ತು ತುಮಕೂರಿನಲ್ಲಿ ಶೇ.80 ರಷ್ಟು ರಾಗಿ ಮತ್ತು ಇತರೆ ತೋಟಗಾರಿಕಾ ಬೆಳೆ ಹಾಳಾಗಿದೆ. ಫೆಬ್ರವರಿಮಾರ್ಚ್‌ನಲ್ಲಿ ದನಗಳಿಗೆ ಮೇವಿನ ಸಮಸ್ಯೆ ಆಗುತ್ತಿದೆ. ರಾಗಿ, ಭತ್ತ, ಕಡಲೇಕಾಯಿ ಬೆಳೆ ನಷ್ಟವಾಗಿದೆ. ಜಿಲ್ಲಾಡಳಿತಕ್ಕೆ ದನಕರುಗಳಿಗೆ ಅನುಕೂಲವಾಗಲು ಮೇವು ಬೀಜ ವಿತರಿಸುವಂತೆ ಸೂಚನೆ ನೀಡಲಾಗುತ್ತದೆ ಎಂದು ಹೇಳಿದರು.

ರಾಜ್ಯ ಕೆಎಸ್‌ಡಿಎಂಎ ಆಯುಕ್ತ ಡಾ. ಮನೋಜ್‌ರಾಜನ್‌, ಹೆಚ್ಚುವರಿ ಕೃಷಿನಿರ್ದೇಶಕ ಬಿ.ಬಸವರಾಜು, ಹೆಚ್ಚುವರಿ ತೋಟಗಾರಿಕಾ ನಿರ್ದೇಶಕ ಬಿ.ಕೆ.ದುಂಡಿ, ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್‌, ಜಿಪಂ ಸಿಇಒ ಕೆ.ರೇವಣಪ್ಪ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೋ.ನಾ.ವಂಶಿಕೃಷ್ಣ, ತಹಶೀಲ್ದಾರ್‌ ಅನಿಲ್‌ ಕುಮಾರ್‌ ಅರೋಲಿಕರ್‌, ಮಂಜುನಾಥ್‌, ಶಿವರಾಜ್, ಗೀತಾ, ಜಿಲ್ಲಾ ಕೃಷಿ ಇಲಾಖೆ ಉಪನಿರ್ದೇಶಕಿ ವಿನುತಾ, ತಾಲೂಕು ಸಹಾಯಕ ನಿರ್ದೇಶಕಿ ವೀಣಾ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವೈಜ್ಞಾನಿಕ ಬೆಲೆ ಇಲ್ಲ : ಕೇಂದ್ರದ ತಂಡಕ್ಕೆ ತಮ್ಮ ಅಹವಾಲು ಸಲ್ಲಿಸಿದ ರೈತರು, ಹಲವಾರು ವರ್ಷಗಳಿಂದ ತೀವ್ರ ಮಳೆ ಕೊರತೆಯಿಂದಾಗಿ ಬರಗಾಲ ಎದುರಿಸಿದ್ದೇವೆ. ದನಕರುಗಳಿಗೆ ಮೇವು ಸಿಗದೆ ಪರದಾಡಿದ್ದೇವೆ. ಈ ವರ್ಷವಾದರೂ ಉತ್ತಮವಾಗಿ ಬೆಳೆಯಾದರೆ, ಹಿಂದಿನ ವರ್ಷಗಳಲ್ಲಿ ಮಾಡಿರುವ ಸಾಲಗಳನ್ನಾದರೂ ತೀರಿಸಿಕೊಳ್ಳಬಹುದೆಂಬ ನಿರೀಕ್ಷೆ ಇಟ್ಟುಕೊಂಡಿದ್ದೆವು. ಈಗ ರಸಗೊಬ್ಬರಬೆಲೆಗಳು ಗಗನಕ್ಕೇರಿವೆ. ಕಾರ್ಮಿಕರ ಕೊರತೆ, ನಾವು ಬೆಳೆದ ಬೆಳೆಗಳಿಗೆ ವೈಜ್ಞಾನಿಕವಾದ ಬೆಲೆಯಿಲ್ಲ ಎಂದು ರೈತರು ತಿಳಿಸಿದರು.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.