ಪೈರು ಬಂದ ರಾಗಿ, ಹಾಳಾದ ತರಕಾರಿ: ರೈತರಲ್ಲಿ ಆತಂಕ


Team Udayavani, Nov 24, 2021, 11:47 AM IST

ಕೃಷಿ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಮಳೆ ಕೊಂಚ ಮಟ್ಟಿಗೆ ಬಿಡುವು ಕೊಟ್ಟಿದೆ. ಆದರೆ ಮಳೆಯಿಂದಾಗಿ ರಾಗಿ, ಜೋಳ, ಅವರೆ ಮೊದಲಾದ ಕೃಷಿ ಬೆಳೆಗಳು, ಬಾಳೆ, ದ್ರಾಕ್ಷಿ, ತರಕಾರಿ ಮೊದಲಾಗಿ ತೋಟಗಾರಿಕೆ ಬೆಳೆಗಳು ಹಾಳಾಗಿ ರೈತರನ್ನು ಆತಂಕಕ್ಕೀಡು ಮಾಡಿವೆ.

ಹುಸಿಯಾದ ಉತ್ತಮ ರಾಗಿ ನಿರೀಕ್ಷೆ: ತಾಲೂಕಿನ ಹೋಬಳಿಗಳಲ್ಲಿ 2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೃಷಿ ಇಲಾಖೆಯ ಬೆಳೆ ಪ್ರಗತಿಯ ನ್ವಯ ಏಕದಳ ಧಾನ್ಯಗಳ ಬಿತ್ತನೆಯಲ್ಲಿ ಶೇ.101ರಷ್ಟು ತನ್ನ ಗುರಿಯನ್ನು ಮುಟ್ಟಿದೆ.

ರಾಗಿ, ಮುಸುಕಿನ ಜೋಳ, ಭತ್ತ, ತೃಣಧಾನ್ಯ, ಮೇವಿನ ಜೋಳ, ಪಾಪ್‌ ಕಾರ್ನ್ (ಏಕದಳ) ತೊಗರಿ, ಅಲಸಂದೆ, ಅವರೆ, ಉದ್ದು, ಹೆಸರು, ಹುರುಳಿ (ದ್ವಿದಳ), ನೆಲೆಗಡಲೆ, ಹರಳು, ಸಾಸುವೆ, ಹುಚ್ಚೆಳ್ಳು (ಎಣ್ಣೆಕಾಳು) ಸೇರಿದಂತೆ ಎಲ್ಲಾ ಬೆಳೆಗಳ 22,210 ಹೆಕ್ಟೇರ್‌ಗಳ ಗುರಿಗೆ 23,883 ಹೆಕ್ಟೇರ್‌ಗಳ ಗುರಿ ತಲುಪಿದೆ. 13,793 ಹೆಕ್ಟೇರ್‌ಗಳ ಗುರಿಯನ್ನು ಹೊಂದಿದ್ದ ರಾಗಿ ಬೆಳೆ 16,710 ಹೆಕ್ಟೇರ್‌ಗಳಲ್ಲಿ ಹಾಗೂ 7,270 ಹೆಕ್ಟೇರ್‌ಗಳ ಗುರಿಯನ್ನು ಹೊಂದಿದ್ದ ಮುಸುಕಿನ ಜೋಳದ ಬೆಳೆ 5,415 ಹೆಕ್ಟೇರ್‌ಗಳಲ್ಲಿ ಬೆಳೆಯಲಾಗಿದೆ.

ರೈತರಿಗೆ ಈಗ ನಿರಾಸೆ: ಸರ್ಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ರಾಗಿ ಖರೀದಿ ಮಾಡುತ್ತಿರುವುದರಿಂದ ನಿಗದಿತ ಬೆಲೆ, ಸೂಕ್ತ ಸಮಯಕ್ಕೆ ಹಣ ಬರುವ ನಿರೀಕ್ಷೆ ಹಾಗೂ ರಾಸುಗಳಿಗೆ ಒಣ ಹುಲ್ಲು ದೊರೆ ಯುವ ನಿರೀಕ್ಷೆಯಲ್ಲಿದ್ದ ರೈತರಿಗೆ ಈಗ ನಿರಾಸೆ ಯುಂಟಾ ಗಿದೆ. ಒಂದು ವಾರದಿಂದಲು ಸುರಿಯುತ್ತಲೇ ಇರುವ ಮಳೆಯಿಂದಾಗಿ ರಾಗಿ ಹೊಲಗಳು ಸಂಪೂರ್ಣವಾಗಿ ನೆಲಕಚ್ಚಿದ್ದು, ರಾಗಿ ತೆನೆಗಳು ಮೊಳಕೆಯೊಡೆದು ಪೈರು ಬೆಳೆದಿವೆ. ಈಗ ಮಳೆ ನಿಂತರು ಹುಲ್ಲು ಸಹ ಮೇವಿಗೆ ಹುಲು ಸಹ ದೊರಕದಂತಾಗಿದೆ.

ಹಾಳಾದ ತರಕಾರಿ, ದ್ರಾಕ್ಷಿ ಬೆಳೆ: ಪಾಲಿಹೌಸ್‌ಗಳಲ್ಲಿ ಬೆಳೆಸಲಾಗಿರುವ ಒಂದಿಷ್ಟು ತರಕಾರಿ, ಹೂವುಗಳನ್ನು ಹೊರತು ಬಯಲಿನಲ್ಲಿ ಬೆಳೆಸಲಾಗಿದ್ದ ಬಹುತೇಕ ತರಕಾರಿ, ಹೂವು ಬೆಳೆ ಮಳೆಯಿಂದಾಗಿ ನಾಶವಾಗಿದೆ. ಅಳಿದುಳಿದಿರುವ ಟೊಮ್ಯಾಟೋ ಕಾಯಿಗಳ ತೊಟ್ಟುಗಳು ಕಪ್ಪಾಗಿ ಗಿಡದಿಂದ ಬಿದ್ದು ಹೋಗುತ್ತಿವೆ. ಕ್ಯಾರೆಟ್, ಮೂಲಂಗಿ, ಭೂಮಿಯಲ್ಲೇ ಕೊಳೆತು ಹೋಗಿವೆ. ಹೂವುಗಳು ನೀರು ತುಂಬಿಕೊಂಡು ಬಾಡಿ ದಂತಾಗಿವೆ. ಮಾರುಕಟ್ಟೆಯಲ್ಲಿ ತರಕಾರಿಗಳ ಬೆಲೆ ಏರಿಕೆಯಾಗಿದ್ದರು ರೈತರಿಗೆ ಅದರ ಲಾಭ ಸಿಗುತ್ತಿಲ್ಲ. ‌

ಮಳೆಯಿಂದಾಗಿ ಈ ಬಾರಿ ಕಟಾವಿಗೆ ಬಂದಿದ್ದ ದ್ರಾಕ್ಷಿ ಗಿಡದಲ್ಲಿಯೇ ಕೊಳೆಯುತ್ತಿದ್ದು, ದ್ರಾಕ್ಷಿಗೆ ಬೆಲೆ ಕಡಿಮೆಯಾಗಿದೆ. ಬಾಳೆ, ಆಲೂಗಡ್ಡೆ, ಬೀನ್ಸ್‌ ಮೊದಲಾದ ಬೆಳೆಗಳು ಹಾಳಾಗಿವೆ. ಪರಿಸ್ಥಿತಿ ಸುಧಾರಿಸ ಬೇಕಾದರೆ ಇನ್ನೂ ಮೂರು ತಿಂಗಳು ಕಾಯಬೇಕಿದೆ ಎನ್ನುತ್ತಾರೆ ವಡ್ಡರಹಳ್ಳಿ ರೈತ ಶ್ರೀನಿವಾಸ ರೆಡ್ಡಿ

ಮೂರು ದಿನಗಳಲ್ಲಿ ಮಾಹಿತಿ ಸಂಗ್ರಹ

ತಾಲೂಕಿನಲ್ಲಿ ಈವರೆಗೆ ಅಂದಾಜು 120 ಹೆಕ್ಟೇರ್‌ ತೋಟಗಾರಿಕೆ ಬೆಳೆ ನಷ್ಟವಾಗಿದೆ. ತೋಟಗಾರಿಕೆ, ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸರ್ವೆ ನಡೆಸಲಾಗುತ್ತಿದ್ದು, ಇನ್ನು ಮೂರು ದಿನಗಳೊಳಗೆ ವರದಿ ಸಲ್ಲಿಸಲಾಗುವುದು. ಬೆಳೆ ಹಾನಿಗೊಳಗದ ರೈತರ ಎಫ್‌ಐಡಿ ಮಾಹಿತಿಯನ್ನು ತಂತ್ರಾಂಶದಲ್ಲಿ ಅಪ್‌ಲೋಡ್‌ ಮಾಡಲಾಗುತ್ತಿದೆ ಎಂದು ತೋಟಗಾರಿಕೆ ಇಲಾಖೆಯ ತಾಲೂಕು ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.