ನೀರಿನ ಅಪವ್ಯಯಕ್ಕೆ ಕಡಿವಾಣ ಹಾಕಿ


Team Udayavani, Apr 23, 2019, 3:10 AM IST

neerina

ದೇವನಹಳ್ಳಿ: ನೀರಿನ ಮಹತ್ವವನ್ನು ಅರಿತು ಮಳೆ ನೀರನ್ನು ಸರಿಯಾಗಿ ಉಪಯೋಗಿಸಿಕೊಂಡರೆ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಸಿ.ಎಸ್‌.ಕರೀಗೌಡ ತಿಳಿಸಿದರು.

ತಾಲೂಕಿನ ಚಪ್ಪರದಕಲ್ಲು ಸರ್ಕಲ್‌ ಬಳಿಯ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ವ್ಯಾಪ್ತಿಯ ಕೈಗಾರಿಕೆಗಳು, ವಾಣಿಜ್ಯ ಕಟ್ಟಡಗಳು, ಕಲ್ಯಾಣ ಮಂಟಪಗಳು, ಚಿತ್ರಮಂದಿರಗಳು ಹಾಗೂ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ಕಟ್ಟಡಗಳಲ್ಲಿ ಕಡ್ಡಾಯವಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಮಳೆನೀರು ಕೊಯ್ಲು ಅನುಷ್ಠಾನಗೊಳಿಸುವ ಬಗ್ಗೆ ನಡೆದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಳೆ ನೀರನ್ನು ಸಂಗ್ರಹಿಸಲು ಮಳೆ ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಅತೀ ಮುಖ್ಯವಾಗಿದೆ. ಅಧಿಕಾರಿಗಳು ಕೂಡಲೇ ಸಂಬಂಧಪಟ್ಟವರಿಗೆ ನೋಟಿಸ್‌ ಕೊಟ್ಟು ಚುನಾವಣೆ ಮಾದರಿಯಲ್ಲಿಯೇ ಈ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಸೂಚನೆ ನೀಡಿದರು.

ಪ್ರಯೋಗ ಯಶಸ್ವಿ: 15 ದಿನಗಳ ಹಿಂದಷ್ಟೇ ದೊಡ್ಡಬಳ್ಳಾಪುರ ಕಾವೇರಿ ಕಲ್ಯಾಣ ಮಂಟಪದಲ್ಲಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಂಡಿರುವುದರಿಂದ ಕಳೆದ ಏಪ್ರಿಲ್‌ 18 ರಂದು ಸುರಿದ ಮಳೆಯಿಂದಾಗಿ 23 ಸಾವಿರ ಲೀಟರ್‌ ಮಳೆ ನೀರು ಸಂಗ್ರಹವಾಗಿದೆ. ನಗರ ವ್ಯಾಪ್ತಿಯ ಕಲ್ಯಾಣ ಮಂಟಪಗಳಲ್ಲಿ ಮಳೆನೀರು ಕೊಯ್ಲು ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಒಂದು ತಿಂಗಳಿಂದ ಸೂಚನೆ ನೀಡಲಾಗಿತ್ತು.

ಈ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಕೈಗಾರಿಕೆಗಳು, ವಾಣಿಜ್ಯ ಕಟ್ಟಡಗಳು, ಕಲ್ಯಾಣ ಮಂಟಪಗಳು, ಚಿತ್ರಮಂದಿರಗಳು, ನಿವೇಶನಗಳಲ್ಲಿ ನಿರ್ಮಿಸಲಾಗಿರುವ ಕಟ್ಟಡಗಳು ಒಂದು ತಿಂಗಳೊಳಗಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳಿಂದ ನೋಟಿಸ್‌ ಕಳಿಸಲಾಗುವುದು ಎಂದು ತಿಳಿಸಿದರು.

ಸೂಚನೆ ಪಾಲಿಸದಿದ್ದರೆ ಕ್ರಮ: ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಳ್ಳದ ಮನೆ ಅಥವಾ ಕಟ್ಟಡಗಳ ಮಾಲಿಕರು ಹಾಗೂ ಕಂಪನಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಾಂಪ್ರದಾಯಿಕ ವಿಧಾನ: ನಮ್ಮ ಸುತ್ತುಮುತ್ತಲು ವ್ಯರ್ಥವಾಗಿ ಹರಿದುಹೋಗುವ ಮಳೆ ನೀರನ್ನು ಹಿಡಿದಿಟ್ಟುಕೊಳ್ಳಲು ಅಗತ್ಯವಿರುವ ಎಲ್ಲಾ ಸಾಂಪ್ರದಾಯಿಕ ವಿಧಾನಗಳನ್ನು ಪುನಃಶ್ಚೇತನಗೊಳಿಸಿಕೊಳ್ಳಲು ನಾವು ಪ್ರಥಮ ಆದ್ಯತೆ ನೀಡಬೇಕಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ಗಂಟಿಗಾನಹಳ್ಳಿ ಸಮೀಪದಲ್ಲಿ ಒಬ್ಬರು ಮುಂದೆ ಬಂದಿದ್ದು, ಎರಡು ಲಕ್ಷ ಅಡಿ ಜಾಗದಲ್ಲಿ ಒಂದು ವರ್ಷಕ್ಕೆ ಮಳೆ ನೀರಿನಿಂದ ಒಂದು ಕೆಒಟಿ 75 ಲಕ್ಷ ನೀರು ಉಳಿಸಿ ಒಂದು ದಿನಕ್ಕೆ 435 ಜನರಿಗೆ ನೀರು ಹಾಗೂ ಒಬ್ಬ ಮನುಷ್ಯನಿಗೆ 135 ಲೀಟರ್‌ ನೀರು ನೀಡುವ ಶಕ್ತಿ ಹೊಂದಿದ್ದಾರೆ ಎಂದರು.

ನೈಸರ್ಗಿಕ ನೀರಿನಿಂದ ಆರೋಗ್ಯ ವೃದ್ಧಿ: ಮಧುಗಿರಿ ಬಳಿ ಒಂದು ಹಳ್ಳಿಗೆ ತಂಡ ಭೇಟಿ ನೀಡಿ ಅಲ್ಲಿನ ಮಳೆ ಕೊಯ್ಲು ಬಗ್ಗೆ ಅಧ್ಯಯನ ಮಾಡಿದೆ. ನೈಸರ್ಗಿಕ ನೀರಿನಿಂದ ಆರೋಗ್ಯ ಹೆಚ್ಚಳ, ವಿವಿಧ ಕಾಯಿಲೆಗಳಿಂದ ಮುಕ್ತಿ, ಆ ನೀರನ್ನು ಸಂಸ್ಕರಿಸಿ ಮತ್ತೂಂದು ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ನೀಡುತ್ತಿರುವುದು ತಂಡಕ್ಕೆ ಮನವರಿಕೆಯಾಗಿದೆ.

ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕಾರ್ಖಾನೆ ಮತ್ತು ಬಾಯ್ಲರ್‌, ಕಾರ್ಮಿಕ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ನಗರಸಭೆ, ಬೆಸ್ಕಾಂ, ಪುರಸಭೆ, ಮುಖ್ಯಾಧಿಕಾರಿಗಳು, ಪೌರಾಯುಕ್ತರು ತಮ್ಮ ವ್ಯಾಪ್ತಿಯಲ್ಲಿ ಬರುವ ಕೈಗಾರಿಕೆ, ವಾಣಿಜ್ಯ ಕಟ್ಟಡಗಳು ಹಾಗೂ ಕಟ್ಟಡಗಳ ಮಾಲಿಕರ ವಿವರ ಸಂಗ್ರಹಿಸಿ, ಸೂಚನೆ ನೀಡಬೇಕೆಂದರು.

ಫ್ಲೋರೈಡ್‌ಯುಕ್ತ ನೀರು: ಈ ಭಾಗದ ನೀರಿನಲ್ಲಿ ಫ್ಲೋರೈಡ್‌ ಅಂಶ ಇರುವುದರಿಂದ ಈ ನೀರನ್ನು ಕುಡಿದರೆ ಹಲ್ಲುಗಳ ಸಮಸ್ಯೆ, ಮುಖ ಬಿಳುಚುವುದು ಹೀಗೆ ಹತ್ತು ಹಲವಾರು ಸಮಸ್ಯೆಗಳನ್ನು ಎದುರಿಸುವಂತಾಗುತ್ತದೆ. ಫ್ಲೋರೋಸಿಸ್‌ನಿಂದ ಮೂಳೆ ಸಮಸ್ಯೆಯಾಗುತ್ತದೆ. ಇದರ ಜೊತೆಗೆ 35 ವರ್ಷದವರು 60 ವರ್ಷದವರಂತೆ ಕಾಣಿಸುತ್ತಾರೆ ಎಂದರು.

ಎನ್‌ಐಸಿಯಿಂದ ವೆಬ್‌ಸೈಟ್‌ ಆರಂಭ: ಪ್ರತಿ ಅಧಿಕಾರಿಯೂ ವೆಬ್‌ಸೈಟ್‌ ವಿವರಗಳನ್ನು ಅಪ್‌ಡೇಟ್‌ ಮಾಡಲು ಎನ್‌ಐಸಿ ಕಡೆಯಿಂದ ಹೊಸದಾಗಿ ವೆಬ್‌ಸೈಟ್‌ ಸೃಜಿಸಲಾಗುತ್ತದೆ. ಬೆಂಗಳೂರು ಗ್ರಾಮಾಂತರ ಮಳೆ ನೀರು ಕೊಯ್ಲು ಪ್ರಗತಿ ಎಂಬ ಜಿ-ಮೇಲ್‌ ಸಹ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಹಿರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಪಲ್ಲವಿ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಅಧಿಕಾರಿ ಕೆ.ಎಂ.ಜಗದೀಶ್‌. ನಂಜಪ್ಪ, ದೇವನಹಳ್ಳಿ ಪುರಸಭಾ ಮುಖ್ಯಾಧಿಕಾರಿ ಹನುಮಂತೇಗೌಡ, ವಿಜಯಪುರ ಪುರಸಭಾ ಮುಖ್ಯಾಧಿಕಾರಿ ನಾಗರಾಜ್‌ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.