ಆಡಂಬರದ ಮದುವೆಗೆ ಕಡಿವಾಣ ಹಾಕಿ; ಸಚಿವ ಎಂಟಿಬಿ

ಸರಳವಾಗಿ ದೇವಾಲಯದಲ್ಲಿ ಮದುವೆಯದವರು ಸುಖವಾಗಿ ಬದುಕಿ ಬಾಳುತ್ತಿದ್ದಾರೆ

Team Udayavani, May 26, 2022, 5:44 PM IST

ಆಡಂಬರದ ಮದುವೆಗೆ ಕಡಿವಾಣ ಹಾಕಿ; ಸಚಿವ ಎಂಟಿಬಿ

ದೊಡ್ಡಬಳ್ಳಾಪುರ: ಸಮಾಜದಲ್ಲಿ ಆಡಂಬರದ ಮದುವೆಗಳು ಕಡಿಮೆಯಾಗಿ, ಇದಕ್ಕೆ ಬಳಸುವ ಹಣ ದಂಪತಿಗಳ ಜೀವನ ನಿರ್ವರ್ಹಣೆಗೆ ನೀಡಬಹುದಾಗಿದೆ. ಮುಂದೆ ನನ್ನ ಮೊಮ್ಮಕ್ಕಳಿಗೂ ಸಾಮೂಹಿಕ ವಿವಾಹದಲ್ಲೇ ಧಾರೆ ಎರೆದು ಕೊಡುವ ಅಭಿಲಾಷೆಯಿದೆ ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ ಹೇಳಿದರು.

ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ತಾಲೂಕಿನ ಘಾಟಿ ಕ್ಷೇತ್ರದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನಡೆದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನವ ವಧುವರರಿಗೆ ಶುಭ ಹಾರೈಸಿ ನಂತರ ಮಾತನಾಡಿದ ಅವರು, ಈ ಹಿಂದೆ ಮದುವೆಗಳಲ್ಲಿ ಆಡಂಬರವಿರಲಿಲ್ಲ. ನನಗೂ ಕೂಡ ಮನೆ ಮುಂದೆ ದೇವರ ಫೋಟೊ ಇಟ್ಟು ಮದುವೆ ಮಾಡಿಸಿದ್ದರು. ಸರಳವಾಗಿ ದೇವಾಲಯದಲ್ಲಿ ಮದುವೆಯದವರು ಸುಖವಾಗಿ ಬದುಕಿ ಬಾಳುತ್ತಿದ್ದಾರೆ ಎಂದರು.

ಆರ್ಥಿಕವಾಗಿ ದುರ್ಬಲರಾಗಿರುವವರು, ಗ್ರಾಮೀಣ ಪ್ರದೇಶದಲ್ಲಿರುವವರು, ಬಡವರಿಗೆ ಸಾಮೂಹಿಕ ವಿವಾಹ ನೆರವಾಗುತ್ತಿದ್ದು, ಈ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿರುವುದು ನಮಗೆ ಅತೀವ ಸಂತೋಷವಾಗಿದೆ ಎಂದು ತಿಳಿಸಿದರು.

ಬಡವರಿಗೆ ಅನುಕೂಲ: ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಹಿಂದೆ ಕೋವಿಡ್‌ ಕಾರಣದಿಂದ ಸಾಮೂ ಹಿಕ ವಿವಾಹಗಳು ಮುಂದೂಡಲಾಗಿತ್ತು. ಈಗ ಪರಿಸ್ಥಿತಿ ಸುಧಾರಿಸಿರುವುದರಿಂದ ಮತ್ತೆ ಸಾಮೂಹಿಕ ವಿವಾಹಗಳನ್ನು ಆರಂಭಿಸಿರುವುದು ಸಂತಸ ವಾಗಿದ್ದು, ಇದರಿಂದ ಕೂಲಿಕಾರ್ಮಿಕರು, ದೀನ ದಲಿತರು ಹಾಗೂ ದುರ್ಬಲರಿಗೆ ಅನುಕೂಲ ಕರ ವಾಗಿವೆ ಎಂದರು.

ಊಟೋಪಚಾರದ ವ್ಯವಸ್ಥೆ: ಸಾಮೂಹಿಕ ವಿವಾಹಕ್ಕೆ ಆಗಮಿಸುವ ವಧು-ವರ ಮತ್ತು ಅವರ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ದೇವಾಲಯದ ವತಿಯಿಂದ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌, ಅಪರ ಜಿಲ್ಲಾಧಿಕಾರಿ ವಿಜಯಾ ಈ. ರವಿಕುಮಾರ್‌, ಉಪವಿಭಾಗಾಧಿಕಾರಿ ತೇಜಸ್‌ ಕುಮಾರ್‌, ಮುಜರಾಯಿ ಇಲಾಖೆಯ ಜಿಲ್ಲಾ ಸಹಾಯಕ ಆಯುಕ್ತರಾದ ಜಿ. ಜೆ.ಹೇಮಾವತಿ, ಘಾಟಿ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗರಾಜು, ಪ್ರಧಾನ ಆರ್ಚಕ ಸುಬ್ಬುಕೃಷ್ಣಶಾಸ್ತ್ರಿ ,
ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಎಚ್‌.ಅಪ್ಪಯ್ಯಣ್ಣ, ರಾಜ್ಯ ತೆಂಗಿನ ಸಹಕಾರ ಮಹಾಮಂಡಳದ ಅಧ್ಯಕ್ಷ ವೆಂಕಟೇಶ್‌ ಬಾಬು, ಕೆಪಿಸಿಸಿ ಸದಸ್ಯ ಎಸ್‌.ಆರ್‌. ಮುನಿರಾಜು, ತೂಬಗೆರೆ ಹೋಬಳಿ ಜೆಡಿಎಸ್‌ ಅಧ್ಯಕ್ಷ ಜಗನ್ನಾಥಾಚಾರಿ ಹಾಗೂ ಇತರರು ಇದ್ದರು.

ನವ ಜೀವನಕ್ಕೆ ಕಾಲಿಟ್ಟ 16 ಜೋಡಿಗಳು
ಬುಧವಾರ ಬೆಳಗ್ಗೆ 10.50ರಿಂದ 11.40ರ ಒಳಗೆ ಕಟಕ ಲಗ್ನದಲ್ಲಿ ನಡೆದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಈ ಮೊದಲೇ ನೋಂದಣಿಯಾಗಿದ್ದ 16 ಜೋಡಿಗಳು, ಹಿಂದೂ ಸಂಪ್ರದಾಯದಂತೆ, ಪೌರೋಹಿತರ ವೇದ ಮಂತ್ರ ಘೋಷದೊಂದಿಗೆ ವಿವಾಹವಾಗಿ ಹೊಸ ಬಾಳಿಗೆ ಕಾಲಿರಿಸಿದರು. ವಿವಾಹದಲ್ಲಿ ಪಾಲ್ಗೊಂಡಿದ್ದ ವರನಿಗೆ 5 ಸಾವಿರ ರೂ. ಹಾಗೂ ವಧುವಿಗೆ 10 ಸಾವಿರ ರೂ. ಮತ್ತು ಚಿನ್ನದ ತಾಳಿ ಹಾಗೂ ಎರಡು ಚಿನ್ನದ ಗುಂಡು(ಒಟ್ಟು 40 ಸಾವಿರ ರೂ ಮೌಲ್ಯ) ಒಟ್ಟು 55 ಸಾವಿರ ರೂ.ಗಳನ್ನು ನೀಡಲಾಯಿತು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.