ಗುಣಮಟ್ಟದ ಹಾಲಿನಿಂದ ಡೇರಿ ಪ್ರಗತಿ


Team Udayavani, Sep 9, 2019, 3:00 AM IST

gunamatta

ದೇವನಹಳ್ಳಿ: ಹಾಲು ಉತ್ಪಾದಕರು ಗುಣಮಟ್ಟದ ಹಾಲು ಸರಬರಾಜು ಮಾಡಿದರೆ ಸಹಕಾರ ಸಂಘಗಳು ಹೆಚ್ಚು ಅಭಿವೃದ್ಧಿ ಹೊಂದುತ್ತವೆ ಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ಹೇಳಿದರು. ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ನಾಗೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಪ್ರತಿ ಗ್ರಾಮದಲ್ಲೂ ರೈತರು ಆರ್ಥಿಕವಾಗಿ ಸದೃಢಗೊಳ್ಳಲು ಸಾಧ್ಯವಾಗಿದೆ. ಗುಣಮಟ್ಟದ ಹಾಲನ್ನು ಸರಬರಾಜು ಮಾಡುವ ಮೂಲಕ ಸಂಘವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ರೈತರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಸಾರ್ವಜನಿಕ ಆರೋಗ್ಯಕ್ಕಾಗಿ ಈಗಾಗಲೇ ಬೆಂಗಳೂರು ಹಾಲು ಒಕ್ಕೂಟ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಸರ್ಕಾರದಿಂದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ರಾಸುಗಳಿಗೆ ಹೆಚ್ಚು ಪೌಷ್ಠಿಕ ಆಹಾರ ನೀಡಿದರೆ ಹಸು ಆರೋಗ್ಯವಾಗಿರುತ್ತದೆ ಹೀಗಾಗಿ ರಾಸುಗಳ ಆರೋಗ್ಯದ ಬಗ್ಗೆ ರೈತರು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ತಾಲೂಕಿನಲ್ಲಿ ಈಗಾಗಲೇ ಪ್ರತಿಯೊಂದು ಗ್ರಾಮಕ್ಕೂ ಕಾಂಕ್ರೀಟ್‌ ರಸ್ತೆಗೆ 50ಲಕ್ಷ ರೂ. ನೀಡಲಾಗಿದೆ. ಪ್ರತಿ ಗ್ರಾಮವೂ ಸರ್ವತೋಮುಖ ಅಭಿವೃದ್ಧಿ ಹೊಂದಬೇಕು. ಜನರ ಸಮಸ್ಯೆಗಳಿಗೆ ಸ್ಪಂಧಿಸುವ ಕೆಲಸ ಮಾಡಲಾಗುತ್ತಿದೆ. ತಾಲೂಕಿನ ಅಭಿವೃದ್ಧಿಯೇ ನನ್ನ ಅಜೆಂಡಾವಾಗಿದೆ. ರೈತರ ಸರ್ವತೋಮುಖ ಅಭಿವೃದ್ಧಿಗೆ ಹೈನುಗಾರಿಕೆ ರೈತರ ಸಂಜೀವಿನಿಯಾಗಿದೆ ಎಂದು ತಿಳಿಸಿದರು.

ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಮಂಜುನಾಥ್‌ ಮಾತನಾಡಿ, ಹಾಲು ಉತ್ಪಾದಕರ ಸಹಕಾರ ಸಂಘಗಳು ಕ್ರೀಯಾಶೀಲರಾಗಿ ಕೆಲಸಮಾಡುತ್ತಿವೆ. ಗುಣಮಟ್ಟದ ಹಾಲನ್ನು ರೈತರು ಪೂರೈಸುತ್ತಿದ್ದು, ಇದೇ ರೀತಿ ಮುಂದೆಯೂ ಸಹ ಗುಣಮಟ್ಟದ ಹಾಲನ್ನು ಪೂರೈಸಬೇಕು. ಬೆಂಗಳೂರು ಹಾಲು ಒಕ್ಕೂಟದಿಂದ ರೈತರಿಗೆ ಎಲ್ಲಾ ಸೌಲಭ್ಯಗಳನ್ನು ನೀಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಾಗೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮುನಿಶಾಮೇಗೌಡ ಅಧ್ಯಕ್ಷತೆ ವಹಿಸಿದ್ದು, ಪುರಸಭಾ ಸದಸ್ಯ ಜಿ.ಎ.ರವೀಂದ್ರ, ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮಂಜುನಾಥ್‌, ಸದಸ್ಯ ಮಹೇಶ್‌, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಮುನಿರಾಜು, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ರಾಜಣ್ಣ, ಪಿಕಾರ್ಡ್‌ ಬ್ಯಾಂಕ್‌ ಮಾಜಿ ಅಧ್ಯಕ್ಷ ಆರ್‌.ಮುನೇಗೌಡ, ಸಂಪಗಪ್ಪ, ಕೃಷಿಕ ಸಮಾಜದ ನಿರ್ದೆಶಕ ಕೃಷ್ಣಮೂರ್ತಿ, ಗ್ರಾಪಂ ಮಾಜಿ ಅಧ್ಯಕ್ಷ ಜಯರಾಮೇಗೌಡ, ಸಿ.ಎಸ್‌.ರಾಜಣ್ಣ, ದೇವನಹಳ್ಳಿ ಶಿಬಿರ ಕಚೇರಿ ಉಪ ವ್ಯವಸ್ಥಾಪಕ ಡಾ.ಗಂಗಯ್ಯ, ಹಾಲು ಉತ್ಪಾದಕರ ಸಹಕರ ಸಂಘದ ಕಾರ್ಯದರ್ಶಿ ಚಂದ್ರಪ್ಪ ಹಾಗೂ ನಿರ್ದೇಶಕರಿದ್ದರು.

ಬೆಂಗಳೂರು ಹಾಲು ಒಕ್ಕೂಟದ 12 ತಾಲೂಕುಗಳ ವ್ಯಾಪ್ತಿಯಲ್ಲಿ ಮೊದಲ ಬಾರಿಗೆ ಕಂಪ್ಯೂಟರೀಕರಣದಿಂದ ರೈತರ ಖಾತೆಗೆ ನೇರವಾಗಿ ಹಣ ಸಂದಾಯವಾದ ಕೀರ್ತಿ ದೇವನಹಳ್ಳಿ ತಾಲೂಕಿಗೆ ಸಲ್ಲುತ್ತದೆ.
-ಬಿ.ಶ್ರೀನಿವಾಸ್‌, ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ 

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.