ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ


Team Udayavani, Jun 26, 2022, 3:36 PM IST

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ದೇವನಹಳ್ಳಿ: ಭೂಮಿ, ವಸತಿ, ವಿದ್ಯಾರ್ಥಿ ವೇತನ ಹಾಸ್ಟೆಲ್‌ಗ‌ಳ ಮೂಲಸೌಲಭ್ಯ, ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಳಿಗೆ ಆಗ್ರಹಿಸಿ, ಜಿಲ್ಲಾ ಮತ್ತು ತಾಲೂಕು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ)ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಈ ವೇಳೆ ದಲಿತ ಸಂಘರ್ಷ ಸಮಿತಿ ಸಂಘ ಟನಾ ಸಂಚಾಲಕ ಕಾರಹಳ್ಳಿ ಶ್ರೀನಿವಾಸ್‌ ಮಾತನಾಡಿ, ಶಿಕ್ಷಣತಜ್ಞರಲ್ಲದ ರೋಹಿತ್‌ ಚಕ್ರ ತೀರ್ಥ ಅಧ್ಯಕ್ಷತೆಯಲ್ಲಿ ಪರಿಷ್ಕರಣೆಗೊಂಡಿರುವ ಪಠ್ಯಪುಸ್ತಕವನ್ನು ರದ್ದುಗೊಳಿಸಬೇಕು. ಬಡವರ, ದಲಿತರ ಬವಣೆ, ಸಂಕಷ್ಟಗಳು ದಿನದಿನಕ್ಕೂ ಬಿಗಡಾಯಿಸುತ್ತಿವೆ. ನಾಗರಿಕ ಸರ್ಕಾರಗಳು ಎಂದು ಹೇಳಿಕೊಳ್ಳುವ ಜಾತಿಯನ್ನು ಉಸಿರಾಡುವ ಈ ಪ್ರಭುತ್ವ ದಲಿತರ ಅಭಿವೃದ್ಧಿಗೆ ಕೋಟಿಗಟ್ಟಲೆ ಖರ್ಚು ಮಾಡುತ್ತಿದ್ದವೆಂದು ವಂಚನೆಯ ಮಾತು ಆಡುತ್ತಿವೆ. ಅಲ್ಪಸ್ವಲ್ಪ ಕೊಟ್ಟಿರುವುದನ್ನೇ ದೊಡ್ಡಮಟ್ಟದಲ್ಲಿ ಪುಕ್ಕಟೆ ಪ್ರಚಾರವನ್ನು ಲಕ್ಷಾಂತರ ರೂ. ಜಾಹೀರಾತುಗಳ ಮೂಲಕ ನೀಡುತ್ತಿದೆ. ಆದರೆ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಧ್ಯಯನಗಳು ನೀಡುವ ವಾಸ್ತವ ಚಿತ್ರಣವೇ ಬೇರೆಯಾಗಿದೆ ಎಂದರು.

ಕಾನೂನು ಕ್ರಮ ಜರುಗಿಸಿ: ವಿಭಾಗೀಯ ಸಂಘಟನಾ ಸಂಚಾಲಕ ಕೆ.ಆರ್‌.ಮುನಿಯಪ್ಪ ಮಾತನಾಡಿ, ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ ಆಗಬೇಕು. ಈಗಾಗಲೇ ನ್ಯಾಯಾಲಯಗಳಲ್ಲಿ ಪರಿಶಿಷ್ಟರ ವಿರುದ್ಧ ನೀಡಿರುವ ತೀರ್ಪು ರದ್ದಾಗಬೇಕು. ಪಿಟಿಸಿಎಲ್‌ ಕಾಯ್ದೆಯಂತೆ ಮರು ಮಂಜೂರಾತಿದಾರರಿಗೆ ಮಂಜೂರು ಮಾಡ ಬೇಕು. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ರಕ್ಷಣಾತ್ಮಕ ಅಧಿಕಾರ ನೀಡಬೇಕು. ಬೇಡ ಜಂಗಮ ಹಾಗೂ ಇತರೆಯವರು ಪಡೆದಿರುವ ಸಾವಿರಾರು ಸುಳ್ಳು ಜಾತಿ ಪತ್ರ ರದ್ದುಪಡಿಸಬೇಕು, ಪಡೆದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಮೀಸಲಾತಿ ಪ್ರಮಾಣ ಹೆಚ್ಚಿಸಿ: ಪ.ಜಾತಿ, ವರ್ಗ ಮತ್ತು ಹಿಂದುಳಿದ ಜಾತಿಗಳಿಗೆ ಸೇರಿದ ವಿದ್ಯಾರ್ಥಿಗಳ ತಡೆಹಿಡಿದಿರುವ ವಿದ್ಯಾರ್ಥಿವೇತನ ಕೂಡಲೇ ಮಂಜೂರು ಆಗಬೇಕು. ಹಾಸ್ಟೆಲ್‌ಗ‌ಳಿಗೆ ಮೂಲಭೂತ ಸೌಕರ್ಯ ಒದಗಿಸಬೇಕು. ನ್ಯಾಯಮೂರ್ತಿ ನಾಗಮೋಹನದಾಸ್‌ ನೀಡಿರುವ ವರದಿಯಂತೆ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಳವಾಗಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ಅವರಿಗೆ ಮನವಿ ನೀಡಿದರು. ಜಿಲ್ಲಾ ಪ್ರಧಾನ ಸಂಚಾಲಕ ಬಿಸ್ನಳ್ಳಿ ಮೂರ್ತಿ, ಜಿಲ್ಲಾ ಸಂಘಟನಾ ಸಂಚಾಲಕ ಕೊರಳೂರು ಶ್ರೀನಿವಾಸ್‌, ಜೋಗಿಹಳ್ಳಿ ನಾರಾಯಣಸ್ವಾಮಿ, ಆವತಿ ತಿಮ್ಮರಾಯಪ್ಪ, ರಾಜುಸಣ್ಣಕ್ಕಿ, ಜಿಲ್ಲಾ ಸಮಿತಿ ಸದಸ್ಯ ನಾರಾಯಣಸ್ವಾಮಿ, ನಾಗರಾಜ್‌, ಡಿ.ಕೆ.ವೇಲು, ಮುತ್ಸಂದ್ರ ಶಂಕರ್‌, ಸಿ.ಮುನಿ ರಾಜು, ವಿ.ರಮೇಶ್‌, ಸಿ.ವಿ.ಮೋಹನ್‌, ಖಜಾಂಚಿ ಸಿ.ಎಂ.ಮುರಳೀಧರ, ಸದಸ್ಯ ವಿ.ವೆಂಕಟೇಶ್‌ ಇದ್ದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.