ಗಣಿ ಧೂಳಿನಿಂದ ರೇಷ್ಮೆ ಬೆಳೆಗೆ ಹಾನಿ


Team Udayavani, Dec 27, 2022, 1:31 PM IST

tdy-10

ದೇವನಹಳ್ಳಿ: ತಾಲೂಕಿನ ತೈಲಗೆರೆ, ಮೀಸಗನಹಳ್ಳಿ, ಮುದ್ದನಾಯಕನಹಳ್ಳಿ, ಚಿಕ್ಕಗೊಲ್ಲಹಳ್ಳಿ ಮತ್ತಿತರ ಕಡೆಗಳಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ರೈತರು ಬೆಳೆದ ರೇಷ್ಮೆ ಬೆಳೆಗಳಿಗೆ ಗಣಿ ಧೂಳು ಹೋಗುತ್ತಿದ್ದು, ರೇಷ್ಮೆ ಬೆಳೆಗಾರರು ಸಂಕಷ್ಟ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈಗಾಗಲೇ ರೇಷ್ಮೆ ಇಲಾಖೆಯಿಂದ ರೈತರ ರೇಷ್ಮೆ ಬೆಳೆಗಳ ಮೇಲೆ ಧೂಳು ಕೂರುತ್ತಿರುವದರ ಬಗ್ಗೆ ಅಧಿಕಾರಿಗಳು ವರದಿಯನ್ನು ಸಹ ನೀಡಿದ್ದಾರೆ. ರೇಷ್ಮೆ ಧೂಳು ಆಗುತ್ತಿರುವುದರ ಬಗ್ಗೆ ಬೆಳಗಾವಿ ವಿಧಾನ ಮಂಡಲದ ವಿಧಾನ ಪರಿಷತ್‌ ಕಲಾಪದಲ್ಲಿ ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ ರೇಷ್ಮೆ ಸಚಿವರಿಗೆ ದೇವನಹಳ್ಳಿ ತಾಲೂಕಿನ ವಿವಿಧ ಕಡೆ ಗಣಿ ಧೂಳಿನಿಂದ ರೇಷ್ಮೆ ಬೆಳೆಗೆ ತೊಂದರೆಯಾಗುತ್ತಿರುವುದರ ಬಗ್ಗೆ ಚಕಾರವನ್ನು ಎತ್ತಿದ್ದಾರೆ. ರೇಷ್ಮೆ ಸಚಿವರಿಂದ ಇದಕ್ಕೆ ಉತ್ತರ ಸಹ ದೊರೆತಿದೆ.

ಗ್ರಾನೈಟ್‌ ಪ್ಯಾಕ್ಟರಿ ರಕ್ಷಣೆ: ಕುಂದಾಣ ಹೋಬಳಿಯಲ್ಲಿ ಸಾಕಷ್ಟು ಗಣಿಗಾರಿಕೆಗಳು ನಿಯಮ ಬಾಹಿರವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದು, ಕೃಷಿ ಚಟುವಟಿಕೆಗಳ ಮೇಲೆ ನಿರಂತರವಾಗಿ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ಕುರಿತು ವಿಧಾನ ಪರಿಷತ್‌ ನಲ್ಲಿ ರವಿ ಪ್ರಶ್ನೆ ಮಾಡಿದ್ದು, ತಾಲೂಕಿನ ಕೃಷಿಕರು ಗಣಿ ನಿಷೇಧಕ್ಕೆ ಆಗ್ರಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ವರದಿಗಳಲ್ಲಿ ಗಣಿ ನಿಯಮಗಳ ಬಗ್ಗೆ ತಕರಾರು ಬರದಂತೆ ವ್ಯವಸ್ಥೆ ಮಾಡುವಷ್ಟು ಚಾಣಾಕ್ಷತನ ಅವರಿಗಿದೆ. ಅದೆಷ್ಟೇ ಸುಳ್ಳು ಮಾಹಿತಿ ನೀಡಿದರೂ, ಇಲ್ಲಿರುವ ಪ್ರಾಕೃತಿಕ ಜೀವ ಸಂಕುಲ ಮಾತ್ರ ತನ್ನ ಅವಸಾನದ ಅಂಚಿನ ಆರ್ತನಾದವನ್ನು ಮಾತ್ರ ನಿತ್ಯ ಹೇಳುತ್ತಿದೆ. ಪರಿಷತ್‌ ಸದಸ್ಯರು ಸೇರಿದಂತೆ ಸಾಕಷ್ಟು ವರದಿಯಲ್ಲಿ ಗ್ರಾನೈಟ್‌ ಪ್ಯಾಕ್ಟರಿ ಒಟ್ಟು ಸಂಖ್ಯೆ 160 ಎಂದು ತಿಳಿಸಿದ್ದರೂ, ಸರ್ಕಾರ ನೀಡಿರುವ ಮಾಹಿತಿಯಲ್ಲಿ ಕೇವಲ 93 ಗಣಿ, ಕ್ರಷರ್‌ಗಳು ಇವೆ ಎಂದು ಮಾಹಿತಿ ನೀಡಿ ಗ್ರಾನೈಟ್‌ ಪ್ಯಾಕ್ಟರಿಗಳನ್ನು ರಕ್ಷಿಸಲಾಗಿದೆ. ಈ ಕಾನೂನು ಬಾಹಿರ ಪ್ಯಾಕ್ಟರಿಗಳ ಪೋಷಕರು ಯಾರು ಎಂಬುದು ಜಿಲ್ಲಾಡಳಿತ ಉತ್ತರಿಸಬೇಕಿದೆ.

ಮಾಹಿತಿ ಸೋರಿಕೆ: ಸರ್ಕಾರಿ ಸಂಸ್ಥೆಗಳ ತಜ್ಞರ ತಂಡವೂ ಸಂಶೋಧನೆಗೆ ಆಗಮಿಸುವ ವೇಳೆಗೆ ಮಾಹಿತಿ ಸೋರಿಕೆಯಾಗಿ ಕೆಲ ದಿನ ಗಣಿಗಾರಿಕೆಗೆ ವಿರಾಮ ದೊರೆತ ಸಾಕಷ್ಟು ಪ್ರಸಂಗಗಳು ಇವೆ. ಅರ್ಕಾವತಿ ಹಾಗೂ ದಕ್ಷಿಣ ಪಿನಾಕಿನಿ ನದಿ ಪತ್ರಗಳಲ್ಲಿ ಇರುವ ಅಪಾರ ಖನಿಜ ಸಂಪತ್ತನ್ನು ಕಟ್ಟಡ, ಕಲ್ಲುಗಣಿ ಮಾಡುತ್ತೇವೆಂದು ಪರವಾನಗಿ ಪಡೆದ ಸಾಕಷ್ಟು ಕಂಪನಿ ಹೊರಕ್ಕೆ ಸಾಗಿಸುತ್ತಿರುವುದು ಎಂ.ಸ್ಯಾಂಡ್‌ ಮತ್ತು ಅಪರೂಪದ ಅಲಂಕಾರಿಕ ಶಿಲೆ(ಗ್ರಾನೈಟ್‌) ಎಂಬುದು ಸ್ಥಳೀಯರ ಆರೋಪವಾಗಿದೆ.

ಖನಿಜ ಸಂಪತ್ತು ಕ್ಷಿಣ: ರೈತರಿಗೆ ಕೃಷಿಯ ನಷ್ಟಕ್ಕೆ ಕಾರಣ ಅವೈಜ್ಞಾನಿಕ ಬೇಸಾಯ ಪದ್ಧತಿ ಎಂದು ಸಬೂಬು ಹೇಳುವ ಅಧಿಕಾರಿಗಳು, ವೈಜ್ಞಾನಿಕ ವರದಿ ನೋಡಿ ಪರಿಹಾರದ ನಾಟಕವಾಡುತ್ತಿದ್ದಾರೆ. ಇಲ್ಲಿನ ಭೂಮಿಯಿಂದ ವಿದೇಶಕ್ಕೆ ಗುಣಮಟ್ಟದ ತರಕಾರಿ, ರೇಷ್ಮೆ, ಹಣ್ಣು ರಫ್ತು ಮಾಡಬೇಕಿದ್ದ ಸರ್ಕಾರ, ಸಾಗಿಸುತ್ತಿರುವುದು ಅಲಂಕಾರಿಕ ಶಿಲೆಯನ್ನು ಗಣಿಯಿಂದ ಹೊರ ತೆಗೆದರೇ ಖನಿಜ ಸಂಪತ್ತು ಕ್ಷಿಣಿಸುತ್ತದೆ. ಆದರೆ, ಕೃಷಿಯಿಂದ ಮಾತ್ರವೇ ಆಹಾರ ಭದ್ರತೆ ದೊರೆಯುತ್ತಿದೆ ಎಂಬುದು ಹೋರಾಟಗಾರರ ಅಭಿಪ್ರಾಯ.

ಸುಳ್ಳು ಲೆಕ್ಕ ನೀಡಿ ದಾರಿ ತಪ್ಪಿಸುವ ಕೆಲಸ: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಪರಿಷತ್‌ ಸದಸ್ಯ ಎಸ್‌.ರವಿ ಈ ಕುರಿತು ಮಾಹಿತಿಯನ್ನು ಕೇಳಿದ್ದು, ವಾರ್ಷಿಕವಾಗಿ 12.63 ಕೋಟಿ ರಾಯಧನ ಸರ್ಕಾರಕ್ಕೆ ಕಳೆದ ಪ್ರಸಕ್ತದಲ್ಲಿ ದೊರೆತಿದೆ ಎಂದು ತಿಳಿಸಲಾಗಿದೆ. ಆದರೆ, ಇದರಲ್ಲಿ ಶೇ.30ರಷ್ಟು ಸ್ಥಳೀಯ ಖನಿಜ ಸಂಪನ್ಮೂಲ ನಿಧಿ(ಡಿಎಂಎಫ್)ಗೆ ನೀಡಬೇಕು. ಆದರೆ, ನೀಡಿರುವುದು 23.98 ಲಕ್ಷ ರೂ. ಮಾತ್ರ. ಸರ್ಕಾರಕ್ಕೆ ಸುಳ್ಳು ಲೆಕ್ಕ ನೀಡಿ ದಾರಿ ತಪ್ಪಿಸುವ ಕೆಲಸವಾಗುತ್ತಿದೆ. ಇಷ್ಟು ರಾಯಧನ ಪಡೆದು ಪುನಃ ರೈತರಿಗೆ ಪರಿಹಾರ ಧನ ನೀಡುವ ತಂತ್ರಗಾರಿಕೆಗೆ ಸರ್ಕಾರ ಬೆಂಬಲ ನೀಡುತ್ತಿರುವುದ ಬಗ್ಗೆ ಸಾಕಷ್ಟು ಅನುಮಾನಕ್ಕೆ ಕಾರಣವಾಗುತ್ತದೆ.

ಪಾಲನೆಯಾಗದ ನಿಯಮಗಳು: ಕೇಂದ್ರ ಸರ್ಕಾರದಿಂದ ನೀಡಲಾಗಿರುವ ನಿಯಮಗಳ ಪಾಲನೆಗೆ ಕಂಪನಿಗಳು ಹಿಂದೆಟ್ಟು ಹಾಕುತ್ತಿದ್ದು, ಈಗಾಗಲೇ ಸ್ಥಳೀಯ ನ್ಯಾಯಾಲಗಳು, ಲೋಕ ಅದಾಲತ್‌ನಲ್ಲಿ ನೀಡಲಾಗಿರುವ ನಿರ್ದೇಶನಗಳ ಕುರಿತು ಬಂಡೆ ಮಾರಾಟಗಾರರು ಗಮನ ಹರಿಸುತ್ತಿಲ್ಲ ಎಂಬುದು ನ್ಯಾಯವಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಗಣಿಯಲ್ಲಿ ನೀರು ಬಳಸಿ ಧೂಳು ಹೊರ ಹೋಗದಂತಹ ತಂತ್ರಜ್ಞಾನ ಪಾಲನೆ ಮಾಡಬೇಕು. ರಾತ್ರಿ ವೇಳೆಯಲ್ಲಿ ನ್ಪೋಟಕಗಳನ್ನು ಬಳಸಲು ಅವಕಾಶವಿಲ್ಲದಿದ್ದರೂ, ಇದಕ್ಕೆಲ್ಲಾ ಕಿಮ್ಮತ್ತು ನೀಡಲು ಯಾರು ಸಿದ್ಧರಿಲ್ಲ ಎಂಬುದು ಸ್ಪಷ್ಟವಾಗಿದೆ. ತಡೆಗೋಡೆ, ಬಫ‌ರ್‌ ಜೋನ್‌ಗಳ ಬಗ್ಗೆ ತಲೆ ಕೆಡಿಸಿಕೊಳ್ಳದ ಉದ್ಯಮಿಗಳು ನಿರಂತರವಾಗಿ ಭೂ ತಾಯಿಯ ಗರ್ಭ ಬಗೆಯುವಲ್ಲಿ ನಿರತರಾಗಿದ್ದಾರೆ.

ಸರ್ಕಾರಿ ಸಂಸ್ಥೆಯಲ್ಲಿ ವರದಿಯಲ್ಲಿ ದ್ವಂದ್ವ : ರೈತರು ಗಣಿ ಧೂಳಿನಿಂದ ಉಂಟಾಗುತ್ತಿರುವ ಸಮಸ್ಯೆಯ ಕುರಿತು ವೈಜ್ಞಾನಿಕ ವರದಿಯನ್ನು ಸಲ್ಲಿಸಿರುವ ರಾಜ್ಯ ರೇಷ್ಮೆ ಸಂಶೋಧನೆ ಅಭಿವೃದ್ಧಿ ಸಂಸ್ಥೆಯ ಮಾರ್ಚ್‌ 2022ರ ವರದಿಯಲ್ಲಿ ಧೂಳಿನಿಂದ ಹಿಪ್ಪುನೇರಳೆ ಬೆಳೆ ಹಾಳಾಗುತ್ತಿದೆ. ಇದರಿಂದ ರೇಷ್ಮೆ ಇಳುವರಿಯಲ್ಲಿಯೂ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ತಿಳಿಸಿದ್ದು, ಬಾಧಿತ 37 ರೈತರಿಗೆ 74.52 ಲಕ್ಷ ರೂ. ಪರಿಹಾರ ನೀಡಲು ಅಂದಾಜು ಮಾಡಲಾಗಿದೆ. ಆದರೆ, ಮಾಲಿನ್ಯ ನಿಯಂತ್ರಣ ಮಂಡಳಿಯವರು ಮಾರ್ಚ್‌ 2022ರ ನೀಡುವ ವರದಿಯಲ್ಲಿ ಕಲ್ಲು ಗಣಿಗಾರಿಕೆಯಿಂದ ಉತ್ಪತ್ತಿಯಾಗುವ ಧೂಳಿನ ಪ್ರಮಾಣ ಸಮ್ಮತಿ ಪತ್ರದಲ್ಲಿ ನಿಗದಿಪಡಿಸಿರುವ ಪ್ರಮಾಣದ ಪರಿಮಿತಿಯಲ್ಲಿದೆ ಎನ್ನುತ್ತದೆ. ವರದಿಯ ದ್ವಂದ್ವಯುತ ಅಂಶಗಳು ಯಾರ ಶಿಫಾರಸು ಪ್ರಭಾವದಿಂದ ಬದಲಾಗಿದೆ ಎಂಬುದನ್ನು ಸಿದ್ಧಪಡಿಸಿದ ಕೈಗಳೇ ತಿಳಿಸಬೇಕಿದೆ ಎಂದು ರೈತರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.