ನೀಲಗಿರಿ ತೆರವಿಗೆ ಡೀಸಿ ಚಾಲನೆ

ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಸೂಕ್ತ ಕ್ರಮ | ಬುಡ ಸಮೇತ ಕಟಾವಿಗೆ ಜನರ ಸ್ಪಂದನೆ

Team Udayavani, Jul 28, 2019, 12:59 PM IST

br-tdy-1

ತಾಲೂಕಿನ ಕೊಯಿರಾ ಪಂಚಾಯಿತಿ ವ್ಯಾಪ್ತಿಯ ರಬ್ಬನಹಳ್ಳಿ ಗ್ರಾಮದ ಸಮೀಪದಲ್ಲಿ ಬೆಳೆದಿರುವ ನೀಲಗಿರಿ ಮರಗಳನ್ನು ಜೆಸಿಬಿ ಬಳಸಿಕೊಂಡು ಬುಡ ಸಮೇತ ಕಟಾವು ಕಾರ್ಯಕ್ಕೆ ಸಾಂಕೇತಿಕವಾಗಿ ಜಿಲ್ಲಾಕಾರಿ ಕರೀಗೌಡ ಚಾಲನೆ ನೀಡಿದರು.

ದೇವನಹಳ್ಳಿ: ನೀಲಗಿರಿ ಮರಗಳು ಅಂತರ್ಜಲಕ್ಕೆ ಕಂಟಕ. ಅಂತರ್ಜಲ ಹೆಚ್ಚಳಕ್ಕೆ ನೀಲಗಿರಿ ಮರಗಳನ್ನು ಬುಡ ಸಮೇತ ತೆರವುಗೊಳಿಸಬೇಕು. ರೈತರು ಸ್ವ ಇಚ್ಛೆಯಿಂದ ತಮ್ಮ ಜಮೀನುಗಳಲ್ಲಿ ಬೆಳೆದಿರುವ ನೀಲಗಿರಿ ಮರಗಳನ್ನು ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎಸ್‌. ಕರೀಗೌಡ ತಿಳಿಸಿದರು.

ತಾಲೂಕಿನ ಕುಂದಾಣ ಹೋಬಳಿ ಕೊಯಿರಾ ಪಂಚಾಯಿತಿ ವ್ಯಾಪ್ತಿಯ ರಬ್ಬನಹಳ್ಳಿ ಸಮೀಪ ಬೆಳೆದಿರುವ ನೀಲಗಿರಿ ಮರಗಳನ್ನು ಜೆಸಿಬಿ ಯಂತ್ರದಿಂದ ಬುಡ ಸಮೇತ ಕಟಾವಿಗೆ ಸಾಂಕೇತಿಕ ಚಾಲನೆ ನೀಡಿ ಮಾತನಾಡಿದರು.

ಪರಿಸ್ಥಿತಿ ಅರ್ಥೈಸಿಕೊಂಡು ನೀಲಗಿರಿ ತೆರವು ಮಾಡಿ: ಪಂಚಾಯಿತಿ ಸುತ್ತಲು ಸುಮಾರು 25 ಎಕರೆಯಷ್ಟು ಪ್ರದೇಶದಲ್ಲಿ ನೀಲಗಿರಿ ಮರಗಳನ್ನು ತೆರವುಗೊಳಿಸುವ ಗುರಿ ಹೊಂದ ಲಾಗಿದೆ. ಜಿಲ್ಲೆಯಲ್ಲಿ ಸುಮಾರು 1400 ರಿಂದ 1800ಕ್ಕೂ ಹೆಚ್ಚು ಕೊಳವೆ ಬಾವಿ ಕೊರೆಸಿದರೂ ನೀರು ಸಿಗದ ಪರಿಸ್ಥಿತಿ ತಲುಪಿದ್ದೇವೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಹನಿ ನೀರಿಗೂ ಹೆಚ್ಚು ಪರದಾಡುವ ಪರಿಸ್ಥಿತಿಗೆ ತಲುಪಿ ಬಿಡುತ್ತೇವೆ. ಇದನ್ನು ರೈತರು ಅರ್ಥ ಮಾಡಿ ಕೊಂಡು ವೈಯಕ್ತಿಕವಾಗಿ ಮುಂದೇ ಬಂದು ಮರಗಳನ್ನು ತೆರವುಗೊಳಿಸುತ್ತಿರುವುದು ಸಂತ ಸದ ವಿಷಯವಾಗಿದೆ ಎಂದು ಹೇಳಿದರು.

ಮಾವು, ಬೇವಿನ ಗಿಡ ಬೆಳೆಸಿ: ಪ್ರಸ್ತುತ ಜಿಲ್ಲೆಯಲ್ಲಿ ಎಷ್ಟು ಎಕರೆ ನೀಲಗಿರಿ ಮರಗಳಿವೆ ಎಂಬುದುರ ಅಂಕಿ-ಅಂಶ ಕಲೆಹಾಕಲಾಗು ತ್ತಿದೆ. ಖಾಸಗಿ ಜಮೀನುಗಳಲ್ಲಿ ಬೆಳೆದಿರುವ ಮರಗಳನ್ನು ಕಟಾವು ಮಾಡಿಸಿದ ಬಳಿಕ ಸರ್ಕಾರಿ ಜಾಗಗಳಲ್ಲಿ ಬೆಳೆದ ಮರಗಳನ್ನು ಕಟಾವುಗೊಳಿಸಲಾಗುವುದು. ಈಗಾಗಲೇ ಆಲೂರು ದುದ್ದನಹಳ್ಳಿ ಗ್ರಾಮದಲ್ಲಿ ಗ್ರಾಮ ಲೆಕ್ಕಿಗರ ಸಹಕಾರದಿಂದ 10 ಎಕರೆ ನೀಲಗಿರಿ ಮರಗಳ ಕಟಾವು ಆಗಿದೆ. ಇದೇ ಗ್ರಾಮದ ರೈತ ಮುನೇಗೌಡರ 2 ಎಕರೆ ಜಮೀನಿನಲ್ಲಿ ಬೆಳೆದಿರುವ ನೀಲಗಿರಿ ಮರಗಳನ್ನು ತೆರವು ಗೊಳಿಸುತ್ತಿರುವುದು ಶ್ಲಾಘನೀಯ ವಾಗಿದೆ. ತೆರವುಗೊಂಡ ಜಾಗದಲ್ಲಿ ಮಾವು, ಹೆಬ್ಬೇವು, ಬೇವು ಈ ತರಹದ ಗಿಡಗಳನ್ನು ಹಾಕಿದರೆ ಹೆಚ್ಚು ಅನುಕೂಲವಾಗುತ್ತದೆ. ರೈತರು ಸಹ ಇದರಿಂದ ಹೆಚ್ಚು ಪ್ರಯೋಜನ ಪಡೆಯ ಬಹುದಾಗಿದೆ. ದಿನೇ ದಿನೆ ಅಂತರ್ಜಲ ಮಟ್ಟ ಹೆಚ್ಚಿಸುವ ಕಾರ್ಯಕ್ಕೆ ಜನಸಾಮಾನ್ಯರು ಮುಂದಾಗಬೇಕು. ಮುಂದಿನ ಪೀಳಿಗೆಯ ತಲಮಾರುಗಳಿಗೆ ಉಳಿಸುವ ಕಾರ್ಯವನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಕೈಜೋಡಿಸಿದರೆ ನೀಲಗಿರಿ ಮುಕ್ತ ಜಿಲ್ಲೆ: ಸಮಾಜ ಸೇವಕ ದ್ಯಾವರಹಳ್ಳಿ ಶಾಂತ ಕುಮಾರ್‌ ಮಾತನಾಡಿ, ಈಗಾಗಲೇ 25 ಎಕರೆಗಳಷ್ಟು ಬಡ ರೈತರ ಜಮೀನುಗಳಲ್ಲಿ ಬೆಳೆದ ನೀಲಗಿರಿ ಮರಗಳ ತೆರವು ಕಾರ್ಯ ಮಾಡಲಾಗುತ್ತಿದೆ. ರೈತರಿಂದ ಯಾವುದೇ ಅಪೇಕ್ಷೆ ಮಾಡದೆ ವೈಯಕ್ತಿಕವಾಗಿ ತೆರವು ಮಾಡುತ್ತಿದ್ದೇವೆ. ಯಾರಾದರೂ ತಾವಾಗಿಯೇ ಮುಂದೆ ಬಂದು ನೀಲಗಿರಿ ಮರಗಳ ಕಟಾವು ಮಾಡಿಸಿಕೊಡಿ ಎಂದು ಹೇಳಿದರೆ ಮಾಡಿಕೊಡಲಾಗುತ್ತದೆ. ಕಟಾವಿನ ಬಳಿಕ ರೈತರಿಗೆ ಬಿಟ್ಟುಕೊಡಲಾಗುವುದು ಅಥವಾ ಮಾರಿ ಅದಕ್ಕೆ ಬೆಲೆ ನಿಗಪಡಿಸಿ ರೈತರಿಗೆ ನೀಡಲಾಗುತ್ತದೆ. ಜಿಲ್ಲಾಧಿಕಾರಿಗಳು ಇಂತಹ ಮಹೋನ್ನತ ಕಾರ್ಯ ಮಾಡುತ್ತಿ ದ್ದಾರೆ. ಇವರೊಂದಿಗೆ ಎಲ್ಲರೂ ಕೈಜೋಡಿಸಿ ನಡೆದರೆ ಮಾತ್ರ ಜಿಲ್ಲೆಯಾದ್ಯಂತ ನೀಲಗಿರಿ ಮುಕ್ತವಾಗುತ್ತದೆ ಎಂದು ಹೇಳಿದರು.

ನೀಲಗಿರಿ ತೆರವು ಕಾರ್ಯಕ್ರಮದಲ್ಲಿ ಸಾಂಕೇತಿಕ ಚಾಲನೆ ನೀಡಿದ ಡೀಸಿ ಸಿ.ಎಸ್‌. ಕರೀಗೌಡ ಹಾಗೂ ಗ್ರಾಮಸ್ಥರು ನೀಲಗಿರಿ ತೋಪಿಗೆ ನುಗ್ಗಿ ಮರಗಳನ್ನು ಉರುಳಿಸಿದರು.

ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಿ. ಪ್ರಸನ್ನಕುಮಾರ್‌, ತಾಪಂ ಅಧ್ಯಕ್ಷೆ ಚೈತ್ರಾ ವೀರೇಗೌಡ, ಗ್ರಾಪಂ ಅಧ್ಯಕ್ಷ ಕೆ.ಶ್ರೀನಿವಾಸ್‌, ಮುಖಂಡರಾದ ಕೆಂಪಣ್ಣ, ವೀರೇಗೌಡ, ರಬ್ಬನಹಳ್ಳಿ ಅರ್ಜುನ್‌ ಗೌಡ, ರೈತರು, ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.