ತಣ್ಣನೆ ನೀರಿಗಾಗಿ ಮಡಕೆ ಮೊರೆ

ಬೇಸಿಗೆಯಲ್ಲಿ ಬಡವರ ಫ್ರಿಡ್ಜ್ ಎಂದೇ ಕರೆಯಲ್ಪಡುವ ಮಣ್ಣಿನ ಮಡಿಕೆಗೆ ಭಾರೀ ಬೇಡಿಕೆ

Team Udayavani, Apr 29, 2019, 9:55 AM IST

pot

ದೇವನಹಳ್ಳಿ: ಬಿಸಿಲಿನ ತಾಪಕ್ಕೆ ತತ್ತರಿಸಿರುವ ಜಿಲ್ಲೆಯ ಸಾರ್ವಜನಿಕರು ನೀರಿನ ದಾಹ ನೀಗಿಸಿಕೊಳ್ಳಲು ತಣ್ಣನೆಯ ನೀರಿಗಾಗಿ ಬಡವರ ಫ್ರಿಡ್ಜ್ ಎಂದು ಕರೆಯಲ್ಪಡುವ ಮಣ್ಣಿನ ಮಡಕೆಗಳ ಮೊರೆ ಹೋಗುತ್ತಿದ್ದಾರೆ.

ಶ್ರೀಮಂತರು ಬೇಸಿಗೆ ಬೇಗೆಗೆ ತಣ್ಣನೆಯ ನೀರಿಗೆ ಫ್ರಿಜ್‌ ಬಳಸುತ್ತಾರೆ. ಆದರೆ, ಬಡವರು ದುಬಾರಿ ಫ್ರಿಜ್‌ ಕೊಂಡುಕೊಳ್ಳಲು ಸಾಧ್ಯವಾಗದ ಕಾರಣ ಮಡಕೆಯನ್ನು ಬಳಸುತ್ತಾರೆ. ವಿದ್ಯುತ್‌ ಕಡಿತವಾದರೆ ಫ್ರಿಡ್ಜ್ ನಲ್ಲಿಟ್ಟ ನೀರು ತಣ್ಣಗೆ ಇರುವುದಿಲ್ಲ. ಆದರೆ, ಮಡಕೆ ಸದಾ ತಣ್ಣೀರನ್ನು ನೀಡುತ್ತದೆ ಎಂಬುದು ಜನರ ವಾದ.

ಬೇಸಿಗೆಯಲ್ಲಿ ಮಾತ್ರ ವ್ಯಾಪಾರ: ಪ್ಲಾಸ್ಟಿಕ್‌ ಬಂದ ನಂತರ ಮಡಿಕೆ ತಯಾರುಸುವವರು, ಮಾರುವವರ ಸಂಖ್ಯೆ ವಿರಳವಾಗಿದೆ. ನಾವು ಕಲಿತ ಕಸಬನ್ನು ಬಿಡಬಾರದು ಎಂದು ಈಗಲೂ ಮಡಕೆ ಮಾಡುತ್ತೇವೆ. ಬೇಸಿಗೆ ಯಲ್ಲಿ ಮಾತ್ರ ವ್ಯಾಪಾರವಿರುತ್ತದೆ. ಉಳಿದ ಕಾಲದಲ್ಲಿ ಜನರು ನಮ್ಮತ್ತ ತಿರುಗಿಯೂ ನೋಡುವುದಿಲ್ಲ ಎನ್ನುತ್ತಾರೆ ವ್ಯಾಪಾರಸ್ಥರು.

ಮಡಕೆಯಲ್ಲಿ ನೀರು ಸಂಗ್ರಹ: ಆಧುನಿಕತೆಗೆ ತಕ್ಕಂತೆ ಮಡಕೆಗೆ ಹೊಸ ಲುಕ್‌ ನೀಡಿ, ಫಿಲ್ಟರ್‌ ನಲ್ಲಿ ಅಳವಡಿಸಲಾಗಿದೆ. ಇದರಿಂದ ನೀರನ್ನು ಸಂಗ್ರಹಿಸಿ ಮಣ್ಣಿನ ಮುಚ್ಚಳ ಅಥವಾ ತೇವಾಂಶ ದ ಬಟ್ಟೆಯಿಂದ ಮುಚ್ಚಿ ನಲ್ಲಿಯಿಂದ ತಂಪಾ ದ ನೀರನ್ನು ಹಿಡಿದು ಬಾಯಾರಿಕೆ ನೀಗಿಸಿಕೊ ಳ್ಳಬಹುದು. ಮಡಕೆ ತಯಾರಿಸಲು ಕೆಂಪು ಮತ್ತು ಕಪ್ಪು ಮಣ್ಣನ್ನು ಬಳಸಲಾಗುತ್ತದೆ. ಮಣ್ಣಿನಲ್ಲಿರುವ ಖನಿಜಾಂಶಗಳು ನೀರಿನ ಮೂಲಕ ದೇಹ ಸೇರುವುದರಿಂದ ಆರೋಗ್ಯ ಕ್ಕೆ ಸಹಕಾರಿಯಾಗಿದೆ. ಜನರು ದೇಹವನ್ನು ತಂಪಾಗಿಸಲು ಫ್ರಿಡ್ಜ್ನಲ್ಲಿರುವ ತಂಪು ನೀರು ಹಾಗೂ ಪಾನಿಯಗಳ ಮೊರೆ ಹೋದರೆ, ಬಡವರ ಮನೆಗಳಲ್ಲಿ ಮಣ್ಣಿನ ಮಡಕೆಗಳಲ್ಲಿ ನೀರು, ಅಂಬಲಿ, ಮಜ್ಜಿಗೆ ಯಂತಹ ಪಾನೀಯಗಳನ್ನಿಟ್ಟು ಸೇವಿಸುತ್ತಾರೆ. ವರ್ಷ ವಿಡೀ ಉದ್ಯೋಗವಿಲ್ಲದೇ ಖಾಲಿ ಇರುವ ಕುಂಬಾರನಿಗೆ ಈಗ ಬಾರಿ ಬೇಡಿಕೆ ಹೆಚ್ಚಾಗಿದೆ. ಉತ್ಪಾದನೆಗೆ ಹೆಚ್ಚಿನ ಒತ್ತು ನೀಡುತ್ತಿರು ವುದರಿಂದ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ. ವ್ಯಾಪಾರಸ್ಥರು ಇದನ್ನು ಕಡಿಮೆ ಬೆಲೆೆಯಲ್ಲಿ ಖರೀದಿಸಿ ನಗರ ಪ್ರದೇಶಗಳಲ್ಲಿ ಉತ್ತಮ ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡುಬರುತ್ತಿದೆ.

ಮಡಕೆ ಬೆಲೆ 250ರಿಂದ 300 ರೂ.: ಈ ಹಿಂದೆ 100ರೂ.ಗೆ ಸಿಗುತ್ತಿದ್ದ ಮಡಕೆಗಳು ಈಗ 150 ರಿಂದ 200 ರೂ. ವರೆಗೆ ಮಾರಾಟವಾಗುತ್ತಿವೆ. ಈಗ ನಲ್ಲಿ ಇರುವ ಮಡಕೆಗಳು 250 ರಿಂದ 300 ರೂ. ವರೆಗೆ ಮಾರುಕಟ್ಟೆಯಲ್ಲಿ ದೊರೆಯುತ್ತವೆ. ಜನರು ಬೆಲೆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೇ ಖರೀದಿಯಲ್ಲಿ ಉತ್ಸಾಹ ತೋರುತ್ತಿರುವುದು ಮಡಕೆಯ ಅಗತ್ಯತೆ ಹಾಗೂ ಪ್ರಾಮುಖ್ಯತೆಗೆ ಸಾಕ್ಷಿಯಾಗಿದೆ. ದಿನೇ ದಿನೆ ಬಿಸಿಲಿನ ತಾಪ ಮಾನ 36 ಡಿಗ್ರಿಯಿಂದ 37 ಡಿಗ್ರಿ ದಾಖ ಲಾಗುತ್ತಿದೆ. ಬೆಳಗ್ಗೆ 8 ಗಂಟೆಗೆ ಬಿಸಿಲು ಪ್ರಾರಂಭವಾಗುತ್ತಿದ್ದು, ಮಧ್ಯಹ್ನ 12 ಗಂಟೆಗೆ ನೆತ್ತಿ ಸುಡುವಷ್ಟು ಬಿಸಿಲು ಹೆಚ್ಚಾಗುತ್ತಿದೆ.

ಹಿರಿಯರ ಕಾಲದ ವೃತ್ತಿ: ಜನರು ಪ್ರತಿ ವರ್ಷ ಬೇಸಿಗೆಯಲ್ಲಿ ಹೊಸ ಮಡಕೆ ಖರೀದಿ ಸುತ್ತಾರೆ. ಈ ಹಿಂದೆ ತಿಂಗಳಿಗೆ 4 ರಿಂದ 5 ಮಡಿಕೆಗಳು ಮಾರಾಟವಾಗುತ್ತಿದ್ದವು. ಈಗ ಹೆಚ್ಚಿನ ಆಸಕ್ತಿಯಿಂದ ಖರೀದಿಸುತ್ತಾರೆ. ನಲ್ಲಿ ಇರುವ ಮಡಕೆ 200ರಿಂದ 250ರೂ.ಗೆ ಮಾರಲಾಗುತ್ತದೆ. ನಮ್ಮ ಹಿರಿ ಯರ ಕಾಲದಿಂದಲೂ ಮಡಕೆ ವ್ಯಾಪಾರ ಮಾಡಿಕೊಂಡು ಬಂದಿದ್ದು, ನಾವೂ ಸಹ ಮುಂದುವರೆಸಿ ಕೊಂಡು ಹೋಗುತ್ತಿ ದ್ದೇವೆ ಎಂದು ನಗರದ ಮಡಕೆ ವ್ಯಾಪಾರಸ್ಥೆ ರತ್ನಮ್ಮ ಹೇಳಿದರು.

ಯಾವುದೇ ಖರ್ಚಿಲ್ಲದೇ ತಂಪು ನೀರು ನೀಡುವ ಮಡಕೆಗಳು ತಲತಲಾಂತರಗಳಿಂದ ಇವೆ. ಬಡವರ ಫ್ರಿಜ್‌ ಎಂದೇ ಖ್ಯಾತಿ ಪಡೆದಿದೆ. ಮಣ್ಣಿನಿಂದ ತಯಾರಿಸಿದ ಮಡಕೆ ನೀರನ್ನು ಸೇವಿಸುವುದರಿಂದ ಆರೋಗ್ಯ ಚೆನ್ನಾಗಿರುತ್ತದೆ. ಆರೋಗ್ಯ ತಜ್ಞರು ಇದನ್ನು ಅನುಮೋದಿಸಿದ್ದಾರೆ. ಹಾಗಾಗಿ, ಪ್ರತಿ ವರ್ಷ ಮಡಕೆ ಖರೀದಿಸುತ್ತೇವೆ ಎಂದು ಗ್ರಾಹಕ ಆನಂದ್‌ ತಿಳಿಸಿದರು.

ಟಾಪ್ ನ್ಯೂಸ್

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.