ವಿಳಂಬ ಧೋರಣೆ: ಪೌರಕಾರ್ಮಿಕರಿಗೆ ಸಿಗದ ಸವಲತ್ತು

ಪೌರಕಾರ್ಮಿಕರಿಗೆ ಪಿಎಫ್‌ ಹಣ ನೌಕರರ ಖಾತೆಗಳಿಗೆ ಜಮಾ ಮಾಡಲಾಗಿಲ್ಲ

Team Udayavani, Apr 2, 2022, 5:48 PM IST

ವಿಳಂಬ ಧೋರಣೆ: ಪೌರಕಾರ್ಮಿಕರಿಗೆ ಸಿಗದ ಸವಲತ್ತು

ದೊಡ್ಡಬಳ್ಳಾಪುರ: ಪೌರಕಾರ್ಮಿಕರ ಪರವಾಗಿ ಜಾರಿಗೆ ತರಲಾಗಿರುವ ನಿಯಮ ಅನುಷ್ಠಾನಗೊಳಿಸುವಲ್ಲಿ ನಗರಸಭೆ ಅಧಿಕಾರಿಗಳು ವಿಳಂಬ ಧೋರಣೆ ಮಾಡುತ್ತಿದ್ದು, ಸಾಕಷ್ಟು ಜನ ಪೌರಕಾರ್ಮಿಕರು ಸರ್ಕಾರದ ಸೌಲಭ್ಯ ಪಡೆಯಲು ವಂಚಿತರಾಗುತ್ತಿದ್ದಾರೆ ಎಂದು ಸಫಾಯಿ ಕರ್ಮಚಾರಿ ಕಾವಲು ಸಮಿತಿ ರಾಜ್ಯ ಸಂಚಾಲಕ ಡಾ.ಕೆ.ಬಿ.ಓಬಳೇಶ್‌ ಹೇಳಿದರು.

ನಗರದ ಡಾ.ರಾಜ್‌ಕುಮಾರ್‌ ಕಲಾಭವನದಲ್ಲಿ ನಡೆದ ಸಫಾಯಿ ಕರ್ಮಚಾರಿಗಳ ಕಾವಲು ಸಮಿತಿ ತಾಲೂಕು ಘಟಕ ಉದ್ಘಾಟನಾ ಸಮಾರಂಭದಲ್ಲಿ ಮಾತ ನಾಡಿ, ನಗರಸಭೆಗಳಲ್ಲಿ ಕೆಲಸ ಮಾಡುವ ಪೌರಕಾರ್ಮಿಕರನ್ನು ಗುತ್ತಿಗೆ ನೌಕರರು ಎಂದು ಪರಿಗಣಿಸಿ ಗುರುತಿನ ಚೀಟಿ, ಪೌರಕಾರ್ಮಿಕರ ಖಾತೆಗಳಿಗೆ ನೇರವಾಗಿ ವೇತನ ಪಾವತಿ, ಇ.ಪಿ, ಪಿಎಫ್‌ ಹಣ ಜಮಾ ಆಗಿರುವ ಬಗ್ಗೆ ಮಾಹಿತಿ ನೀಡುವುದು ಸೇರಿ ಬಹುತೇಕ ನಿಯಮ 2018ರಲ್ಲಿ ಜಾರಿಗೆ ತರಲಾಯಿತು. ಆದರೆ, ವಾಸ್ತವದಲ್ಲಿ ಇವುಗಳು ಸೂಕ್ತ ರೀತಿಯಲ್ಲಿ ಅನುಷ್ಠಾನವಾಗಿಲ್ಲ ಎಂದರು.

9 ತಿಂಗಳಿಂದಲೂ ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಪೌರಕಾರ್ಮಿಕರಿಗೆ ಪಿಎಫ್‌ ಹಣ ನೌಕರರ ಖಾತೆಗಳಿಗೆ ಜಮಾ ಮಾಡಲಾಗಿಲ್ಲ. ಈ ಹಣ ಎಲ್ಲಿಗೆ ಹೋಗಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲದಾಗಿದೆ. 2018ರಲ್ಲಿ ಜಾರಿಗೆ ತರಲಾದ ನಿಯಮ ಅನುಷ್ಠಾನವಾಗದೆ ಹಲವಾರು ಜನ ಗುತ್ತಿಗೆ ಪೌರಕಾರ್ಮಿಕರು ನಿವೃತ್ತಿಯಾದರೂ ಸೌಲಭ್ಯ ಪಡೆಯಲು ಸಾಧ್ಯವಾಗಿಲ್ಲ. ಗುತ್ತಿಗೆ ಪೌರಕಾರ್ಮಿಕರ ಬಗೆಗಿನ ಈ ತಾರತಮ್ಯ ನೀತಿ ಸರಿಪಡಿಸುವತ್ತ ನಗರಸಭೆ ಅಧಿಕಾರಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳು ಗಮನವಹಿಸಬೇಕು ಎಂದು ಮನವಿ ಮಾಡಿದರು.

ಪೌರಕಾರ್ಮಿಕರಿಗೆ ಮಾಹಿತಿ ನೀಡಿ: ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಕೊರೊನಾದಂತಹ ಸಂಕಷ್ಟದ ಸಮಯದಲ್ಲೂ ಸಹ ನಗರವನ್ನು ಸ್ವತ್ಛ ಮಾಡಿದವರು ಪೌರಕಾರ್ಮಿಕರು. ನಗರದ ಸ್ವತ್ಛತೆಯಲ್ಲಿ ಮಹತ್ವದ ಪಾತ್ರವಹಿಸುವ ಪೌರ ಕಾರ್ಮಿಕರ ಪರವಾಗಿ ಸಿದ್ದರಾಮಯ್ಯ ಅವರು ಆಡಳಿತದ ಅವಧಿಯಲ್ಲಿ ಜಾರಿಗೆ ತಂದಿರುವ ನಿಯಮ ಇಲ್ಲಿಯವರೆಗೂ ಅನುಷ್ಠಾನ ಮಾಡದೇ ಇರುವುದು ಬೇಸರದ ಸಂಗತಿಯಾಗಿದೆ. ಪೌರ ಕಾರ್ಮಿ ಕರ ಸಂಘಟನೆ ಮುಖಂಡರು ಸರ್ಕಾರದಿಂದ ದೊರೆಯುವ ಸೌಲಭ್ಯ ಕುರಿತು ಕರಪತ್ರ ಮುದ್ರಿಸುವ ಮೂಲಕ ಪೌರಕಾರ್ಮಿಕರಿಗೆ ಮಾಹಿತಿ ನೀಡಬೇಕು ಎಂದರು.

ವಿದ್ಯಾರ್ಥಿಗಳಿಗೆ ಹೈಟೆಕ್‌ ಸೌಲಭ್ಯ: ತಾಲೂಕಿನ ಪ್ರತಿ ಹೋಬಳಿ ಹಾಗೂ ನಗರದಲ್ಲಿ ಸುಸಜ್ಜಿತವಾದ ವಸತಿ ಶಾಲೆ ಇವೆ. ಇಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ವಿದ್ಯಾರ್ಥಿಗಳಿಗೆ ಹೈಟೆಕ್‌ ಸೌಲಭ್ಯ ನೀಡಲಾಗುತ್ತಿದೆ. ಪೌರಕಾರ್ಮಿಕರು ತಮ್ಮ ಮಕ್ಕಳನ್ನು ವಸತಿ ಶಾಲೆಗಳಿಗೆ ದಾಖಲಿಸುವ ಮೂಲಕ ಶಿಕ್ಷಿತರನ್ನಾಗಿ ಮಾಡಬೇಕು ಎಂದರು. ನಗರಸಭೆ ಪೌರ ಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷ ಎಸ್‌.ತಿಪ್ಪಣ್ಣ, ನಗರಸಭೆ ಅಧ್ಯಕ್ಷೆ ಎಸ್‌. ಸುಧಾರಾಣಿ, ಉಪಾಧ್ಯಕ್ಷೆ ಫರ್ಹಾನ ತಾಜ್, ಪೌರಾಯುಕ್ತ ಕೆ.ಜಿ.ಶಿವಶಂಕರ್‌, ಬಾಶೆಟ್ಟಿಹಳ್ಳಿ ಪಪಂ ಮುಖ್ಯಾಧಿಕಾರಿ ಮುನಿರಾಜು, ಪಾಂಡು ಸಿಂಧೆ, ಸಂಚಾಲಕ ಮ್ಯಾಥ್ಯೂ ಮುನಿಯಪ್ಪ, ನಗರಸಭೆ ಸದಸ್ಯೆ ಎಸ್‌.ವತ್ಸಲಾ, ಆರ್‌.ಹಂಸಪ್ರಿಯಾ, ಬಿ.ನಾಗರತ್ನಮ್ಮ,ರೂಪಿಣಿ, ರಜನಿ ಎಂ.ಸುಬ್ರಹ್ಮಣಿ, ಹಸೀನತಾಜ್, ವಿ.ಇಂದ್ರಾಣಿ, ಆರ್‌.ಪ್ರಭಾ, ಆನಂದ್‌ಕುಮಾರ್‌, ಕೆ.ಮಂಜುಳಾ, ಭಾಸ್ಕರ್‌, ಆದಿಲಕ್ಷ್ಮಿ, ಮುಖಂಡ ನಾರಾಯಣಪ್ಪ, ತಳವಾರ ನಾಗರಾಜ್‌ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.