ಕೃಷಿ ಯೋಜನೆ ರೈತರಿಗೆ ತಲುಪಿಸಿ


Team Udayavani, Jul 5, 2018, 1:30 PM IST

blor-gm.jpg

ದೇವನಹಳ್ಳಿ: ರೈತರ ಮನೆ ಬಾಗಿಲಿಗೆ ಕೃಷಿ ಮಾಹಿತಿ ನೀಡುವ ಮೂಲಕ ಸರ್ಕಾರ ಕೃಷಿಗೆ ಒತ್ತು ನೀಡುತ್ತಿದ್ದು ರೈತರು ಸದ್ಬಳಕೆ ಮಾಡಿಕೊ ಳ್ಳಬೇಕೆಂದು ಜಿಪಂ ಸದಸ್ಯ ಜಿ.ಲಕ್ಷ್ಮೀನಾರಾಯಣ್‌ ತಿಳಿಸಿದರು.

ತಾಲೂಕಿನ ಚನ್ನರಾಯಪಟ್ಟಣ ಗ್ರಾಪಂ ಕಚೇರಿ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಚನ್ನರಾಯಪಟ್ಟಣ ಹೋಬಳಿ ಕೃಷಿ ಅಭಿಯಾನ ಸಮಾರೋಪ ಉದ್ಘಾಟಿಸಿ ಮಾತನಾಡಿದರು. ಬಯಲು ಸೀಮೆ ಒಣ ಭೂಮಿ ಯಲ್ಲಿ ಮಳೆ ಆಧಾರಿತ ಕೃಷಿ ಬೇಸಾಯ ಕಷ್ಟಕರ. ಕೊಳವೆ ಬಾವಿಯಲ್ಲಿ ಸ್ವಲ್ಪ ನೀರಿನ ಬಳಕೆಗೆ ಹನಿ ನೀರಾವರಿ ಸೇರಿದಂತೆ ವಿವಿಧ ತಂತ್ರಜ್ಞಾನದಿಂದ ಬೆಳೆ ಬೆಳೆಯಬೇಕೆಂದರು.

ಪ್ರತಿ ಹೋಬಳಿಯಲ್ಲೂ ಅಭಿಯಾನ: ತಾಪಂ ಅಧ್ಯಕ್ಷೆ ಭಾರತಿ ಮಾತನಾಡಿ, ಕೃಷಿ ಉತ್ಪಾದಕತೆ ಹೆಚ್ಚಿಸುವ ಉದ್ದೇಶದಿಂದ ಅವಶ್ಯಕವಿರುವ ತಂತ್ರಜ್ಞಾನವನ್ನು ರೈತರಿಗೆ ಯತ್ರೋಪಕರಣ ಬಾಡಿಗೆ ಸಾರ್ವಜನಿಕರಿಗೆ ತಲುಪಿಸಲು ಹೋಬಳಿಯ ಪ್ರತಿ ಗ್ರಾಪಂ ಆವರಣಗಳಲ್ಲಿ ಕೃಷಿ ಅಭಿಯಾನ ರಥದ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದರು.
 
ರೈತರಿಗೆ ಅನೂಕುಲವಾಗುವಂತೆ ಸರ್ಕಾರ ದಿಂದ ಬಿಡುಗಡೆಯಾಗುವ ಅನುದಾನಗಳನ್ನು ಪಡೆಯಲು ರೈತರು ಇಲಾಖೆಗಳಿಗೆ ಅಲೆದಾ ಡುವುದನ್ನು ತಪ್ಪಿಸಲು ಈ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
 
ತಂತ್ರಜ್ಞಾನ ಅಳವಡಿಸಿಕೊಳ್ಳಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಎಂ.ಎನ್‌.ಮಂಜುಳಾ, ರೈತರು ಆಧುನಿಕ ತಂತ್ರಜ್ಞಾನದಲ್ಲಿ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು. ಪ್ರತಿ ರೈತರು ಮಣ್ಣಿನ ಪರೀಕ್ಷೆ ಕಡ್ಡಾಯವಾಗಿ ಮಾಡಿಸಬೇಕು ಎಂದು ಹೇಳಿದರು.ಮಣ್ಣಿನ ಫ‌ಲವತ್ತತೆ ಹೆಚ್ಚಿಸಿಕೊಳ್ಳಬೇಕಿದ್ದು ಕೊಟ್ಟೆಗೆ ಗೊಬ್ಬರ, ಕೋಳಿ ಮತ್ತು ಕುರಿ ಗೊಬ್ಬರ, ಎರೆಹುಳು ಗೊಬ್ಬರಗಳನ್ನು ಅಳವಡಿಸಿಕೊಂಡರೆ ಮಣ್ಣಿನ ಆರೋಗ್ಯ ಹೆಚ್ಚಿಸಿಕೊಳ್ಳಬಹುದು ಎಂದರು.

ಇದೇ ಸಂದರ್ಭದಲ್ಲಿ ರಾಜ್ಯಮಟ್ಟದ ಕೃಷಿ ಪ್ರಶಸ್ತಿ ಪುರಸ್ಕೃತ ಮಂಜುನಾಥ್‌, ಚನ್ನರಾಯಪಟ್ಟಣ ಅಧ್ಯಕ್ಷೆ ಮಂಜುಳಾ, ತಾಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸೋಮತ್ತನಹಳ್ಳಿ ಮಂಜುನಾಥ್‌, ತಾಪಂ ಸದಸ್ಯ ವೆಂಕಟೇಶ್‌, ಶಶಿಕಲಾ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಶ್ರೀನಿವಾಸ್‌ಗೌಡ, ತಾಲೂಕು ಸೊಸೈಟಿ ಮಾಜಿ ಅಧ್ಯಕ್ಷ ರಾಮಚಂದ್ರಪ್ಪ, ಗ್ರಾಪಂ ಸದಸ್ಯರಾದ ಮುನಿವೆಂಕಟಮ್ಮ, ಚಂದ್ರಕಲಾ, ಬಾಬು, ಮುರಳಿಧರ್‌, ಬೂದಿಗೆರೆ ಗ್ರಾಪಂ ಸದಸ್ಯ ಮುನಿರಾಜು, ನಲ್ಲೂರು ಗ್ರಾಪಂ ಅಧ್ಯಕ್ಷೆ ಟಿ. ಕೆ.ಸಾವಿತ್ರಮ್ಮ, ಜಿಕೆವಿಕೆ ಹಾಡೋನಹಳ್ಳಿ ವಿಜ್ಞಾನಿ ಮಂಜುನಾಥ್‌, ಗ್ರಾಪಂ ಸದಸ್ಯೆ ಶೈಲಾ, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್‌, ಮುಖಂಡ ಪಾಪನಹಳ್ಳಿ ತಮ್ಮೇಗೌಡ, ಪಶುಸಂಗೋಪನೆ ಸಹಾಯಕ ನಿರ್ದೇಶಕ ಜನಾರ್ಧನ್‌, ತೋಟಗಾರಿಕಾ ಇಲಾಖಾಧಿಕಾರಿ ರಾಜೇಂದ್ರ, ರೇಷ್ಮೆ ಇಲಾಖೆ ನಿರ್ದೇಶಕಿ ಗಾಯಿತ್ರಿ, ಪರಿವರ್ತನಾ ಕಲಾ ತಂಡದ ದೇವರಾಜು, ಸಂಗಡಿಗರು, ಗ್ರಾಮಸ್ಥರಿದ್ದರು.

ಸರ್ಕಾರದ ಯೋಜನೆಗಳನ್ನು ಜನತೆಗೆ ತಲುಪಿಸುವ ಹೊಣೆ ಅಧಿಕಾರಿಗಳದ್ದು. ಸಾವಯುವ ಗೊಬ್ಬರ ಪರಿಣಾಮಕಾರಿಯಾಗಿ ರೈತರು ಬಳಕೆ ಮಾಡಿಕೊಳ್ಳಬೇಕು. ವಾಡಿಕೆ ಮಳೆ ಪ್ರಮಾಣ ಕಡಿಮೆ ಜತೆಗೆ ಶಾಶ್ವತ ನೀರಾವರಿ ಸೌಲಭ್ಯವಿಲ್ಲದೇ ಕೃಷಿಗೆ ಹಿನ್ನಡೆಯಾಗುತ್ತಿದೆ. ಹೀಗಾಗಿ ಸುಧಾರಿತ ಬೇಸಾಯ ಕ್ರಮಕ್ಕೆ ರೈತರು ಮುಂದಾಗಬೇಕು.
ಜಿ.ಲಕ್ಷ್ಮೀನಾರಾಯಣ್‌, ಜಿಲ್ಲಾ ಪಂಚಾಯ್ತಿ ಸದಸ್ಯ 

ಟಾಪ್ ನ್ಯೂಸ್

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.