ಗೂಂಡಾ ಕಾಯ್ದೆಯಡಿ ಬಂಧನ: ಎಸ್ಪಿ


Team Udayavani, May 31, 2020, 7:08 AM IST

bhandana

ಆನೇಕಲ್‌: ಐದು ಪ್ರಕರಣಗಳಿಗಿಂತ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಕ್ರಿಮಿನಲ್‌ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಅವರನ್ನು ಗೂಂಡಾ ಕಾಯ್ದೆಯಡಿಯಲ್ಲಿ ಬಂಧಿಸ ಬೇಕಾ ಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ  ಜಿಲ್ಲಾ ಪೊಲೀಸ್‌ ವರಿಷ್ಠಾದಿಕಾರಿ ರವಿ ಡಿ.ಚೆನ್ನಣ್ಣನವರ್‌ ಎಚ್ಚರಿಕೆ ನೀಡಿದ್ದಾರೆ.

ಆನೇಕಲ್‌ ಪಟ್ಟಣದಲ್ಲಿ ರೌಡಿಗಳ ಪರೇಡ್‌ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು, ಕಳೆದ ಮೂರು ತಿಂಗಳಿಂದ ಕೋವಿಡ್‌-19 ಕೆಲಸದಲ್ಲಿ  ಬ್ಯುಸಿಯಾಗಿದ್ದೆವು. ಹಿರಿಯ ಅಧಿ  ಕಾರಿಗಳ ಸೂಚನೆ ಮೇರೆಗೆ ರೌಡಿಗಳನ್ನು ಕರೆದು ರೌಡಿಶೀಟ್‌ ರೆಕಾರ್ಡ್‌ಗಳನ್ನು ಅಪ್‌ಡೇಟ್‌ ಮಾಡುವ ಕೆಲಸ ಮಾಡಲಾಗಿದೆ. ಇದರ ನಡುವೆ ಆನೇಕಲ್‌ ವೃತ್ತ ವ್ಯಾಪ್ತಿಯಲ್ಲಿನ ಆನೇಕಲ್‌,  ಬನ್ನೇರುಘಟ್ಟ ಪೊಲೀಸ್‌ ಠಾಣಾ ವ್ಯಾಪ್ತಿಯ 33 ರೌಡಿಶೀಟ್‌ ಗಳನ್ನು ಕ್ಲೋಸ್‌ ಮಾಡಲಾಗಿದೆ.

ಉಳಿದ ರೌಡಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಸಲಹೆ, ಸೂಚನೆ ನೀಡಿ ಉತ್ತಮ ಬದುಕು ಸಾಗಿಸಲು ಅವಕಾಶ ಕಲ್ಪಿಸಿ ಕೊಡುತ್ತೇವೆ ಅವರು ಹೇಳಿದರು. ಗಾಂಜಾ  ಮಾರಾಟ ಮಾಡುವ ದಂಧೆಯಲ್ಲಿ ತೊಡಗಿ ಕೊಂಡಿದ್ದವರನ್ನು ಕರೆದು ಎಚ್ಚರಿಕೆ ನೀಡಿದ್ದೇವೆ. ಇದರಲ್ಲಿ ಮಹಿಳೆಯರು ಇದ್ದರು. ಅವರಿಗೆ ಈ ದಂಧೆಯನ್ನು ಬಿಟ್ಟು ಸುಂದರ ಬದುಕು ಕಟ್ಟಿಕೊಳ್ಳಿ ಎಂದು ತಿಳಿಸಲಾಗಿದೆ ಎಂದು ಹೇಳಿದರು.

ಕ್ಷುಲ್ಲಕ ಕಾರಣಕ್ಕೆ ಗುಂಪುಗಾರಿಕೆ ಒಡೆದಾಟ ಮಾಡುವುದು, ಯಾರದೋ ಬೆಂಬಲ ಇದೆ ಎಂದು ರೌಡಿ ಚಟುವಟಿಕೆಗಳನ್ನು ನಡೆಸಿದರೆ ಅಂತಹವರನ್ನು ಮಟ್ಟ ಹಾಕ ವುದು ಹೇಗೆ ಎಂದು ನಮಗೆ ತಿಳಿದಿದೆ ಎಂದು ಎಚ್ಚರಿಕೆ ನೀಡಲಾಗಿದೆ  ಎಂದು ತಿಳಿಸಿದರು.124 ರೌಡಿಗಳಲ್ಲಿ 10 ರೌಡಿಗಳು ಜೈಲಿನಲ್ಲಿದ್ದಾರೆ. 26 ಓವಿಯಲ್ಲಿದ್ದಾರೆ. 10 ಜನ ಪ್ರಮುಖ ವಾಗಿ ಗೈರು ಹಾಜರಿ ಆಗಿದ್ದಾರೆ.

ಒಂದು ವಾರದೊಳಗಾಗಿ ಅವರ ಪತ್ತೆ ಮಾಡಿ ಮುಂಜಾಗ್ರತಾ ಕ್ರಮವಾಗಿ ತಹಶೀಲ್ದಾರ್‌ ಮುಂದೆ  ಹಾಜರಿ ಪಡಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. ಇದೇ ಮೊದಲ ಬಾರಿ ರೌಡಿ ಪೆರೆಡ್‌ ನಲ್ಲಿ 28 ಜನರನ್ನು ರೌಡಿ ಶೀಟ್‌ ಗಳಿಂದ ಮುಕ್ತಿಗೊಳಿಸಿ , ಮುಂದೆ ಕಾನೂನು ಬಾರ ಚಟುವಟಿಕೆಗಳಿಂದ ದೂರ ಇರಿ ಎಂದು ಅವರು ಸೂಚನೆ  ನೀಡಿದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.