ಕೆಸರುಗದ್ದೆಯಂತಾಗಿರುವ ರಸ್ತೆಗುಂಡಿ ಮುಚ್ಚಿ


Team Udayavani, Sep 28, 2021, 2:53 PM IST

Untitled-1

ದೇವನಹಳ್ಳಿ: ಪಟ್ಟಣದ ಹೊಸಬಸ್‌ ನಿಲ್ದಾಣದಲ್ಲಿ ಮಳೆನೀರು ಹರಿಯದೆ ನಿಂತಲ್ಲೇ ನಿಂತು ಕೆಸರುಗದ್ದೆಯಾಗಿದ್ದು ಪ್ರಯಾಣಿಕರು ಬಸ್‌ ಹತ್ತಲು ಪರದಾಡುವ ಸ್ಥಿತಿ ಬಂದೊದಗಿದೆ.

ಪಟ್ಟಣದ ಹೊಸಬಸ್‌ ನಿಲ್ದಾಣದ ಬೆಂಗಳೂರು ಕಡೆ ಹೋಗುವ ಸ್ಥಳದಲ್ಲಿ ಮಳೆ ನೀರು ನಿಂತುಕೊಂಡಿರುವುದರಿಂದ ಪ್ರಯಾಣಿಕರು ಅದರ ಪಕ್ಕದಲ್ಲಿಯೇ ಕಾಯುವ ಸ್ಥಿತಿ ನಿರ್ಮಾಣವಾಗಿದೆ.

ಬಸ್‌ ನಿಲುಗಡೆ ಮಾಡುವ ಬಹುತೇಕ ಕಡೆ ಮಳೆ ನೀರು ನಿಂತಲ್ಲೇ ನಿಂತಿದೆ. ರಸ್ತೆ ಪಕ್ಕದಲ್ಲಿಯೇ ಬೆಂಗಳೂರಿಗೆ ಹೋಗುವ ಬಸ್‌ ನಿಲ್ಲಿಸುತ್ತಿರುವುದರಿಂದ ಸಂಚಾರ ಸಮಸ್ಯೆ ಉಂಟಾಗುತ್ತಿದೆ. ಪಕ್ಕದಲ್ಲೇ ಚರಂಡಿ ಇದ್ದರೂ ಮಳೆ ನೀರು ಚರಂಡಿಗೆ ಹೋಗದೆ ಇರುವ ಕಾರಣ ರಸ್ತೆಯಲ್ಲೇ ನಿಲ್ಲುತ್ತಿದೆ. ಪ್ರಯಾಣಿಕರು ಸ್ವಲ್ಪ ಯಾಮಾರಿದರೂ ಕೆಸರು ಗುಂಡಿಗೆ ಬೀಳುವಂತೆ ಆಗುತ್ತದೆ.

ಬಸ್‌ ನಿಲ್ದಾಣ ಅವಶ್ಯ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ತಾಲೂಕಿನಲ್ಲಿಯೇ ಜಿಲ್ಲಾಡಳಿತ ಭವನ ಇರುವುದರಿಂದ ಸಾಕಷ್ಟು ಮಂದಿ ದೇವನಹಳ್ಳಿಗೆ ಬಂದು ಹೋಗುತ್ತಾರೆ. 4 ತಾಲೂ ಕುಗಳ ಪೈಕಿ ದೇವನಹಳ್ಳಿ ಮಧ್ಯದಲ್ಲಿ ಇದೆ. ಸರ್ಕಾರ ಇನ್ನಾದರೂ ಸುಸಜ್ಜಿತವಾದ ಹೈಟೆಕ್‌ ಬಸ್‌ ನಿಲ್ದಾಣ ಮಾಡಿ ಅಭಿವೃದ್ಧಿಗೊಳಿಸಲು ಮುಂದಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕಳೆದ 3 ತಿಂಗಳ ಹಿಂದೆ ಪುರಸಭೆ

ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 207 ರಲ್ಲಿ ವಿದ್ಯುತ್‌ ಕೇಬಲ್‌ ಅಳವಡಿಸಲು ಖಾಸಗಿ ಕಂಪನಿಯಿಂದ25ಲಕ್ಷ ಹಣ ಪಾವತಿಸಿಕೊಂಡು ಅನುಮತಿ ನೀಡಿದ್ದಾರೆ. ರಾಷ್ಟ್ರೀ ಯ ಹೆದ್ದಾರಿ ಪುರಸಭೆ ವ್ಯಾಪ್ತಿಗೆ ಒಳಪಡುವು ದಿಲ್ಲವಾದರೆ ಏಕೆ ಖಾಸಗಿ ಕಂಪನಿಯವರಿಗೆ ಕೇಬಲ್‌ ಅಳವಡಿಕೆಗೆ ಹಣ ಪಾವತಿ ಮಾಡಿಕೊಳ್ಳಬೇಕಿತ್ತು. ಹಣ ಪಾವತಿಗೆ ಮಾತ್ರ ರಸ್ತೆಗಳು ಒಳಪಡುತ್ತದೆ. ಇಲ್ಲವಾದರೆ ದುರಸ್ತಿ ಕೆಲಸಗಳಿಗೆ ಪುರಸಭೆ ವ್ಯಾಪ್ತಿಗೆ ಒಳಪಡುವುದಿಲ್ಲ ಎನ್ನುವುದು ಯಾವ ರೀತಿ ನ್ಯಾಯ ಒದಗಿಸುತ್ತಾರೆ ಮೊದಲು ಪಟ್ಟಣದ ನಾಗರೀಕರಿಗೆ ಸೌಲಭ್ಯ ನೀಡುವಂತೆ ಆಗಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

ಅನುಕೂಲ ಕಲ್ಪಿಸಿ: ನೀರು ನಿಂತಿರುವ ಜಾಗದಲ್ಲಿ ಡಾಂಬರೀಕರಣ ಮಾಡಿ ಪಕ್ಕದಲ್ಲಿಯೇ ಇರುವ ಚರಂಡಿಗೆ ಹರಿ ಯುವಂತೆ ಪುರಸಭೆ ಅಧಿಕಾರಿಗಳು ಮಾಡಬೇಕು. ಆದರೆ, ನಮ್ಮ ವ್ಯಾಪ್ತಿಗೆ ಬರುವುದಿಲ್ಲಎನ್ನುತ್ತಾರೆ. ಪುರಸಭೆಗೆ ಕೋಟಿಗಟ್ಟಲೇ ತೆರಿಗೆಬರುತ್ತಿದ್ದರೂ ಮೂಲಭೂತ ಸೌಕರ್ಯ ಒದಗಿಸುವಲ್ಲಿ ವಿಫ‌ಲ ವಾಗಿದೆ. ಇನ್ನಾದರೂ ಎಚ್ಚೆತ್ತು ಬೆಂಗಳೂರು ಕಡೆ ಹೋಗುವ ಬಸ್‌ ನಿಲ್ದಾಣದಲ್ಲಿ ಗುಂಡಿ ಮುಚ್ಚಿ ಮಳೆ ನೀರು ನಿಲ್ಲದಂತೆ ನೋಡಿಕೊಂಡು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕಿದೆ.

ಹಲವೆಡೆ ರಸ್ತೆ ಗುಂಡಿಗಳು:  ಪಟ್ಟಣದ ರಾಣಿ ಸರ್ಕಲ್‌ ನಿಂದ ಹಿಡಿದು ಮಿನಿವಿಧಾನ ಸೌಧ ಹತ್ತಿರದವರೆಗೆ ಹಾಗೂ ಗಿರಿಯಮ್ಮ ವೃತ್ತದಲ್ಲಿ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ಇದುವರೆಗೂ ಮುಚ್ಚುವ ಕೆಲಸವಾಗಿಲ್ಲ. ಹಲವರು ಗುಂಡಿಗಳನ್ನು ತಪ್ಪಿಸಲು ಹೋಗಿ ಕೈಕಾಲು ಮುರಿದುಕೊಂಡು ಆಸ್ಪತ್ರೆ, ಪ್ರಾಣ ಕಳೆದುಕೊಂಡಿರುವ ಘಟನೆಗಳು ನಡೆದಿದೆ. ವಿಧಾನಮಂಡಲದ ಅಧಿವೇಶನದಲ್ಲಿ ಶಾಸಕರು ರಸ್ತೆಗಳ ಅವ್ಯವಸ್ಥೆ ಬಗ್ಗೆ ಪ್ರಸ್ತಾಪಿಸಿದ್ದರೂ ಸರ್ಕಾರ ಅನುದಾನ ಬಿಡುಗಡೆಗೊಳಿಸಿ ಶಾಶ್ವತ ಪರಿಹಾರ ಕೊಡಿಸುವಲ್ಲಿ ವಿಫ‌ಲವಾಗಿದೆ. ಇನ್ನಾದರೂ ಸೂಕ್ತ ಅನುದಾನ ಸರ್ಕಾರ ನೀಡುವಂತೆ ಆಗಬೇಕು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪಟ್ಟಣದಲ್ಲಿ ಅನೇಕ ರಸ್ತೆಗಳು ಗುಂಡಿ ಬಿದ್ದಿವೆ. ಹೊಸಬಸ್‌ ನಿಲ್ದಾಣದ ಬೆಂಗಳೂರು ಕಡೆ ಹೋಗುವ ಬಸ್‌ ನಿಲ್ದಾಣದಲ್ಲಿ ಮಳೆನೀರು ನಿಂತಿರುವುದರಿಂದ ಬಸ್‌ಗಳಿಗೆ ಹತ್ತಲು ಕಷ್ಟವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು.-ನಂದಕುಮಾರ್‌, ಸಾರ್ವಜನಿಕ

ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವುದರಿಂದ ಸುಸಜ್ಜಿತ ಹೈಟೆಕ್‌ಬಸ್‌ ನಿಲ್ದಾಣ ಆಗಬೇಕು. ರಸ್ತೆ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವಂತೆ ಆಗಬೇಕು.-ಗಿರೀಶ್‌, ಪ್ರಯಾಣಿಕ

ಹೊಸ ಬಸ್‌ ನಿಲ್ದಾಣದ ಬೆಂಗಳೂರಿಗೆ ಹೋಗುವ ರಸ್ತೆ ರಾಷ್ಟ್ರೀಯ ಹೆದ್ದಾರಿ 207ಕ್ಕೆಬರುತ್ತದೆ. ಆದರೂ ನಮಗೆ ಬರದಿದ್ದರೂ ಜನ ಬಸ್‌ಗಳಿಗೆ ಕಾಯುವ ಕಡೆ ಮಳೆ ನಿಂತ ನಂತರ ಕಾಮಗಾರಿ ಪ್ರಾರಂಭಿಸುತ್ತೇವೆ.-ಕೃಷ್ಣಪ್ಪ, ಲೋಕೋಪಯೋಗಿ ಇಲಾಖೆಸಹಾಯಕ ಕಾರ್ಯಪಾಲಕ ಅಭಿಯಂತರ

 

-ಎಸ್‌.ಮಹೇಶ್‌

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.