ಜಿಲ್ಲೆಯಲ್ಲಿ ಕೋವಿಡ್ ಇಳಿಮುಖ

ಎಚ್ಚೆತ್ತುಕೊಳ್ಳದ ಸಾರ್ವಜನಿಕರು | ಕೋವಿಡ್‌ ನಿಯಮಗಳ ಉಲ್ಲಂಘನೆ ಹೆಚ್ಚಳ

Team Udayavani, Nov 3, 2020, 3:11 PM IST

br-tdy-1

ದೇವನಹಳ್ಳಿ: ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಇಳಿಮುಖವಾಗುತ್ತಿವೆ. 300-400, 460ರ ತನಕ ಏರಿಕೆಯಾಗಿದ್ದ ಕೋವಿಡ್ ಪ್ರಕರಣಗಳು ಇದೀಗ ಒಂದು ವಾರದಿಂದ 100 ಗಡಿಗೆ ಇಳಿದಿದೆ. ಕೋವಿಡ್ ತಪಾಸಣೆ ತೀವ್ರಗೊಳಿಸಿರುವ ನಡುವೆಯೇ ಸೋಂಕಿತರ ಪ್ರಮಾಣ ಕಡಿಮೆ ಬರುತ್ತಿರುವುದು ಜಿಲ್ಲೆಯ ಜನರು ನಿಟ್ಟುಸಿರು ಬಿಡುವಂತಾಗಿದೆ.

ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ,ಕೋವಿಡ್ ಸೋಂಕಿಗೆ ಸಾವನ್ನಪ್ಪಿರುವ ಸಂಖ್ಯೆಯಲ್ಲಿಯೂ ಕಡಿಮೆ ಇದೆ. ಅಕ್ಟೋಬರ್‌ನಲ್ಲಿ ಚಿಕಿತ್ಸೆಗೆ ಸ್ಪಂದಿಸದೆ, 10 ಮಂದಿ ಮೃತಪಟ್ಟಿದ್ದಾರೆ. ಇದುವರೆಗೂ 10,76,673 ರಷ್ಟು ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, 16,258 ಮಂದಿಗೆ ಸೋಂಕು ದೃಢಪಟ್ಟಿತ್ತು. ಇದರಲ್ಲಿ ಬೇರೆ ಜಿಲ್ಲೆ ಹಾಗೂ ರಾಜ್ಯದ 915 ಜನ ಸೋಂಕಿತರಿದ್ದರು. 12,852 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 3,279 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 83,139 ಜನರಲ್ಲಿ ನೆಗಟಿವ್‌ ಬಂದಿದೆ. ಇನ್ನೂ 8,276 ಜನರ ಫಲಿತಾಂಶ ಬರಬೇಕಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಜನರು ಮಾಸ್ಕ್ ಇಲ್ಲದೆ, ಬೇಕಾಬಿಟ್ಟಿ ಓಡಾಡುವುದು, ಸಭೆ ಸಮಾರಂಭಗಳಲ್ಲಿ ಗುಂಪು ಗುಂಪಾಗಿ ಸಾಮಾಜಿಕ ಅಂತರವಿಲ್ಲದೆ, ನಿಲ್ಲುತ್ತಿರುವುದರಿಂದ ಕೋವಿಡ್ ನಿಯಮಗಳ ಉಲ್ಲಂಘನೆ ಹೆಚ್ಚಾಗುತ್ತಿದೆ. ಪೊಲೀಸ್‌ ಇಲಾಖೆ, ಸ್ಥಳೀಯ ಪುರಸಭೆ, ನಗರಸಭೆಗಳಲ್ಲಿ ಮಾಸ್ಕ್ ಇಲ್ಲದೆ ಓಡಾಡುವವರಿಗೆ ದಂಡ ವಿಧಿಸಿದರೂ ಜನ ಎಚ್ಚರಿಕೆ ವಹಿಸುತ್ತಿಲ್ಲ.

ಕೋವಿಡ್ ಚೈನ್‌ ಲಿಂಕ್‌ಗೆ ಬ್ರೇಕ್‌ ಹಾಕಲು ಕೋವಿಡ್ ತಪಾಸಣೆಯನ್ನು ಜಿಲ್ಲೆಯಲ್ಲಿ ಹೆಚ್ಚಿಸಲಾಗಿದೆ. ಇದರ ನಡುವೆಯೂ ಕೋವಿಡ್ ಸೋಂಕಿತರ ಪ್ರಮಾಣ ಇಳಿಮುಖವಾಗುತ್ತಿರುವುದು ಒಂದಿಷ್ಟು ನಿಟ್ಟುಸಿರು ಬಿಡುವಂತಾಗಿದೆ. ಕೋವಿಡ್ ನಿಯಮ ಉಲ್ಲಂಘನೆ ವಿರುದ್ಧ ದಂಡಾಸ್ತ್ರ ಪ್ರಯೋಗ ಮಾಡಲಾಗಿದೆ. ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ನಿಯಮ ನಿರ್ಲಕ್ಷಿಸಬಾರದು. ಪಿ.ಎನ್‌.ರವೀಂದ್ರ, ಜಿಲ್ಲಾಧಿಕಾರಿ

ಕೋವಿಡ್ ಪರೀಕ್ಷೆ ಹೆಚ್ಚಿಸಿದ್ದು, ನೆಗಟಿವ್‌ ಪ್ರಕರಣಗಳು ಹೆಚ್ಚುಕಂಡುಬರುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಕಳೆದ ಒಂದು ವಾರದಿಂದ ಕೋವಿಡ್ ಸೋಂಕಿತರ ಪ್ರಮಾಣ ಇಳಿಮುಖವಾಗುತ್ತಿದೆ. ಡಾ.ಕೆ.ಮಂಜುಳಾದೇವಿ, ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.