ಜನರ ದಾರಿ ತಪ್ಪಿಸಲು ಶಾಸಕರಿಂದ ಪ್ರತಿಭಟನೆ ನಾಟಕ


Team Udayavani, Nov 9, 2022, 4:34 PM IST

tdy-19

ದೇವನಹಳ್ಳಿ: ಶಾಸಕರ ಅನುದಾನದಲ್ಲಿ ತುರ್ತು ಕೆಲಸ ಮಾಡಿಸಬೇಕು. ಅದರಲ್ಲಿ ರಸ್ತೆ ದುರಸ್ತಿ ಮಾಡಿಸಬಹುದು. ಆದರೆ, ಜನರಿಗೆ ಮಂಕು ಬುದ್ಧಿ ಎರಚಿ ಹೋರಾಟ ಮಾಡುತ್ತಿದ್ದಾರೆ. ನಾಲ್ವರು ಬಾಲಂಗೋಚಿಗಳನ್ನು ಹಿಂದೆ ಹಾಕಿಕೊಂಡು ಪ್ರತಿಭಟನೆ ಮಾಡಿದರೆ ಕ್ಷೇತ್ರ ಅಭಿವೃದ್ಧಿ ಆಗುವುದಿಲ್ಲ. 4 ವರ್ಷದಿಂದ ಅಭಿವೃದ್ಧಿ ಮರೆತವರು ಇಂದು ಬೀದಿಗಿಳಿದು ನಾನೊಬ್ಬ ಅಸಮರ್ಥ ಎಂದು ಕೂಗಿ ಹೇಳುತ್ತಿದ್ದಾರೆ ಎಂದು ಮಾಜಿ ಶಾಸಕ ಜಿ.ಚಂದ್ರಣ್ಣ ಚಾಟಿ ಬೀಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮೆಲ್ಲರನ್ನೂ ಒಗ್ಗೂಡಿಸಿಕೊಂಡು ಜೊತೆಯಲ್ಲಿಯೇ ವಿಧಾನಸೌಧದಲ್ಲಿ ಮುಖ್ಯ ಮಂತ್ರಿಗಳು ಮತ್ತು ಸಂಬಂಧಪಟ್ಟ ಸಚಿವರ ಬಳಿ ಹೋಗಿ ಮನವಿ ಮಾಡಿದ್ದರೆ ಸಮಸ್ಯೆ ಬಗೆಹರಿಯುತ್ತಿತ್ತು. ಅನುದಾನ ಬೇಗನೆ ಬಿಡುಗಡೆಗೊಂಡು ಮತ್ತಷ್ಟು ಅಭಿವೃದ್ಧಿ ಕೆಲಸಗಳು ಆಗುತ್ತಿತ್ತು. ಆದರೆ, ಶಾಸಕರು ಹಾಗೆ ಮಾಡದೆ, ಏಕ ನಿರ್ಧಾರ ತೆಗೆದುಕೊಂಡು ರಸ್ತೆ ಗುಂಡಿ ಬಿದ್ದ ಜಾಗದಲ್ಲಿ ಪೈರು ನಾಟಿ ಮಾಡುವುದರ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವುದು ಸರಿಯಾದ ಕ್ರಮವಲ್ಲ ಎಂದು ಹೇಳಿದರು.

ಅನುದಾನ ಬಿಡುಗಡೆ ಆಗಿದೆ: ಚುನಾವಣೆ ಸಮೀಪಿಸುತ್ತಿರುವುದರಿಂದ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರದಿಂದ ಈಗಾಗಲೇ ಇಡೀ ರಾಜ್ಯಾದ್ಯಂತ ಎಲ್ಲಾ ಶಾಸಕರಿಗೆ ಕ್ಷೇತ್ರಗಳ ಅಭಿವೃದ್ಧಿಗಾಗಿ ಇಂತಿಷ್ಟು ಅನುದಾನ ಬಿಡುಗಡೆಯಾಗಿದೆ. ಕೇವಲ ಒಂದು ಕ್ಷೇತ್ರಕ್ಕೆ ಮಾತ್ರ ಬಿಡುಗಡೆಯಾಗಿಲ್ಲ. ಹಾಗೇ ಕೊಡಲು ಬರುವುದಿಲ್ಲ. ಆ ರೀತಿಯಾಗಿ ಹಣ ಬಿಡುಗಡೆಯಾಗಿರುವುದನ್ನು ಮನಗಂಡು ಇಷ್ಟು ದಿನದಲ್ಲಿ ಮಾಡದ ಹೋರಾಟ ಏಕಾಏಕೀ ಮಾಡಿರುವುದು ಮತ್ತು ಹೋರಾಟ ಮಾಡಿದ್ದರಿಂದ ಅನುದಾನ ಬಂದಿದೆ ಎಂದು ಹೇಳಿಕೊಂಡು ಪಕ್ಷದ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಮಾತನಾಡಿ, ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಬಿಜೆಪಿ ಶಾಸಕರು ಇಲ್ಲ. ಮೊನ್ನೆ ಜೆಡಿಎಸ್‌ನಿಂದ ಮಾಡಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಗ್ರಾಪಂಗೆ ಒಂದು ರೀತಿಯ ಅನುದಾನ ಬರುವುದಾದರೆ, ಪುರಸಭೆಗೆ ನಗರೋತ್ಥಾನ ಹಣ ಬರಲಿದ್ದು, 15ನೇ ಹಣಕಾಸು ಯೋಜನೆಯಡಿ ಸಾಕಷ್ಟು ಅನುದಾನ ಬರುತ್ತದೆ. ಮತ್ತು ಬಯಪ್ಪ ಅನುದಾನವೂ ಸಹ ಇರುತ್ತದೆ ಎಂದರು.

ಶಾಸಕರಿಗೆ ತಿಳಿವಳಿಕೆಯ ಕೊರತೆ: ಹಾಲಿ ಶಾಸಕರು ಅವರ ಅನುದಾನದಲ್ಲಿ 2 ಕೋಟಿ ರೂ. ಪ್ರತಿವರ್ಷ ಮೀಸಲಿರುತ್ತದೆ. 5 ವರ್ಷದಲ್ಲಿ 10 ಕೋಟಿ ರೂ. ಅನುದಾನ ಇರುತ್ತದೆ. ಅದರಲ್ಲಿ ಪ್ರಕೃತಿ ವಿಕೋಪ, ಇತರೆ ಅಭಿವೃದ್ಧಿ ಕೆಲಸಗಳಿಗೆ ಬಳಸಬಹುದು. ಆದರೆ, ಕೇವಲ 2 ಕೋಟಿ ರೂ. ಹಣ ಹೈಮಾಸ್ಟ್‌ ದೀಪಕ್ಕೆ ಬಳಸಲಾಗಿದೆ. ಈ ಅನುದಾನವನ್ನು ರಸ್ತೆ ಅಭಿವೃದ್ಧಿಗೆ ಬಳಸಬಹುತ್ತಿತ್ತು. ತಿಳಿವಳಿಕೆಯ ಕೊರತೆಯಿಂದ ಈ ಹೋರಾಟ ಮಾಡಿರುವುದು ಸರಿಯಾಗಿಲ್ಲ. ಜಿಲ್ಲೆಯಲ್ಲಿ ನಾಲ್ಕು ತಾಲೂಕಿನಲ್ಲಿ ನಮ್ಮ ಪಕ್ಷದ ಶಾಸಕರು ಇಲ್ಲದಿದ್ದರೂ ಅನುದಾನ ಬಿಡುಗಡೆಯಾಗುತ್ತಲೇ ಇದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಎ.ವಿ. ನಾರಾಯಣಸ್ವಾಮಿ ಮಾತನಾಡಿದರು.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್‌ಎಲ್‌ಎನ್‌ ಅಶ್ವತ್ಥ್ನಾರಾಯಣ್‌, ತಾಲೂಕು ಅಧ್ಯಕ್ಷ ಸುಂದರೇಶ್‌, ಪ್ರಧಾನ ಕಾರ್ಯದರ್ಶಿ ನಿಲೇರಿ ಮಂಜುನಾಥ್‌, ರವಿಕುಮಾರ್‌, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್‌, ತಾಲೂಕು ರೈತ ಮೋರ್ಚಾ ಅಧ್ಯಕ್ಷ ವಿನಯ್‌ ಕುಮಾರ್‌, ದೇವನಹಳ್ಳಿ ಮಹಾ ಶಕ್ತಿ ಕೇಂದ್ರದ ಸಂದೀಪ್‌, ಪುರಸಭಾ ಸದಸ್ಯ ಬಾಂಬೆ ನಾರಾಯಣಸ್ವಾಮಿ, ಲಕ್ಷ್ಮೀ ಅಂಬರೀಶ್‌, ಮುಖಂಡ ದೇ. ಸು.ನಾಗರಾಜ್‌, ಸುಬ್ಬೇಗೌಡ, ಶ್ಯಾನಪ್ಪನಹಳ್ಳಿ ರವಿ, ಅಶೋಕ್‌ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.