ದೇವನಹಳ್ಳಿ: ಸಿದ್ಧವಾಯ್ತು ಕಸ ವಿಲೇವಾರಿ ಘಟಕ; ಜೂನ್‌ 15ರೊಳಗೆ ಘಟಕ ಉದ್ಘಾಟನೆ

6 ತಿಂಗಳ ಹಿಂದೆ ಗ್ರಾಪಂಯೂ ಮೂಲ ಭೂತ ಸೌಕರ್ಯ ವಂಚಿತವಾಗಿತ್ತು.

Team Udayavani, May 26, 2023, 3:34 PM IST

ದೇವನಹಳ್ಳಿ: ಸಿದ್ಧವಾಯ್ತು ಕಸ ವಿಲೇವಾರಿ ಘಟಕ; ಜೂನ್‌ 15ರೊಳಗೆ ಘಟಕ ಉದ್ಘಾಟನೆ

ದೇವನಹಳ್ಳಿ: ತ್ಯಾಜ್ಯ ಮುಕ್ತ ಗ್ರಾಮಗಳನ್ನಾಗಿಸುವ ಸಲುವಾಗಿ ರಾಜ್ಯ ಸರಕಾರದ ಆದೇಶದಂತೆ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ಮಾಣ ಮಾಡಿ, ಆರೋಗ್ಯಕರ ಮತ್ತು ಸ್ವಚ್ಛ ಗ್ರಾಮ ಪಂಚಾಯಿತಿಗಳನ್ನಾಗಿಸುವ ಉದ್ದೇಶದಿಂದ ಕಸ ವಿಲೇವಾರಿ ಘಟಕವನ್ನು ನಿರ್ಮಿಸಲಾಗಿದೆ.

ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮೇನಹಳ್ಳಿ ಗಡಿ ಗ್ರಾಮದಲ್ಲಿ ಸುಸಜ್ಜಿತ ವಾದ 80/40 ಅಡಿಗಳ ಖಾಲಿ ಜಾಗದಲ್ಲಿ ತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ಮಾಣ ಮಾಡಿ, 9 ಬ್ಲಾಕ್‌ ಗಳನ್ನಾಗಿಸಿದ್ದು, ಘನ ತ್ಯಾಜ್ಯದ ಉಪಯುಕ್ತತೆ ಮತ್ತು ಕೊಂಡುಕೊಳ್ಳುವವರ ಅಗತ್ಯಕ್ಕೆ ಸಂಬಂಧಿಸಿದಂತೆ, ವಿವಿಧ ಹಂತದಲ್ಲಿ ಕಸವನ್ನು ವಿಂಗಡಿಸಿ ಶೇಖರಿಸಲಾಗುತ್ತಿದ್ದು, ಹಸಿ ಕಸ ವನ್ನು ಪ್ರತ್ಯೇಕಿಸಿ ಪ್ಲಾಸ್ಟಿಕ್‌ ಮತ್ತು ಇತರೆ ವಸ್ತುಗಳನ್ನು ತೆಗೆದು ಕಾಂಪೋಸ್ಟ್‌ (ನರೇಗಾ) ಅಡಿಯಲ್ಲಿ 10/15 ಅಡಿಯ
ನಿರ್ಮಾಣಗೊಂಡ ತೊಟ್ಟಿಯಲ್ಲಿ ತುಂಬಿಸ ಲಾಗುತ್ತದೆ.

ತುಂಬಿದ ಕಸದ ಮೇಲೆ ಇಎಂ ಸಲ್ಯೂಷನ್‌ ಅನ್ನು ಸಿಂಪಡಿಸಿ ಹಸಿಕಸ ಕೊಳೆತು ಗೊಬ್ಬರ ವನ್ನಾಗಿಸಲಾಗುತ್ತಿದ್ದು, ಇದರಿಂದ ಪರಿಸರದ ಮೇಲೆ ಯಾವುದೇ ರೀತಿಯ ದುಷ್ಪರಿಣಾಮ ಬೀರದಂತೆ, ಬಹಳ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲು ಸಜ್ಜು ಗೊಳಿಸಲಾಗಿದೆ.

ಉದ್ಘಾಟನೆ ವಿಳಂಬಕ್ಕೆ ಕಾರಣ: ಕಳೆದ ಫೆಬ್ರವರಿಯಲ್ಲಿ ಘಟಕದ ಕಟ್ಟಡ ಕಾಮಗಾರಿ ಮುಕ್ತಯವಾಗಿತ್ತು. ಆದರೆ, ಚುನಾವಣೆ ನೀತಿ ಸಂಹಿತೆ ಜಾರಿ ಯಲ್ಲಿದ್ದಿದ್ದರಿಂದ ಉದ್ಘಾಟನೆಗೆ ಅಡ್ಡಿಯಾಗಿ ವಿಳಂಬ ವಾಗಿತ್ತು. ಜೂ.15ರೊಳಗೆ ಸರಕಾರದ ಶಿಷ್ಟಾ ಚಾರದ ಅಡಿಯಲ್ಲಿ ಲೋಕಾರ್ಪಣೆ ಮಾಡಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.

ನಿರ್ವಹಣೆ ಹೇಗೆ ?
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 13 ಹಳ್ಳಿಗಳು ಬರಲಿದ್ದು, ಈಗಾಗಲೇ ಎಸ್‌ಬಿಎಂ ಯೋಜನೆಯಡಿಯಲ್ಲಿ ಮತ್ತು ದಾನಿಗಳ ಸಹಕಾರದಲ್ಲಿ ಕಸವಿಲೇವಾರಿ ಟ್ಯಾಕ್ಟರ್‌, ಮಾರುತಿ ಸುಪರ್‌ ಕ್ಯಾರಿ ವಾಹನ ಇದ್ದು, ಸ್ವ-ಸಹಾಯ ಸಂಘದ 6 ಜನ ಸದಸ್ಯರನ್ನು ಒಳಗೊಂಡಂತಹ ಸ್ವಚ್ಛತಾಗಾರರನ್ನು ಒಡಂಬಡಿಕೆ ಮೂಲಕ ನೇಮಿಸಿಕೊಂಡಿದ್ದು, ಪ್ರತಿ ಹಳ್ಳಿಯಿಂದ ಒಣ/ಹಸಿ ಕಸವನ್ನು ಸಂಗ್ರಹಿಸಿ, ವಾರದ 3 ದಿನ (ದಿನ ಬಿಟ್ಟು ದಿನ) ದಿನಚರಿ ಮೂಲಕ ವ್ಯವಸ್ಥಿತವಾಗಿ ಮತ್ತು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಗ್ರಾಮ ಪಂಚಾಯಿತಿ ಕ್ರಮವಹಿಸಲಾಗಿದೆ.

6 ತಿಂಗಳ ಹಿಂದೆ ಗ್ರಾಪಂಯೂ ಮೂಲ ಭೂತ ಸೌಕರ್ಯ ವಂಚಿತವಾಗಿತ್ತು. ಅಗತ್ಯ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಗ್ರಾಪಂನಲ್ಲಿದ್ದ ವರ್ಗ 1ರ ಸ್ವಂತ ಸಂಪನ್ಮೂಲವನ್ನು ಬಳಸಿ ಕೊಂಡು ಸುಸಜ್ಜಿತವಾದ ಹೈಟೆಕ್‌ ಗ್ರಂಥಾ ಲಯ ಮತ್ತು ತ್ಯಾಜ್ಯ ವಿಲೇವಾರಿ ಘಟಕವನ್ನು 2-3 ತಿಂಗಳಲ್ಲಿ ಪ್ರಾರಂಭಿಸಲು ಸಭೆಗಳನ್ನು ಕರೆದು ಸೂಕ್ತ ತೀರ್ಮಾನ ತೆಗೆದುಕೊಂಡು 4 ತಿಂಗಳ ಅವಧಿ ಯಲ್ಲಿ ಗ್ರಂಥಾಲಯ ಮತ್ತು ವಿಲೇವಾರಿ ಘಟಕವನ್ನು ನಿರ್ಮಾಣ ಮಾಡ ಲಾಗಿದೆ. ಈಗಾಗಲೇ ಗ್ರಂಥಾಲಯದಲ್ಲಿ
ಗ್ರಾಪಂ ವ್ಯಾಪ್ತಿಯ ನಾಗರೀಕರು ಮತ್ತು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳುತ್ತಿದ್ದು, ಜೂ.15ರ ನಂತರ ಕಸ ವಿಲೇವಾರಿ ಘಟವೂ ಕಾರ್ಯ ನಿರ್ವಹಿಸಲು  ಸ್ವಚ್ಛ ಗ್ರಾಪಂಯನ್ನಾಗಿಸಲು ನಾಗರೀಕರ ಸಹಕಾರ ನೀಡಬೇಕು.
● ಪ್ರಕಾಶ್‌.ಎಚ್‌, ಪಿಡಿಒ, ಜಾಲಿಗೆ ಗ್ರಾಪಂ

 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.