ನಾಳೆಯಿಂದ ಮಿಂಚಿನ ನೋಂದಣಿ

ಜನವರಿ 8 ರವರೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ನೋಂದಣಿ ಕಾರ್ಯ

Team Udayavani, Jan 5, 2020, 4:25 PM IST

5-January-120

ದೇವನಹಳ್ಳಿ:ವಿಧಾನಸಭಾ ಕ್ಷೇತ್ರಗಳ ಮತದಾರರ ವಿಶೇಷ ಪರಿಷ್ಕರಣೆ-2020ರ ಸಂಬಂಧ, ಜನವರಿ 6 ರಿಂದ 8ರವರೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮಿಂಚಿನ ನೋಂದಣಿ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ತಿಳಿಸಿದರು.

ಸಭೆ:ತಾಲೂಕಿನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ವಿಧಾನಸಭಾ ಕ್ಷೇತ್ರದ ಮತದಾರರ ವಿಶೇಷ ಪರಿಷ್ಕರಣೆ-2020, ರಾಷ್ಟ್ರೀಯ ಮತದಾರರ ದಿನಾಚರಣೆಯ ಪೂರ್ವಭಾವಿ ಸಿದ್ಧತೆ ಕೈಗೊಳ್ಳುವ ಬಗ್ಗೆ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯ ಸಂಬಂಧ ಸ್ವೀಕೃತವಾದ ಅರ್ಜಿಗಳ ವಿಲೇವಾರಿ ಮತ್ತು ಮತದಾನ ಕೇಂದ್ರಗಳನ್ನು ಗುರುತಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಚಾರ ಕಾರ್ಯ ಹಮ್ಮಿಕೊಳ್ಳಿ:ಮತದಾರರ ಪಟ್ಟಿಗಳ ಪರಿಷ್ಕರಣೆಯ ಭಾಗವಾಗಿ 2020 ರ ಜನವರಿ 6 ರಿಂದ 8 ರವರೆಗೆ ಎಲ್ಲಾ ಮತಗಟ್ಟೆಗಳಲ್ಲಿ ಮಿಂಚಿನ ನೋಂದಣಿ ಕಾರ್ಯವನ್ನು ಏರ್ಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮಿಂಚಿನ ನೋಂದಣಿ ಕಾರ್ಯ ನಡೆಯುವ ದಿನಗಳಂದು ಎಲ್ಲಾ ಬಿಎಲ್‌ಓಗಳು ತಪ್ಪದೇ ಮತಗಟ್ಟೆಗಳಲ್ಲಿ ಉಪಸ್ಥಿತರಿರಬೇಕು. ಮಿಂಚಿನ ನೋಂದಣಿ ಕಾರ್ಯವನ್ನು ಎಲ್ಲಾ ಕಾಲೇಜುಗಳಲ್ಲಿ ಏರ್ಪಡಿಸಿ, ಹೆಚ್ಚಿನ ಯುವ ಮತದಾರರ ನೋಂದಣಿಗೆ ಕ್ರಮ ವಹಿಸಬೇಕು ಹಾಗೂ ಮಿಂಚಿನ ನೋಂದಣಿ ಕಾರ್ಯ ನಡೆಯುವ ಬಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ-2020 ಸಂಬಂಧಿಸಿದಂತೆ, ಮತದಾರರ ಪಟ್ಟಿಗಳ
ಕರಡು ಪ್ರಕಟಣೆ ಮಾಡಿದ ಡಿಸೆಂಬರ್‌ 7 ರಿಂದ 23 ರವರೆಗೆ ಸ್ವೀಕೃತವಾದ ಎಲ್ಲಾ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಜನವರಿ 5 ರೊಳಗೆ ವಿಲೇವಾರಿ ಮಾಡಲು, ಅಂಗೀಕರಿಸಲಾದ/ಪುರಸ್ಕರಿಸಲಾದ ಅರ್ಜಿಗಳ ಮಾಹಿತಿ ಖಚಿತಪಡಿಸಿಕೊಂಡು ಮತದಾರರ ವಿವರವನ್ನು ತಂತ್ರಾಂಶದಲ್ಲಿ ಜನವರಿ 8 ರೊಳಗೆ ದಾಖಲಿಸಲು ಹಾಗೂ ಪೂರಕ ಪಟ್ಟಿಗಳನ್ನು ಒಳಗೊಂಡ ಅಂತಿಮ ಮತದಾರರ ಪಟ್ಟಿಗಳನ್ನು ಜನವರಿ 16 ರಂದು ಪ್ರಕಟಿಸಲು ಕ್ರಮ ಕೈಗೊಳ್ಳಬೇಕೆಂದರು.

ಸ್ಪರ್ಧಾ ಕಾರ್ಯಕ್ರಮ ಏರ್ಪಡಿಸಿ:10ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಈ ಬಾರಿಯ ಧ್ಯೇಯ, ಸದೃಢ ಪ್ರಜಾಪ್ರಭುತ್ವಕ್ಕಾಗಿ ಚುನಾವಣಾ ಸಾಕ್ಷರತೆ ಆಗಿರುತ್ತದೆ. ಜನವರಿ 25 ರಂದು ಜಿಲ್ಲೆಯಲ್ಲಿ ರಾಷ್ಟ್ರೀಯ ಮತದಾರರ ದಿವಸವನ್ನು ಎಲ್ಲಾ ಮತಗಟ್ಟೆಗಳಲ್ಲಿ, ತಾಲೂಕು ಕೇಂದ್ರಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಆಚರಿಸಬೇಕು ಹಾಗೂ ಹೊಸದಾಗಿ ನೋಂದಾಯಿಸಿದ ಮತದಾರರಿಗೆ ನೂತನ ಎಪಿಕ್‌ ಕಾರ್ಡ್ಗಳನ್ನು ವಿತರಿಸಬೇಕು.ಶಾಲಾ ಕಾಲೇಜುಗಳಲ್ಲಿ ಮತದಾರರ ದಿನಾಚರಣೆ ಕುರಿತ ಸ್ಪರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಜಗದೀಶ್‌. ಕೆ.ನಾಯ್ಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪುಷ್ಪಾ ರಾಯ್ಕರ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ, ತಾಲೂಕು ತಹಶೀಲ್ದಾರರು, ಶಿರಸ್ತೇದಾರರು ಉಪಸ್ಥಿತರರಿದ್ದರು.

ಟಾಪ್ ನ್ಯೂಸ್

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

7-uv-fusion

UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.