ದೇವನಹಳ್ಳಿ ತಹಶೀಲ್ದಾರ್ಗೆ 50 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್
Team Udayavani, Mar 27, 2022, 2:38 PM IST
ದೇವನಹಳ್ಳಿ: ಜಮೀನೊಂದರ ಪೋಡಿ ದುರಸ್ತಿಗೆ ನಿರ್ದೇಶನವಿದ್ದರೂ ನಿಗದಿತ ಅವಧಿಯೊಳಗೆ ಆದೇಶ ಪಾಲನೆ ಮಾಡಲು ವಿಫಲರಾದ ದೇವನಹಳ್ಳಿ ತಹಶೀಲ್ದಾರ್ಗೆ ಹೈಕೋರ್ಟ್ 50 ಸಾವಿರ ರೂ. ದಂಡ ವಿಧಿಸಿದೆ.
ನ್ಯಾಯಮೂರ್ತಿಗಳಾದ ನ್ಯಾ.ಬಿ.ವೀರಪ್ಪ ಮತ್ತು ಎಂ.ಜಿ. ಉಮಾ ಅವರಿದ್ದ ದ್ವಿಸದಸ್ಯ ಪೀಠವು ನ್ಯಾಯಾಂಗ ನಿಂದನೆ ಅಡಿಯಲ್ಲಿ 50 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. ತಾಲೂಕಿನ ಜಮೀನೊಂದರ ಸಂಬಂಧ ನಾರಾಯಣಸ್ವಾಮಿ ಎಂಬ ಅರ್ಜಿದಾರರು ಉಪ ವಿಭಾಗಾಧಿಕಾರಿ ಅವರ ಆದೇಶ ಪ್ರಶ್ನಿಸಿ ಕೋರ್ಟ್ನಲ್ಲಿ 2016ರಲ್ಲಿ ರಿಟ್ ಸಲ್ಲಿಸಿದ್ದು, ಜೂನ್, 2016ರಲ್ಲಿ ಪೋಡಿ ಮತ್ತು ದುರಸ್ತಿ ಕಾರ್ಯವನ್ನು 6 ತಿಂಗಳ ಒಳಗೆ ಮಾಡಲು ಕೋರ್ಟ್ ಮೊದಲಿಗೆ ನಿರ್ದೇಶನ ನೀಡಿದೆ. ಆದರೆ, ಕೋರ್ಟ್ ಆದೇಶ ಪಾಲನೆ ಮಾಡುವಲ್ಲಿ ಅಧಿಕಾರಿಗಳು ನಿರಾಸಕ್ತರಾಗಿದ್ದ ಕಾರಣ, ಪುನಃ ಅರ್ಜಿದಾರರು 2ನೇ
ರಿಟ್ ಅರ್ಜಿಯನ್ನು 2017ರಲ್ಲಿ ದಾಖಲು ಮಾಡಿ, ಶೀಘ್ರ ಪೋಡಿ ದುರಸ್ತಿ ಮಾಡುವಂತೆ ಮನವಿ ಸಲ್ಲಿದ್ದರು.
ಪ್ರಕರಣದ ವಿಚಾರಣೆ ಮಾಡಿದ ಏಕಸದಸ್ಯ ಪೀಠವು ಫೆ.2021ರಲ್ಲಿ ಆದೇಶ ನೀಡಿ ಶೀಘ್ರ ಆದೇಶ ಪಾಲನೆ ಮಾಡಲು ಸೂಚನೆ ನೀಡಿದೆ. ನ್ಯಾಯಾಲಯ ಆದೇಶ ದೃಢೀಕೃತ ಪ್ರತಿ ದೊರೆತ 2 ವಾರದ ಒಳಗೆ ದಂಡವನ್ನು
ವಾದಿಗಳಿಗೆ ಪಾವತಿ ಮಾಡಬೇಕು. ಇಲ್ಲದೇ ಇದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೋರ್ಟ್ ತಿಳಿಸಿದೆ.
ಇದನ್ನೂ ಓದಿ : ಭಾರತೀಯ ಸಮಾಜದಲ್ಲಿ ಸಂಸ್ಕೃತ ಭಾಷೆ ಕೊಡುಗೆ ಅಪಾರ: ರಾಜ್ಯಪಾಲ ಗೆಹ್ಲೋಟ್
ವಾದಿಗಳಿಗೆ ನೋಟಿಸ್ ಜಾರಿ ಮಾಡಿ ವಿವಾದಿತ ಜಮೀನಿನ ಪೋಡಿ ಮತ್ತು ದುರಸ್ತಿ ಕಾರ್ಯವನ್ನು ಮಾಡಲು ತಹಶೀಲ್ದಾರ್ 6 ತಿಂಗಳು ತಡ ಮಾಡಿದನ್ನು ಪ್ರಶ್ನಿಸಿ ಅರ್ಜಿದಾರರು ಡಿಸೆಂಬರ್ 2021ರಲ್ಲಿ ಪುನಃ
ಹೈಕೋರ್ಟ್ ಮೆಟ್ಟಿಲೇರಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣದ ವಿಚಾರಣೆ ಮಾಡಿದ ದ್ವಿಸದಸ್ಯ ಪೀಠವು ವಾದಿಗಳಿಗೆ 2016ರಿಂದ ಇಲ್ಲಿಯವರೆಗೂ ಸಾಕಷ್ಟು ಮಾನಸಿಕ ತೊಂದರೆ ಯುಂಟಾಗಿದ್ದು, ನ್ಯಾಯಾಲಯ ಆದೇಶ ಪಾಲನೆ ಮಾಡಲು ಅಧಿಕಾರಿ ಳು ಹಿಂದೆಟು ಹಾಕಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಗಮನಿಸಿ, ನ್ಯಾಯಾಂಗ ನಿಂದನೆ ಕಲಂ 11 ಮತ್ತು 12ರ ಅಡಿಯಲ್ಲಿ 50 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ