ಜನರ ಸಹಕಾರ ಮನೋಭವಾನೆಯಿದ್ದರೆ ಅಭಿವೃದ್ಧಿ


Team Udayavani, Aug 7, 2019, 3:00 AM IST

janara

ದೇವನಹಳ್ಳಿ: ಪ್ರತಿಯೊಬ್ಬರೂ ಸಹಕಾರ ಮನೋಭಾವವಿದ್ದರೆ ಅಭಿವೃದ್ಧಿ ಸಾಧ್ಯ. ಮೊದಲೆಲ್ಲ ಹಳ್ಳಿಗಳಲ್ಲಿ ಶಾಲೆ ನಿರ್ಮಾಣವಾಗಬೇಕಾದರೆ ಸ್ಥಳೀಯರು ಪರಸ್ಪರ ಸಹಕಾರ ಮನೋಭಾವನೆಯಿಂದ ಕೈ ಜೋಡಿಸಿ, ವಿಶೇಷ ಕಾಳಜಿ ವಹಿಸುತ್ತಿದ್ದರು ಎಂದು ಜಿಪಂ ಸದಸ್ಯ ಲಕ್ಷ್ಮಿನಾರಾಯಣಪ್ಪ ಹೇಳಿದರು. ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ಜೊನ್ನಹಳ್ಳಿ ಮಾರುತಿ ಪ್ರೌಢಶಾಲೆ ಆವರಣದಲ್ಲಿ ಶಾಸಕರ ವಿಶೇಷ ಅನುದಾನದಡಿ 20 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶಾಲಾ ಕೊಠಡಿಗಳ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದರು.

ಹಳ್ಳಿಗಳಲ್ಲಿ ಶಾಲೆಗಳು ಉಳಿದರೆ, ಈಗಿನ ಮಕ್ಕಳು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಲಿಕ್ಕೆ ಸಾಧ್ಯವಾಗುತ್ತದೆ. ಇತ್ತಿಚೆಗೆ ಗಾಳಿ, ಮಳೆಯಿಂದಾಗಿ ಮೇಲ್ಛಾವಣಿ ಹಾರಿ ಹೋಗಿ ಮಕ್ಕಳ ಕಲಿಕೆಗೆ ತೊಡಕಾಗಿದ್ದರಿಂದ ಶಾಸಕರ ವಿಶೇಷ ಅನುದಾನದಲ್ಲಿ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಶಾಲಾಭಿವೃದ್ಧಿ ಸಮಿತಿಯವರು ಸೇರಿದಂತೆ ಮುಖ್ಯಶಿಕ್ಷಕರು ವಿಶೇಷ ಕಾಳಜಿ ವಹಿಸಿ ಗುಣಮಟ್ಟ ಪರಿಶೀಲನೆ ಮಾಡಿಕೊಳ್ಳಬೇಕು. ಕೊಠಡಿಗಳು ಶಾಶ್ವತವಾಗಿರುವಂತೆ ಕಾಮಗಾರಿಯಾಗಬೇಕು ಎಂದರು.

ಹಿಂದಿನ ಕಾಲದಲ್ಲಿ ಶಾಲಾ ಕಟ್ಟಡಗಳು ಉತ್ತಮ ಗುಣಮಟ್ಟದಿಂದ ಕೂಡಿರುತ್ತಿದ್ದವು. 80 ವರ್ಷಗಳ ಹಿಂದೆ ನಿರ್ಮಾಣ ಮಾಡಿರುವ ಶಾಲೆಗಳು ನಮ್ಮಲ್ಲಿ ಇನ್ನೂ ಉತ್ತಮ ಸ್ಥಿತಿಯಲ್ಲಿವೆ. 20 ವರ್ಷಗಳ ಹಿಂದೆ ನಿರ್ಮಾಣ ಮಾಡಿರುವ ಕಟ್ಟಡಗಳು ನೆಲಕ್ಕುರುಳುವ ಸ್ಥಿತಿಗೆ ತಲುಪಿವೆ. ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಎಷ್ಟೇ ಅನುದಾನ ನೀಡಿದರೂ ಅದು ಸದುಪಯೋಗವಾಗಲಿದೆ ಎಂದರು.

ಮುಖಂಡ ದೊಡ್ಡಕುರುಬರಹಳ್ಳಿ ಹನುಮೇಗೌಡ ಮಾತನಾಡಿ, ನಮಗೆ ಅಗತ್ಯವಾಗಿರುವ ಎಲ್ಲಾ ವಸ್ತುಗಳನ್ನು ಕಾರ್ಖಾನೆಗಳಿಂದ ತಯಾರು ಮಾಡುತ್ತಾರೆ. ನಾವು ತಿನ್ನುವ ಅನ್ನವನ್ನು ಭೂಮಿಯಿಂದ ಬೆಳೆದುಕೊಳ್ಳುತ್ತೇವೆ. ಆದರೆ, ಜ್ಞಾನವನ್ನು ಎಲ್ಲಿಯೂ ಖರೀದಿ ಮಾಡಲಿಕ್ಕೆ ಆಗಲ್ಲ, ಯಾವ ಕಾರ್ಖಾನೆಗಳಿಂದಲೂ ತಯಾರು ಮಾಡಲಿಕ್ಕೆ ಸಾಧ್ಯವಿಲ್ಲ. ಅದು ಶಾಲೆಗಳಲ್ಲಿ ಕಲಿಯುವ ಸಂಸ್ಕಾರದಿಂದ ಮಾತ್ರ ಬರಲಿಕ್ಕೆ ಸಾಧ್ಯವಾಗುತ್ತದೆ.

ಆದ್ದರಿಂದ ಆಸ್ಪತ್ರೆಗಳ ಸಂಖ್ಯೆ ಹೆಚ್ಚಾಗುವುದರ ಬದಲಿಗೆ ಶಾಲೆಗಳು ಹೆಚ್ಚಾಗಬೇಕು. ಪೋಷಕರು ವಿಶೇಷ ಕಾಳಜಿವಹಿಸಬೇಕು. ಮುಂಬರುವ ದಿನಗಳಲ್ಲಿ ನಗರದಲ್ಲಿನ ಖಾಸಗಿ ಶಾಲೆಗಳಿಗಿಂತ ಗ್ರಾಮಾಂತರ ಪ್ರದೇಶಗಳಲ್ಲಿ ಶಾಲೆಗಳೇ ಮೇಲುಗೈ ಸಾಧಿಸಲಿವೆ ಎಂದರು. ಮುಖ್ಯಶಿಕ್ಷಕ ಕೃಷ್ಣಮೂರ್ತಿ, ಸಹಶಿಕ್ಷಕರು, ಸ್ಥಳೀಯ ಮುಖಂಡರು ಇದ್ದರು.

ಟಾಪ್ ನ್ಯೂಸ್

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

jio

Jio fiber,ಏರ್ ಫೈಬರ್ ಗ್ರಾಹಕರಿಗೆ 15 ಒಟಿಟಿ ಅಪ್ಲಿಕೇಷನ್‌

Minchu

Chincholi: ಸಿಡಿಲು ಬಡಿದು ಕೂಲಿ‌ ಕಾರ್ಮಿಕ ಮಹಿಳೆ‌ ಮೃತ್ಯು,ಪುತ್ರನಿಗೆ ಗಂಭೀರ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.