ದೇವಾಲಯ ಅಭಿವೃದ್ಧಿಗೆ ಭಕ್ತರ ಸಹಕಾರ ಅಗತ್ಯ


Team Udayavani, May 9, 2022, 2:23 PM IST

Untitled-1

ವಿಜಯಪುರ: ಕಾರ್ಯ ಸಿದ್ಧಿ, ಮನಸ್ಸಿಗೆ ನೆಮ್ಮದಿ, ಕೋರಿಕೆಯನ್ನು ಈಡೇರಿಸುವ ಶ್ರೀ ಬಯಲು ಬಸವೇಶ್ವರ ಸ್ವಾಮಿ ಕೃಪಾ ಕಟಾಕ್ಷದಿಂದ ದೇವಾಲ ಯದ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯು ತ್ತಿದ್ದು, ಭಕ್ತರ ಸಹಕಾರದಿಂದ ದೇವಾಲಯ ಮತ್ತಷ್ಟು ಅಭಿವೃದ್ಧಿ ಕಾಣಬೇಕಿದೆ ಎಂದು ಶ್ರೀ ಬಯಲು ಬಸವೇಶ್ವರಸ್ವಾಮಿ ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಾ. ಬಿ. ವಿಜಯಕುಮಾರ್‌ ಆರಾಧ್ಯ ತಿಳಿಸಿದರು.

ಪಟ್ಟಣದ ಚನ್ನರಾಯಪಟ್ಟಣ ವೃತ್ತದಲ್ಲಿರುವ ಶ್ರೀ ಬಯಲು ಬಸವೇಶ್ವರಸ್ವಾಮಿ ದೇವಾಲಯದ ಆವರ ಣದಲ್ಲಿ ಹಮ್ಮಿಕೊಂಡಿದ್ದ ಶ್ರೀ ಬಯಲು ಬಸವೇಶ್ವರಸ್ವಾಮಿ ದೇವಾಲಯ ಅಭಿವೃದ್ಧಿ ಸಮಿತಿ ಪ್ರಥಮ ವಾರ್ಷಿಕ ಸಭೆಯಲ್ಲಿ ದೇವಾಲಯದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿ, ದೇವರು ಮತ್ತು ದೇವರ ಮೇಲಿನ ನಂಬಿಕೆ ನಮ್ಮನ್ನು ಮತ್ತಷ್ಟು ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸುತ್ತದೆ. ಕೆಲವೊಮ್ಮೆ ದೇವರು ತನಗೆ ಆಗಬೇಕಾದ ಸೇವೆಯನ್ನು ಯಾವುದೋ ರೂಪದಲ್ಲಿ ಮಾಡಿಸಿಕೊಳ್ಳುವ ವಿಸ್ಮಯಕಾರಿ ಘಟನೆಗಳು ನಡೆದಿವೆ ಎಂದರು. ಬಾಲ್ಯದಿಂದಲೂ ಒಡನಾಟವಿರುವ ಈ ದೇವಾಲಯ ಮತ್ತು ದೇವರೊಂದಿಗೆ ಅವಿನಾಭಾವ ಸಂಬಂಧವಿದ್ದು, ದೇವಾಲಯ ಭಕ್ತರ ಪಾಲಿಗೆ ಮತ್ತಷ್ಟು ಶಾಂತಿ ನೆಮ್ಮದಿ ಕೊಡುವ ಧಾರ್ಮಿಕ ಕ್ಷೇತ್ರವಾಗಬೇಕು ಎಂದು ಆಶಿಸುತ್ತೇನೆ ಎಂದು ತಿಳಿಸಿದರು.

ವೇದ ಶಿಕ್ಷಣಕ್ಕೆ ಆದ್ಯತೆ: ದೇವಾಲಯದ ಪ್ರಧಾನ ಅರ್ಚಕ ಲೋಕೇಶ್‌ ಆರಾಧ್ಯ ಮಾತನಾಡಿ, ಅನೇಕ ಭಕ್ತಾದಿಗಳು ತಮ್ಮ ನೋವು, ಸಂಕಟ, ಕಷ್ಟಗಳನ್ನು ಪರಿಹರಿಸುವಂತೆ ದೇವರಲ್ಲಿ ಬಂದು ಬೇಡಿಕೊಳ್ಳುತ್ತಾರೆ. ಹೂವಿನ ಪ್ರಸಾದ ಕೇಳಿಕೊಳ್ಳುತ್ತಾರೆ. ಕಿವಿಯಲ್ಲಿ ಗುಟ್ಟಾಗಿ ತಮ್ಮ ಕೋರಿಕೆಯನ್ನು ಈಡೇರಿಸುವಂತೆ ಕೇಳಿಕೊಳ್ಳುತ್ತಾರೆ. ಬಸವಣ್ಣ ಎಲ್ಲರ ಸಂಕಷ್ಟಗಳನ್ನು ಪವಾಡ ಸದೃಶವಾಗಿ ಪರಿಹರಿಸಿದ್ದು, ಇಂತಹ ಘಟನೆಗಳಿಗೆ ಸಾಕ್ಷೀಭೂತನಾಗಿ ದೇವರ ಆರಾಧನೆ ಯಲ್ಲಿ ಮತ್ತಷ್ಟು ತೊಡಗಿಸಿಕೊಂಡು ವೇದ ಪಾಠಕ್ಕೆ ಬರುವ ಶಿಷ್ಯರಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿರುವುದಾಗಿ ತಿಳಿಸಿದರು.

ವೇದಾಧ್ಯಯನ ಕೇಂದ್ರ: ಅರ್ಚಕ ಬಸವರಾಜು ಮಾತ ನಾಡಿ, ತಾವು ವಿಧಿ ವತ್ತಾಗಿ ವೇದಾಧ್ಯಯನ ಮಾಡಿ ಕೊಂಡು ಬಂದಿದ್ದು, ನಮ್ಮ ಆಚರಣೆ, ಸಂಸ್ಕೃತಿ, ಪೂಜಾ ವಿಧಿ ವಿಧಾನಗಳ ಬಗ್ಗೆ ಸಂಪೂರ್ಣ ಶಿಕ್ಷಣ ನೀಡು ತ್ತಿದ್ದು, ಶ್ರೀ ಬಯಲು ಬಸವೇಶ್ವರ ದೇವಾಲಯ ಮುಂದೊಂದು ದಿನ ವೇದಾಧ್ಯಯನ ಕೇಂದ್ರವಾಗುವಂತೆ ಮಾಡುವ ಸಂಕಲ್ಪ ತೊಟ್ಟಿದ್ದೇನೆ. ಯಾವು ದೇ ಪೂಜೆಗಳನ್ನು ದೇವಾಲಯದಲ್ಲಿ ಸಂಭಾ ವನೆ ಪಡೆಯದೆ ಮಾಡಿಕೊಡುವ ಮೂಲಕ ಸ್ವಾಮಿಗೆ ತಮ್ಮ ಸೇವಾರ್ಥ ಸಲ್ಲಿಸುವುದಾಗಿ ತಿಳಿಸಿದರು.

ಗುರುಕುಲ ಪದ್ಧತಿ ಪರಿಚಯ: ದೇವಾಲಯ ಸಮಿತಿ ಯ ಉಪಾಧ್ಯಕ್ಷೆ ಅಶ್ವಿ‌ನಿ ಮಾತನಾಡಿ, ಮುಂದಿನ ವರ್ಷ ದಿಂದ ಪ್ರತಿ ಬೇಸಿಗೆಯ ರಜೆಯಲ್ಲಿ ಮಕ್ಕಳಿಗೆ ಗುರುಕುಲ ಪದ್ಧತಿಯ ಪರಿಚಯ, ದೇವರ ಶ್ಲೋಕ, ಪೂಜೆ, ಆಚರಣೆ, ಭಕ್ತಿ ಭಾವ, ಸಂಸ್ಕೃತ ಅಧ್ಯಯನ ನಡೆಸುವ ಬೇಸಿಗೆ ಶಿಬಿರ ಆಯೋಜಿಸುವ ಉದ್ದೇಶ ಹೊಂದಿರುವು ದಾಗಿ ತಿಳಿಸಿದರು. ಸಮಿತಿ ಕಾರ್ಯಾಧ್ಯಕ್ಷೆ ಸುಜಾತ ವಿಜ ಯ ಕುಮಾರ್‌ ಆರಾಧ್ಯ, ಗೌರವಾಧ್ಯಕ್ಷರಾದ ಡಾ. ಬಿ. ಕುಮಾರ ಸ್ವಾಮಿ, ಖಜಾಂಚಿ ಗಿರಿಜಾ ಲೋಕೇಶ್, ಭೂ ದಾನಿ ರಾಜೇಶ್‌, ನಿರ್ಮಲಾ, ಮಂಜುನಾಥ್‌, ಗಣೇಶ್‌, ಕುಮಾರ್‌ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.