ದೌರ್ಜನ್ಯ ಪ್ರಕರಣ ಶೀಘ್ರ ಇತ್ಯರ್ಥಗೊಳಿಸಿ; 24ಗಂಟೆಯಲ್ಲಿ ಕೇಸ್‌ ದಾಖಲಿಸಿ

ಫ‌ಲಾನುಭವಿಗಳ ಆಯ್ಕೆಗೆ ನಿಗದಿತ ಮಾನದಂಡಗಳನ್ನು ಅನುಸರಿಸಬೇಕು

Team Udayavani, Oct 7, 2022, 1:22 PM IST

ದೌರ್ಜನ್ಯ ಪ್ರಕರಣ ಶೀಘ್ರ ಇತ್ಯರ್ಥಗೊಳಿಸಿ; 24ಗಂಟೆಯಲ್ಲಿ ಕೇಸ್‌ ದಾಖಲಿಸಿ

ದೇವನಹಳ್ಳಿ: ಪ.ಜಾತಿ, ಪಂಗಡಗಳ ಮೇಲೆ ದೌರ್ಜನ್ಯ ಪ್ರಕರಣಗಳು ನಡೆದ 24 ಗಂಟೆಗಳಲ್ಲಿ ಪ್ರಕರಣ ದಾಖಲು ಮಾಡುವುದರೊಂದಿಗೆ, ಪ್ರಕರಣದ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ಕ್ರಮ ಕೈಗೊಂಡು ಪರಿಹಾರ ಒದಗಿಸುವ ಮೂಲಕ ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ 3ನೇ ತ್ತೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾದ ಕೂಡಲೇ ಪ್ರಥಮ ವರ್ತಮಾನ ವರದಿಯನ್ನು ಹಾಗೂ ಚಾರ್ಜ್‌ಶೀಟ್‌ ಸಲ್ಲಿಸಲು ಬಾಕಿ ಇರುವ ಪ್ರಕರಣಗಳಿಗೆ ಚಾರ್ಜ್‌ಶೀಟ್‌ ವರದಿಯನ್ನು ಜಿಲ್ಲಾಡಳಿತಕ್ಕೆ ಹಾಗೂ ಜಿಲ್ಲಾ, ತಾಲೂಕು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಲು ಕ್ರಮವಹಿಸುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ಅರ್ಹ ಫ‌ಲಾನುಭವಿಗಳಿಗೆ ಸೌಲಭ್ಯ ತಲುಪಿಸಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಕಾರ್ಯಕ್ರಮಗಳ ಅಡಿಯಲ್ಲಿ ಅರ್ಹ ಫ‌ಲಾನುಭವಿಗಳನ್ನು ಗುರುತಿಸಿ, ಸೌಲಭ್ಯಗಳನ್ನು ತಲುಪಿಸಬೇಕು ಎಂದು ಹೇಳಿದರಲ್ಲದೆ, ಫ‌ಲಾನುಭವಿಗಳಿಗೆ ವಿವಿಧ ಯೋಜನೆಗಳನ್ನು ತಲುಪಿಸುವ ಮುನ್ನ, ಫ‌ಲಾನುಭವಿಗಳ ಆಯ್ಕೆಗೆ ನಿಗದಿತ ಮಾನದಂಡಗಳನ್ನು ಅನುಸರಿಸಬೇಕು ಎಂದರು.

ಫ‌ಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ: ಡಾ. ಬಿ. ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ವತಿಯಿಂದ ನೀಡಲಾಗುತ್ತಿರುವ ಸಾಲ-ಸೌಲಭ್ಯಗಳನ್ನು ಜರೂರಾಗಿ ಮಂಜೂರು ಮಾಡಬೇಕು. ಹಕ್ಕುಪತ್ರ ವಿತರಣೆ ಬಾಕಿ ಇರುವ ಫ‌ಲಾನುಭವಿಗಳಿಗೆ ನಿಯಮಾನುಸಾರ ಹಕ್ಕುಪತ್ರಗಳನ್ನು ವಿತರಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಅಧಿಕಾರಿಗಳಿಗೆ ನೋಟಿಸ್‌ ನೀಡಿ: ಸಾರ್ವಜನಿಕರು ಭೇಟಿ ನೀಡುವ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಜಿಲ್ಲೆಯ ಎಲ್ಲಾ ತಹಶಿಲ್ದಾರ್‌ ಕಚೇರಿಗಳಲ್ಲಿ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುವಂತೆ ಸೂಚಿಸಿರಲ್ಲದೆ, ಪೂರ್ವಾನುಮತಿ ಪಡೆಯದೇ ಸಭೆಗೆ ಗೈರಾದ
ಅಧಿಕಾರಿಗಳಿಗೆ ನೋಟಿಸ್‌ ನೀಡುವಂತೆ ಸಮಾಜ ಕಲ್ಯಾಣಾಧಿಕಾರಿಗೆ ತಿಳಿಸಿದರು. ಅಪರ ಜಿಲ್ಲಾಧಿಕಾರಿ ವಿಜಯಾ ಈ.ರವಿಕುಮಾರ್‌, ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ, ಡಿವೈಎಸ್‌ಪಿ ನಾಗರಾಜ್‌, ಸೇರಿದಂತೆ ಎಲ್ಲಾ ತಾಲೂಕುಗಳ ತಹಶೀಲ್ದಾರ್‌ಗಳು, ಡಿವೈಎಸ್ಪಿ, ಸಂಬಂಧಿಸಿದ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖ್ಯಸ್ಥರು, ಸದಸ್ಯರು ಹಾಗೂ ಕಾರ್ಯಕರ್ತರು ಇದ್ದರು.

ಕಠಿಣ ಕಾನೂನು ಕ್ರಮ ಜರುಗಿಸಿ:ಡೀಸಿ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿರುದ್ಧದ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ತಾಲೂಕುಗಳಲ್ಲಿ ನಿಗದಿತ ಸಮಯಕ್ಕೆ ನಿಯಮಿತವಾಗಿ ಜಾಗೃತಿ ಹಾಗೂ ಉಸ್ತುವಾರಿ ಸಮಿತಿಯ ಸಭೆಗಳನ್ನು ನಡೆಸಬೇಕು. ಸಭೆಗಳನ್ನು ನಡೆಸುವುದರಿಂದ ಹಲವಾರು ದೌರ್ಜನ್ಯ ದಂತಹ ಸಮಸ್ಯೆಗಳನ್ನು ತಳಮಟ್ಟದಲ್ಲಿಯೇ ಪರಿಹರಿಸಬಹುದುದಾಗಿದೆ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್‌.ಲತಾ ಸಲಹೆ ನೀಡಿದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.