ಬಡವರು, ರೈತರಿಗೆ ಹಕ್ಕುಪತ್ರ ವಿತರಣೆ

ನನೆಗುದಿಗೆ ಬಿದ್ದಿದ್ದ ಪ್ರಕರಣ ಇತ್ಯರ್ಥ | ಶಾಸಕ ನಾರಾಯಣಸ್ವಾಮಿಯಿಂದ ಹಕ್ಕುಪತ್ರ ಹಂಚಿಕೆ

Team Udayavani, Jul 26, 2019, 3:10 PM IST

br-tdy-3

ದೇವನಹಳ್ಳಿ: ತಾಲೂಕಿನಲ್ಲಿ ನನೆಗುದಿಗೆ ಬಿದ್ದದ್ದ ಸಾಗುವಳಿ ಹಕ್ಕು ಪತ್ರ ವಿತರಣೆ ಪ್ರಕರಣಕ್ಕೆ ಪರಿಹಾರ ಕಂಡುಕೊಳ್ಳಲಾಗಿದೆ. ತಾಲೂಕಿನ ಬಡವರು ಹಾಗೂ ಸರ್ಕಾರಿ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದ ರೈತರಿಗೆ ಸಾಗುವಳಿ ಹಕ್ಕುಪತ್ರ ನೀಡುವ ಮೂಲಕ ಶಾಶ್ವತ ಪರಿಹಾರ ನೀಡಲಾಗಿದೆ ಎಂದು ಶಾಸಕ ಎಲ್.ಎನ್‌.ನಾರಾಯಣಸ್ವಾಮಿ ಹರ್ಷ ವ್ಯಕ್ತಪಡಿಸಿದರು.

ನಗರದ ಮಿನಿವಿಧಾನಸೌಧ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸಾಗುವಳಿ ಚೀಟಿ ಮತ್ತು 94ಸಿಯಲ್ಲಿ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಾಶ್ವತ ಪರಿಹಾರ: ಹಲವು ವರ್ಷಗಳಿಂದ ಬಾಕಿ ಉಳಿದಿರುವ 35 ಸಾಗುವಳಿ ಹಕ್ಕುಪತ್ರ ಹಾಗೂ ಮನೆಗಳಲ್ಲಿ ವಾಸ ಮಾಡಿಕೊಂಡು ಇದ್ದ 50 ಫಲಾನುಭವಿಗಳಿಗೆ 94ಸಿ ಯಲ್ಲಿ ಹಕ್ಕುಪತ್ರ ನೀಡಲಾಗಿದೆ. 1300 ಜನರಿಗೆ 94ಸಿ ಅಡಿಯಲ್ಲಿ ಹಕ್ಕುಪತ್ರ ಸಿದ್ಧಪಡಿಸಲಾಗಿದೆ. ಇಷ್ಟು ಜನರಿಗೂ ಶಾಶ್ವತ ಪರಿಹಾರ ಸಿಗುವಂತೆ ಮಾಡಲಾಗಿದೆ. ಮುಖ್ಯಮಂತ್ರಿ ಕುಮಾರ ಸ್ವಾಮಿ ಸರ್ಕಾರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಅದರಲ್ಲೂ ಮಾಜಿ ಸಿಎಂ ಕುಮಾರಸ್ವಾಮಿ ನುಡಿದಂತೆ ನಡೆದಿದ್ದಾರೆ. ಇನ್ನು 8-10 ತಿಂಗಳು ಸರ್ಕಾರ ಮುಂದುವರೆದಿದ್ದರೆ ಮಾದರಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗುತ್ತಿದ್ದರು. ಯಾವುದೇ ಕಾರಣಕ್ಕೂ ಒಂದು ಇಂಚು ಜಮೀನನ್ನು ಮಾರಾಟ ಮಾಡಬೇಡಿ. ಮಾರಾಟ ಮಾಡಿಕೊಂಡವರ ಸ್ಥಿತಿ ಯಾವ ರೀತಿ ಇದೆ ಎಂಬುವುದು ನನಗೆ ತಿಳಿದಿದೆ ಎಂದು ಹೇಳಿದರು.

ಉಳಿದವರಿಗೆ ಶೀಘ್ರ ಹಕ್ಕುಪತ್ರ: ಶಾಸಕನಾಗಿ 14 ತಿಂಗಳು ಆಗಿದೆ. 170 ಕೋಟಿ ಅನುದಾನವನ್ನು 2 ತಿಂಗಳಿನಲ್ಲಿ ಮಂಜೂರು ಮಾಡಿಸಿಕೊಂಡು ಬಂದಿದ್ದೇನೆ. ಮುಖ್ಯ ಮಂತ್ರಿ ಪರಿಹಾರ ನಿಧಿಯಲ್ಲಿ ವಿಧಾನ ಮಂಡಲ ಅಧಿವೇಶನದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ 120 ಕೋಟಿ ಮಂಜೂರು ಮಾಡಿದ್ದೇನೆ ಎಂದು ಹೇಳಿದ್ದಾರೆ. ಅದರಂತೆ ತಾಲೂಕಿನಲ್ಲಿ ಹೆಚ್ಚಿನ ಮುಖ್ಯಮಂತ್ರಿ ಪರಿಹಾರ ನಿಧಿ ತಂದಿದ್ದೇನೆ. ತಾಲೂಕು ಕಚೇರಿಗೆ ಜನ ಅಲೆದಾಡದಂತೆ ತಕ್ಷಣ ಕೆಲಸಗಳು ಆಗುವಂತೆ ಆಗ ಬೇಕು. ಪಾರದರ್ಶಕವಾಗಿ ಸಾಗುವಳಿ ಹಕ್ಕುಪತ್ರವನ್ನು ನೀಡುತ್ತಿದ್ದೇವೆ. ಇದರಿಂದ ಬಡ ಜನರಿಗೆ ಹೆಚ್ಚಿನ ಅನುಕೂಲವಾಗಿದೆ ಎಂದು ಹೇಳಿದರು.

ಸಮಗ್ರ ಅಭಿವೃದ್ಧಿಯ ಗುರಿ: ನನ್ನ ಅವಧಿಯಲ್ಲಿ ಮಾಡಿರುವ ಕೆಲಸಗಳು ನನಗೆ ತೃಪ್ತಿ ತಂದಿದೆ. ನನಗೆ ಯಾವುದೇ ಆಸೆ ಆಮಿಷಗಳಿಲ್ಲ ತಾಲೂಕಿನ ಸರ್ವತೋಮುಖ ಅಭಿವೃದ್ದಿಯೇ ನನ್ನ ಗುರಿಯಾಗಿದೆ. ಯಾವುದೇ ಅಪಪ್ರಚಾರಗಳಿಗೆ ಕಿವಿಕೊಡಬೇಡಿ ತಾಲೂಕಿನ ಜನ ಶಾಂತಿ ನೆಮ್ಮದಿಯಿಂದ ಬಾಳಬೇಕು. ಯಾವುದೇ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ನೋಡಿಕೊಳ್ಳಬೇಕು. ನಿಮ್ಮ ಸಮಸ್ಯೆ ಇದ್ದರೆ ನೇರವಾಗಿ ನನ್ನ ಬಳಿ ಬನ್ನಿ ಬಗೆಹರಿಸಿಕೊಡಲಾಗುತ್ತದೆ. 40 ಕಿ.ಮೀ.ಗಳ ರಸ್ತೆಯನ್ನು ಮಂಜೂರು ಮಾಡಿಸಿಕೊಂಡು ಬಂದಿದ್ದೇನೆ ಎಂದರು.

ತಹಶೀಲ್ದಾರ್‌ ಕೇಶವಮೂರ್ತಿ, ಗ್ರೇಡ್‌-2 ತಹಶೀಲ್ದಾರ್‌ ಅನಿಲ್ ಕುಮಾರ್‌, ಆರ್‌.ಐ. ಚಂದ್ರ ಶೇಖರಯ್ಯ, ಪುರಸಭೆ ಸದಸ್ಯ ಎಸ್‌. ನಾಗೇಶ್‌, ಜೆಡಿಎಸ್‌ ಕಾರ್ಯಾಧ್ಯಕ್ಷ ಆರ್‌.ಮುನೇಗೌಡ, ಕುಂದಾಣ ಹೋಬಳಿ ಜೆಡಿಎಸ್‌ ಅಧ್ಯಕ್ಷ ಚಂದ್ರೇಗೌಡ, ತಾಪಂ ಸದಸ್ಯ ಕಾರಹಳ್ಳಿ ಶ್ರೀನಿವಾಸ್‌, ಮನಗೊಂಡಹಳ್ಳಿ ಜಗದೀಶ್‌, ಹಾಪ್‌ಕಾಮ್ಸ್‌ ನಿರ್ದೇಶಕ ಹುರುಳುಗುರ್ಕಿ ಶ್ರೀನಿವಾಸ್‌, ವಿಶ್ವನಾಥಪುರ ಗ್ರಾಪಂ ಅಧ್ಯಕ್ಷ ರಾಮ ಮೂರ್ತಿ, ಬೇಕರಿ ಮಂಜುನಾಥ್‌, ಕೋರಮಂಗಲ ವೀರಪ್ಪ, ಕಗ್ಗಲಹಳ್ಳಿ ಗುರಪ್ಪ, ಸಿಆರ್‌ ಪಟ್ಣ ಹೋಬಳಿ ಅಧ್ಯಕ್ಷ ಮುನಿರಾಜು, ರೆಡ್ಡಿಹಳ್ಳಿ ಮುನಿರಾಜು, ಬಿಜ್ಜವಾರ ಆನಂದ್‌, ಕಾರಹಳ್ಳಿ ಮುನಿಕೃಷ್ಣಪ್ಪ ಇದ್ದರು.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.