ಸಚಿವರು, ಶಾಸಕರು ಹಸು ದತ್ತು ಸ್ವೀಕಾರ ಮಾಡಲಿ


Team Udayavani, Nov 30, 2022, 1:32 PM IST

TDY-6

ನೆಲಮಂಗಲ: ಪುಣ್ಯಕೋಟಿ ಹಸು ದತ್ತು ಸ್ವೀಕಾರ ಯೋಜನೆಯನ್ನು ಸಿಎಂ ಜಾರಿಗೊಳಿ ಸಿದ್ದು, ಚಿತ್ರನಟ ಸುದೀಪ್‌ 31 ಹಸು ದತ್ತು ತೆಗೆದುಕೊಂಡಿದ್ದಾರೆ. ಅದರಂತೆ ರಾಜ್ಯದ ಸಚಿವರು, ಶಾಸಕರು ಹಸುಗಳನ್ನು ದತ್ತು ಸ್ವೀಕಾರ ಮಾಡಬೇಕು ಎಂದು ಪಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್‌ ಸಲಹೆ ನೀಡಿದರು.

ತಾಲೂಕಿನ ತ್ಯಾಮಗೊಂಡ್ಲು ಹೋಬಳಿಯ ಕೊಡಿಗೇಹಳ್ಳಿಯಲ್ಲಿ ಜಿಲ್ಲೆಗೊಂದು ಗೋಶಾಲೆ ಪ್ರಾರಂಭಿಸುವ ಕಾರ್ಯಕ್ರಮದಡಿ ಸ್ಥಾಪಿಸಿರುವ ಜಿಲ್ಲಾಮಟ್ಟದ ಸರ್ಕಾರಿ ಗೋಶಾಲೆ ಉದ್ಘಾಟಿಸಿ ಮಾತನಾಡಿದ ಅವರು, ಕೃಷಿ ಪ್ರಧಾನವಾಗಿರುವ ಭಾರತ ದೇಶದಲ್ಲಿ ಹಸುಗಳಿಗೆ ಮಹತ್ವದ ಸ್ಥಾನಮಾನವಿದೆ. ಪ್ರಧಾನಿ ಮೋದಿ, ಬಿ.ಎಸ್‌ .ಯಡಿಯೂರಪ್ಪರ ಆಸೆಯಿಂದ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಜಾರಿಗೊಂಡಿದೆ. ಇದರಿಂದ ರಾಜ್ಯದಲ್ಲಿ 30 ಸಾವಿರಕ್ಕೂ ಅಧಿಕ ಹಸುಗಳ ರಕ್ಷಣೆ ಮಾಡಲಾಗಿದೆ ಎಂದರು.

ಸಚಿವ ಸುಧಾಕರ್‌ ಮತ್ತು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅವರು ಕೂಡ ಹಸು ದತ್ತು ಪಡೆದು ಯೋಜನೆಗೆ ಕೈಜೋಡಿಸಬೇಕು. ಜಾನುವಾರುಗಳ ಚರ್ಮಗಂಟು ಕಾಯಿಲೆ ನಿಯಂತ್ರಣ ಹಾಗೂ ನಿವಾರಣೆಗೆ ತ್ವರಿತ ಕ್ರಮವಹಿಸಲು ಸಿಎಂ 13 ಕೋಟಿ ರೂ.ಹಣಕಾಸು ಬಿಡುಗಡೆ ಮಾಡಿದ್ದಾರೆ ಎಂದರು.

ಹೈನುಗಾರಿಕೆಗೆ ಉತ್ತೇಜನ: ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಮಾತನಾಡಿ, ಜಾನು ವಾರುಗಳ ಒಡನಾಟದಿಂದ ದಯೆ, ಪ್ರೀತಿ, ವಿಶ್ವಾಸ, ಮಾನವೀಯ ಗುಣಗಳ ಬೆಳೆವಣಿಗೆ ಯಾಗುತ್ತದೆ. ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಗೋಶಾಲೆ ಸ್ಥಾಪನೆಯಾಗುತ್ತಿವೆ. ಜಾನುವಾರು ಗಳ ಆರೋಗ್ಯ ಸಂರಕ್ಷಣೆ ಹಾಗೂ ಹೈನುಗಾರಿಕೆಗೆ ಸರ್ಕಾರ ಉತ್ತೇಜನ ನೀಡುತ್ತಿದೆ ಎಂದರು.

ಗುಣಮಟ್ಟ ಕಾಯ್ದುಕೊಳ್ಳಿ: ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ ಎಲ್ಲಾ ಗೋಶಾಲೆ ನಿರ್ಮಾಣಕ್ಕೆ ಒಂದೇ ಮಾದರಿಯ ವಿನ್ಯಾಸ ರೂಪಿಸಿಕೊಳ್ಳಬೇಕು. ಬೇರೆ ಬೇರೆ ಮಾದರಿಯ ವಿನ್ಯಾಸಗಳಿಗೆ ಅವಕಾಶ ನೀಡಬಾರದು. ಗುಣಮಟ್ಟ ಕಳಪೆಯಾಗ ದಂತೆ ನಿಗಾವಹಿಸ ಬೇಕು. ಹಸುಗಳ ಮಲಗುವ ನೆಲ ಹಾಸಿಗೆ ಕಲ್ಲುಗಳನ್ನು ಬಳಸಿ, ಸಿಮೆಂಟ್‌ ಹಾಕಬೇಡಿ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಆಯುಕ್ತೆ ಎಸ್‌. ಅಶ್ವತಿ ಮತ್ತು ಅಧಿಕಾರಿಗಳಿಗೆ ಸಚಿವ ಪ್ರಭು ಚವ್ಹಾಣ್‌ ಸೂಚಿಸಿದರು.

ಶಾಸಕ ಡಾ.ಕೆ.ಶ್ರೀನಿವಾಸ ಮೂರ್ತಿ, ಮಾಜಿ ಶಾಸಕ ನಾಗರಾಜು, ಎನ್‌ಪಿಎ ಅಧ್ಯಕ್ಷ ಎಸ್‌. ಮಲ್ಲಯ್ಯ, ಬಿಎಂಟಿಸಿ ನಿರ್ದೇಶಕ ಭೃಂಗೀಶ, ಕೊಡಿಗೇಹಳ್ಳಿ ಗ್ರಾಪಂ ಅಧ್ಯಕ್ಷೆ ಕೆ.ಆರ್‌.ಗಂಗಮ್ಮ ಚನ್ನೇಗೌಡ, ಉಪಾಧ್ಯಕ್ಷ ಎ.ಎಚ್‌. ಅಂಜನಮೂರ್ತಿ, ಎಸ್‌.ಅಶ್ವತಿ, ಡಾ.ಮಂಜುನಾಥ ಎಸ್‌.ಪಾಳೇಗಾರ, ಜಿಲ್ಲಾಧಿಕಾರಿ ಆರ್‌.ಲತಾ, ಜಿಪಂ ಸಿಇಒ ಕೆ. ರೇವಣಪ್ಪ, ಉಪವಿಭಾಗಾಧಿಕಾರಿ ತೇಜಸ್‌ ಕುಮಾರ, ತಹಶೀಲ್ದಾರ್‌ ಮಂಜುನಾಥ, ಡಾ. ಜಿ.ಎಂ. ನಾಗರಾಜ, ಸಹಾಯಕ ನಿರ್ದೇಶಕ ಡಾ.ಸಿದ್ದಪ್ಪ, ಬಿಜೆಪಿ ಜಿಲ್ಲಾಉಪಾಧ್ಯಕ್ಷ ಹೊಂಬಯ್ಯ, ಮುಖಂಡ ಶಶಿಧರ್‌, ಗಿರೀಶ್‌, ಡಾ.ಎಚ್‌.ಎಂ. ಶಿವಪ್ರಸಾದ್‌ ಇದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.